ಚಳ್ಳಕೆರೆ: ನಗರದ ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ಬಿಎಸ್ ಮಂಜುನಾಥ್ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ತಾಲೂಕಿನ ವಾಲ್ಮೀಕಿ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಗರದ ಕಾಲೇಜು ಆವರಣದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ನೂತನ ಪ್ರಾಂಶುಪಾಲ ಬಿಎಸ್ ಮಂಜುನಾಥ್ ದಾವಣಗೆರೆ ವಿಶ್ವವಿದ್ಯಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಕಾಲೇಜು ವಿಶ್ವವಿದ್ಯಾನಿಲಯದ ಹಂತದಲ್ಲಿ ಅತ್ಯಂತ ಹೆಚ್ಚು ವಿದ್ಯಾರ್ಥಿಗಳನ್ನು ಒಳಗೊಂಡ ಎರಡನೇ ದೊಡ್ಡ ಕಾಲೇಜು ಎಂಬ ಕೀರ್ತಿ ಪಡೆದಿದೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೇರಿದಂತೆ ನಗರ ಹಾಗೂ ಹೋಬಳಿ ಮಟ್ಟದ ವಿದ್ಯಾರ್ಥಿಗಳು ಇಲ್ಲಿ ಶೈಕ್ಷಣಿಕ ಅಭ್ಯಾಸ ನಡೆಸುತ್ತಿದ್ದಾರೆ ಶೈಕ್ಷಣಿಕವಾಗಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಕಾಲೇಜು ಹೊಂದಿದ್ದು ನಾನು ಕಾಲೇಜಿನ ಪ್ರಾಂಶುಪಾಲನಾಗಿ ಅಧಿಕಾರದಲ್ಲಿರುವಷ್ಟು ದಿನ ಪ್ರಾಮಾಣಿಕವಾಗಿ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ ಈಗಾಗಲೇ ಕ್ಲಸ್ಟರ್ ವಿಶ್ವವಿದ್ಯಾನಿಲಯ ಸ್ಥಾಪಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಪದವಿ ಹಾಗೂ ಇತಿಹಾಸ ,ಸಮಾಜಶಾಸ್ತ್ರ, ಕನ್ನಡ ,ಬಿಸಿಎ, ನೂತನವಾಗಿ ಪ್ರಾರಂಭಿಸುತ್ತಿರುವ ಅರ್ಥಶಾಸ್ತ್ರ ,ವಿಭಾಗ ಸೇರಿದಂತೆ ಸ್ನಾತಕೋತ್ತರ ಪದವಿಗಳಿದ್ದು ಕಾಲೇಜಿನ ಅಭಿವೃದ್ಧಿಗೆ 8 ಕೋಟಿ ಹಣ ಬಿಡುಗಡೆಯಾಗಿದ್ದು ಶಾಸಕ ಟಿ ರಘು ಮೂರ್ತಿಯವರ ಸಲಹೆ ಸೂಚನೆಯ ಮೇರೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶವನ್ನು ಹೆಚ್ಚಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ವಾಲ್ಮೀಕಿ ನೌಕರರ ಸಂಘದ ಅಧ್ಯಕ್ಷ ಸಿಟಿ ವೀರೇಶ್ ಮಾತನಾಡಿ ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದ ಬಿ ಎಸ್ ಮಂಜುನಾಥ್ ರವರು ಅತ್ಯುತ್ತಮ ಆಡಳಿತ ನಿರ್ವಹಿಸುವ ವಿಶ್ವಾಸವಿದ್ದು ಈಗಾಗಲೇ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸಿರುವುದರಿಂದ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಾರೆ ಅವರ ಕಾರ್ಯ ವೈಖರಿ ಈಗಾಗಲೇ ಮೊಳಕಾಲ್ಮೂರು ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಜನಮನ್ನಣೆ ಗಳಿಸಿದ್ದು ಕಾಲೇಜಿನ ಪದವಿ ವಿದ್ಯಾರ್ಥಿಗಳ ಫಲಿತಾಂಶವನ್ನು ಸುಧಾರಿಸುವಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದು ಆಶಿಸಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜಿ ಟಿ ವೀರಭದ್ರ ಸ್ವಾಮಿ ಮಾತನಾಡಿ ಜಿಲ್ಲೆಯಲ್ಲಿ ಅತ್ಯುತ್ತಮ ಸೊಸಜ್ಜಿತ ಕಟ್ಟಡವನ್ನು ಹೊಂದಿದ ಕಾಲೇಜು ಎಂಬ ಕೀರ್ತಿಗೆ ಪಾತ್ರವಾಗಿದೆ ಮುಂದಿನ ಶೈಕ್ಷಣಿಕ ಬೆಳವಣಿಗೆಗಾಗಿ ಉತ್ತಮ ಗ್ರಂಥಾಲಯ ಸಂಶೋಧನಾ ಕೊಠಡಿಗಳು ಹಾಗೂ ಕ್ಲಸ್ಟರ್ ಮಟ್ಟದ ವಿಶ್ವವಿದ್ಯಾನಿಲಯವಾಗಿ ರೂಪುಗೊಳ್ಳಲು ಎಲ್ಲಾ ರೀತಿಯಿಂದಲೂ ಉತ್ತಮವಾಗಿದ್ದು ಮಂಜುನಾಥ್ ರವರ ಅಧಿಕಾರಾವಧಿಯಲ್ಲಿ ಕಾಲೇಜು ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ನೌಕರರ ಸಂಘದ ಸದಸ್ಯರಾದ ಹೆಚ್ಓ ರಾಜಣ್ಣ ಮಹಾಂತಣ್ಣ ಎಲ್ಐಸಿ ತಿಪ್ಪೇಸ್ವಾಮಿ ಕೆಪಿಟಿ ತಿಪ್ಪೇಸ್ವಾಮಿ ಬೆಸ್ಕಾಂ ನಾಗರಾಜ್ ಜಯಣ್ಣ ತಿಪ್ಪೇರುದ್ರಪ್ಪ ಪಿ ನಾಗರಾಜ್ ರಾಜು ಸುರೇಶ್ ಸಿದ್ದೇಶ್ ರಘುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments