ಸರ್ಕಾರಿ ಶಾಲೆ ಮಕ್ಕಳಿಗೆ ಮರದಡಿಯೇ ಆಟ ಪಾಠ ಊಟ

by | 16/08/23 | ಜನಧ್ವನಿ

,ಚಳ್ಳಕೆರೆ ಆ.16. ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗೆ ಕೋಟಿಗಟ್ಟಲೇ ಅನುದಾನ ಬಿಡುಗಡೆ, ವಿನೂತನ ಯೋಜನೆಗಳು ಜಾರಿಗೊಳಿಸಿದರೂ ಸುಸಜ್ಜಿತ ಕೊಠಡಿಗಳಿಲ್ಲದೆ ಮರದ ಕೆಳಗೆ ವಿದ್ಯಾರ್ಥಿಗಳಿಗೆ ಪಾಠಮಾಡುವ ಪರಿಸ್ಥಿತಿ ಅನಿವಾರ್ಯವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೆರತ್ರವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ದಲಿತ ಕಸಲೋನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ7 ನೇ ತರಗತಿಯವರೆ 165 ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದು 4 ಕೊಠಡಿಗಳಿಗೆ ಅವುಗಳಲ್ಲಿ ಕೆಲವು ಕೊಠಡಿಗಳು ಶಿಥಿಲವಾಗಿವೆ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಕೊಠಡಿಗಳಿಲ್ಲದೆ ದಿನ ನಿತ್ಯ ಶಿಕ್ಷಕರು ಮರದ ನೆರಳಲ್ಲಿ. ಬಿಸಿಯೂಟ ಕೋಣೆಯಲ್ಲಿ ಮಕ್ಕಳಿಗೆ ಅಕ್ಷರ ಜ್ಞಾನ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ. ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಅಗತ್ಯ ಮೂಲ ಭೂತ ಸೌಲಭ್ಯಗಳ ಕೊರತೆಯ ನಡುವೆ
ಬಯಲು ಪ್ರದೇಶದ ಹಾಗೂ ಮರದ ಕೆಳಗೆ ಬಿಸಿಲಲ್ಲಿ ಕುಳಿತು ಮಕ್ಕಳು ಪಾಠ ಕೇಳಬೇಕಾಗಿದೆ.
ಭಾಷಣ ಹೇಳಕ್ಕೇ, ಕೇಳಕ್ಕೆ ಚೆಂದ: ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕು, ಮಕ್ಕಳನ್ನು ದುಡಿಮೆಗೆ ಕಳಿಸುವುದು ಅಪರಾಧ ಎಂದೆಲ್ಲಾ ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡುವ, ವೇದಿಕೆಗಳಲ್ಲಿ ಉದ್ದುದ್ದ ಭಾಷಣ ಬಿಗಿಯುವ ಯಾವೊಬ್ಬ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಇಂತಹ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಸರಿಪಡಿಸುವ ಮನಸ್ಸಿಲ್ಲವೇಕೆ ಎಂಬ ಪ್ರಶ್ನೆ ಮಕ್ಕಳ ಮನಸ್ಸಿನಲ್ಲಿ ಪುಟಿದೆದ್ದರೂ, ಅದನ್ನು ಕೇಳಿ ಪಡೆಯಲು ಅವರು ಅಸಹಾಯಕರಾಗಿದ್ದಾರೆ
ಸ್ವಾತಂತ್ರ್ಯ ಗತಿಸಿ 70 ದಶಕಗಳು ಕಳೆದರೂ ಸರ್ಕಾರಿ ಶಾಲೆಗಳು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆ ಬಯಲಲ್ಲೇ ಪಾಠ ನಡೆಯುತ್ತಿದ್ದರೂ ಮಕ್ಕಳ ಕೊರತೆ ನೀಗಿಸಲು ಜನಪ್ರತಿನಿಧಿಗಳು ಅಧಿಕಾರಿಗಳು ಇಚ್ವಾಶಕ್ತಿ ತೋರದೆ ಇರುವ ಕಾರಣ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ.

ಈಗಲಾದರೂ ಸರಕಾರಿ ಶಾಲೆಗಳ ಉಳುವಿಗಾಗಿ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಶಾಲಾಕೊಠಡಿಗಳನ್ನು ಒದಗಿಸಲು ಮುಂದಾಗುವರೇ ಕಾದು ನೋಡ ಬೇಕಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page