ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ಬಿ.ಎಸ್ ಮಂಜುನಾಥ್ ಅಧಿಕಾರ ಸ್ವೀಕಾರ.

by | 16/03/24 | ಶಿಕ್ಷಣ

ಚಳ್ಳಕೆರೆ: ನಗರದ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ಬಿಎಸ್ ಮಂಜುನಾಥ್ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಾಲೂಕಿನ ವಾಲ್ಮೀಕಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.


ನಗರದ ಕಾಲೇಜು ಆವರಣದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನೂತನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಕಾಲೇಜು ವಿಶ್ವವಿದ್ಯಾನಿಲಯದ ಹಂತದಲ್ಲಿ ಅತ್ಯಂತ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಎರಡನೇ ದೊಡ್ಡ ಕಾಲೇಜು ಎಂಬ ಕೀರ್ತಿ ಪಡೆದಿದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ನಗರ ಹಾಗೂ ಹೋಬಳಿ ಮಟ್ಟದ ವಿದ್ಯಾರ್ಥಿಗಳು ಇಲ್ಲಿ ಶೈಕ್ಷಣಿಕ ಅಭ್ಯಾಸ ನಡೆಸುತ್ತಿದ್ದಾರೆ ಶೈಕ್ಷಣಿಕವಾಗಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಾಲೇಜು ಹೊಂದಿದ್ದು ನಾನು ಕಾಲೇಜಿನ ಪ್ರಾಂಶುಪಾಲನಾಗಿ ಅಧಿಕಾರದಲ್ಲಿರುವಷ್ಟು ದಿನ ಪ್ರಾಮಾಣಿಕವಾಗಿ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ ಈಗಾಗಲೇ ಕ್ಲಸ್ಟರ್ ವಿಶ್ವವಿದ್ಯಾನಿಲಯ ಸ್ಥಾಪಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಪದವಿ ಹಾಗೂ ಇತಿಹಾಸ ,ಸಮಾಜಶಾಸ್ತ್ರ, ಕನ್ನಡ ,ಬಿಸಿಎ, ನೂತನವಾಗಿ ಪ್ರಾರಂಭಿಸುತ್ತಿರುವ ಅರ್ಥಶಾಸ್ತ್ರ ,ವಿಭಾಗ ಸೇರಿದಂತೆ ಸ್ನಾತಕೋತ್ತರ ಪದವಿಗಳಿದ್ದು ಕಾಲೇಜಿನ ಅಭಿವೃದ್ಧಿಗೆ 8 ಕೋಟಿ ಹಣ ಬಿಡುಗಡೆಯಾಗಿದ್ದು ಶಾಸಕ ಟಿ ರಘು ಮೂರ್ತಿಯವರ ಸಲಹೆ ಸೂಚನೆಯ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶವನ್ನು ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ಸಿಟಿ ವೀರೇಶ್ ಮಾತನಾಡಿ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಬಿ ಎಸ್ ಮಂಜುನಾಥ್ ರವರು ಅತ್ಯುತ್ತಮ ಆಡಳಿತ ನಿರ್ವಹಿಸುವ ವಿಶ್ವಾಸವಿದ್ದು ಈಗಾಗಲೇ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿರುವುದರಿಂದ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಾರೆ ಅವರ ಕಾರ್ಯ ವೈಖರಿ ಈಗಾಗಲೇ ಮೊಳಕಾಲ್ಮೂರು ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಜನಮನ್ನಣೆ ಗಳಿಸಿದ್ದು ಕಾಲೇಜಿನ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸುಧಾರಿಸುವಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದು ಆಶಿಸಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜಿ ಟಿ ವೀರಭದ್ರ ಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ ಅತ್ಯುತ್ತಮ ಸೊಸಜ್ಜಿತ ಕಟ್ಟಡವನ್ನು ಹೊಂದಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ ಮುಂದಿನ ಶೈಕ್ಷಣಿಕ ಬೆಳವಣಿಗೆಗಾಗಿ ಉತ್ತಮ ಗ್ರಂಥಾಲಯ ಸಂಶೋಧನಾ ಕೊಠಡಿಗಳು ಹಾಗೂ ಕ್ಲಸ್ಟರ್ ಮಟ್ಟದ ವಿಶ್ವವಿದ್ಯಾನಿಲಯವಾಗಿ ರೂಪುಗೊಳ್ಳಲು ಎಲ್ಲಾ ರೀತಿಯಿಂದಲೂ ಉತ್ತಮವಾಗಿದ್ದು ಮಂಜುನಾಥ್ ರವರ ಅಧಿಕಾರಾವಧಿಯಲ್ಲಿ ಕಾಲೇಜು ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ನೌಕರರ ಸಂಘದ ಸದಸ್ಯರಾದ ಹೆಚ್ಓ ರಾಜಣ್ಣ ಮಹಾಂತಣ್ಣ ಎಲ್ಐಸಿ ತಿಪ್ಪೇಸ್ವಾಮಿ ಕೆಪಿಟಿ ತಿಪ್ಪೇಸ್ವಾಮಿ ಬೆಸ್ಕಾಂ ನಾಗರಾಜ್ ಜಯಣ್ಣ ತಿಪ್ಪೇರುದ್ರಪ್ಪ ಪಿ ನಾಗರಾಜ್ ರಾಜು ಸುರೇಶ್ ಸಿದ್ದೇಶ್ ರಘುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page