ಚಳ್ಳಕೆರೆ ಜ.18. ಸರ್ಕಾರಿ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗುವಂತೆ ಶಾಸಕ ಟಿ.ರಘುಮೂರ್ತಿ ರೈತರಿಗೆ ಕಿವಿ ಮಾತು ಹೇಳಿದರು.
ನಗರದ ಶಾಸಕರ ಭವನದ ಆವರಣದಲ್ಲಿ 2018-19 ನೇ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಯ 116ಫಲಾನುಭವಿಗಳಿಗೆ ಪಂಪ್ಸೆಟ್ ಮೋಟರ್ ವಿತರಿಸಿ ಮಾತನಾಡಿದರು.
ಮಾರುಕಟ್ಟೆಯಲ್ಲಿ ಸಾವಿರಾರು ರೂಪಾಯಿ ಸುರಿದು ಪಂಪ್, ಮೋಟರ್ ಮತ್ತು ಪೈಪ್ಗಳನ್ನು ಕೊಂಡುಕೊಳ್ಳಲಾಗದ ಬಡ ರೈತರನ್ನು ಗುರುತಿಸಿ ಸರ್ಕಾರ ಪ್ರತಿವರ್ಷ ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಪಂಪ್, ಮೋಟರ್, ಪೈಪ್ ಮತ್ತು ಕೇಬಲ್ಗಳನ್ನು ನೀಡುತ್ತಿದೆ ಎಂದರು. ಸರಕಾರ ನೀಡಿದ ಸೌಲಭ್ಯಗಳನ್ನು ದುರುಪಯೋಗ ಮಾಡಿಕೊಳ್ಳದೆ ಸದ್ಬಳಕೆ ಮಾಡಿಕೊಂಡಿಕೊಂಡು ಆರ್ಥಿಕವಾಗಿ ಸದೃಢರಾಗುವಂತೆ ರೈತರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ ಮಹಮಸ್ ಉಸ್ಮಾನ್ ಕಚೇರಿ ಅಧೀಕ್ಷಕ ಹೊನ್ನೂರಪ್ಪ ಇತರರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments