,ಚಳ್ಳಕೆರೆ ಆ.16. ಸರ್ಕಾರಗಳು ಶೈಕ್ಷಣಿಕ ಅಭಿವೃದ್ಧಿಗೆ ಕೋಟಿಗಟ್ಟಲೇ ಅನುದಾನ ಬಿಡುಗಡೆ, ವಿನೂತನ ಯೋಜನೆಗಳು ಜಾರಿಗೊಳಿಸಿದರೂ ಸುಸಜ್ಜಿತ ಕೊಠಡಿಗಳಿಲ್ಲದೆ ಮರದ ಕೆಳಗೆ ವಿದ್ಯಾರ್ಥಿಗಳಿಗೆ ಪಾಠಮಾಡುವ ಪರಿಸ್ಥಿತಿ ಅನಿವಾರ್ಯವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನಸಭಾ ಕ್ಷೆರತ್ರವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ದಲಿತ ಕಸಲೋನಿಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ7 ನೇ ತರಗತಿಯವರೆ 165 ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದು 4 ಕೊಠಡಿಗಳಿಗೆ ಅವುಗಳಲ್ಲಿ ಕೆಲವು ಕೊಠಡಿಗಳು ಶಿಥಿಲವಾಗಿವೆ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಕೊಠಡಿಗಳಿಲ್ಲದೆ ದಿನ ನಿತ್ಯ ಶಿಕ್ಷಕರು ಮರದ ನೆರಳಲ್ಲಿ. ಬಿಸಿಯೂಟ ಕೋಣೆಯಲ್ಲಿ ಮಕ್ಕಳಿಗೆ ಅಕ್ಷರ ಜ್ಞಾನ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ. ಶೌಚಾಲಯ ಕುಡಿಯುವ ನೀರಿನ ವ್ಯವಸ್ಥೆ ಅಗತ್ಯ ಮೂಲ ಭೂತ ಸೌಲಭ್ಯಗಳ ಕೊರತೆಯ ನಡುವೆ
ಬಯಲು ಪ್ರದೇಶದ ಹಾಗೂ ಮರದ ಕೆಳಗೆ ಬಿಸಿಲಲ್ಲಿ ಕುಳಿತು ಮಕ್ಕಳು ಪಾಠ ಕೇಳಬೇಕಾಗಿದೆ.
ಭಾಷಣ ಹೇಳಕ್ಕೇ, ಕೇಳಕ್ಕೆ ಚೆಂದ: ಮಕ್ಕಳಿಗೆ ಕಡ್ಡಾಯ ಶಿಕ್ಷಣ ಕೊಡಿಸಬೇಕು. ಮಕ್ಕಳ ಹಕ್ಕು, ಮಕ್ಕಳನ್ನು ದುಡಿಮೆಗೆ ಕಳಿಸುವುದು ಅಪರಾಧ ಎಂದೆಲ್ಲಾ ಮಕ್ಕಳ ಹಕ್ಕುಗಳ ಬಗ್ಗೆ ಮಾತನಾಡುವ, ವೇದಿಕೆಗಳಲ್ಲಿ ಉದ್ದುದ್ದ ಭಾಷಣ ಬಿಗಿಯುವ ಯಾವೊಬ್ಬ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಇಂತಹ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಸರಿಪಡಿಸುವ ಮನಸ್ಸಿಲ್ಲವೇಕೆ ಎಂಬ ಪ್ರಶ್ನೆ ಮಕ್ಕಳ ಮನಸ್ಸಿನಲ್ಲಿ ಪುಟಿದೆದ್ದರೂ, ಅದನ್ನು ಕೇಳಿ ಪಡೆಯಲು ಅವರು ಅಸಹಾಯಕರಾಗಿದ್ದಾರೆ
ಸ್ವಾತಂತ್ರ್ಯ ಗತಿಸಿ 70 ದಶಕಗಳು ಕಳೆದರೂ ಸರ್ಕಾರಿ ಶಾಲೆಗಳು ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆ ಬಯಲಲ್ಲೇ ಪಾಠ ನಡೆಯುತ್ತಿದ್ದರೂ ಮಕ್ಕಳ ಕೊರತೆ ನೀಗಿಸಲು ಜನಪ್ರತಿನಿಧಿಗಳು ಅಧಿಕಾರಿಗಳು ಇಚ್ವಾಶಕ್ತಿ ತೋರದೆ ಇರುವ ಕಾರಣ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗಿದ್ದಾರೆ.
ಈಗಲಾದರೂ ಸರಕಾರಿ ಶಾಲೆಗಳ ಉಳುವಿಗಾಗಿ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಶಾಲಾಕೊಠಡಿಗಳನ್ನು ಒದಗಿಸಲು ಮುಂದಾಗುವರೇ ಕಾದು ನೋಡ ಬೇಕಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments