ಸರ್ವೋದಯ ಮಂಡಲ ಚಿತ್ರದುರ್ಗ ಶಾಖೆ ರಚನೆ – ಕಸವನಹಳ್ಳಿರಮೇಶ

by | 05/12/23 | ಸುದ್ದಿ


ಚಿತ್ರದುರ್ಗ ಡಿ.5 ಇತ್ತೀಚಿನ ದಿನಗಳಲ್ಲಿ ಗಾಂಧಿ ತತ್ವಗಳು ಕಣ್ಮರೆಯಾಗುತ್ತಿರುವುದರಿಂದ ಕರ್ನಾಟಕ ಸರ್ವೋದಯ ಸಂಘ ರಚನೆಯಾಗಿದ್ದು ಈ ಮೂಲಕ ಶಾಲಾ ಕಸಲೇಜ್ .ಜೈಲ್ .ಸಾರ್ವಜನಿಕ ಸ್ಥಳಗಳಲ್ಲಿ ಗಾಂಧಿತತ್ವಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಗಾಂಧಿ ತತ್ವಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ರೈತ ಮುಖಂಡ ಹೋರಾಟಗಾರ ಕಸವನಹಳ್ಳಿ ರಮೇಶ್ ಜನಧ್ವನಿ ಡಿಜಿಡಲ್ ಮೀಡಿಯಾ ಗೆ ಮಾಹಿತಿ ನೀಡಿದರು. 5.12.2023ರಂದು ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಸರ್ವೋದಯ ಮಂಡಲ ತುಮಕೂರು ಜಿಲ್ಲಾಧ್ಯಕ್ಷರಾದ ಆರ್ ವಿ ಪುಟ್ಟ ಕಾಮಣ್ಣ,ನವರ ಅಧ್ಯಕ್ಷತೆಯಲ್ಲಿ ಸಮಾನ ಮನಸ್ಕ ಗಾಂಧಿ ಚಿಂತಕರು ಸೇರಿ ಜಿಲ್ಲಾ ಸಮಿತಿ ರಚನೆ ಮಾಡಲಾಯಿತು ಅಧ್ಯಕ್ಷರಾಗಿ ಡಾ: ಎಚ್ ಕೆ ಸ್ವಾಮಿ, ಉಪಾಧ್ಯಕ್ಷರಾಗಿ ಡಾ: ದೊಡ್ಡಮಲ್ಲಯ್ಯ ಮತ್ತು ಎಂ ಆರ್ ದಾಸೇಗೌಡರು ಖಜಾಂಚಿಯಾಗಿ ಎಂ ಗೋವಿಂದಪ್ಪ ತುರುವನೂರು, ಕಾರ್ಯದರ್ಶಿಯಾಗಿ ಎಮ್ ಮಂಜುನಾಥ್ ಕಳ್ಳಿಹಟ್ಟಿ,ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಸವನಹಳ್ಳಿರಮೇಶ್, ಎಸ್ ವಿ ರಂಗನಾಥ್ ಯಾದವರೆಡ್ಡಿ, ಕೆ ಮಹಮ್ಮದ್ ಯೂಸುಫ್,ಮಂಜುನಾಥ್ ಮಾಳಿಗೆ,ಎಂಆರ್ ನಾಗರಾಜ್,ಹಾಗೂ ಮಲ್ಲಿಕಾರ್ಜುನ್ ರವರನ್ನು ಆಯ್ಕೆಮಾಡಲಾಯಿತು ಎಂದು ಕಸವನಹಳ್ಳಿ ರಮೇಶ್ ತಿಳಿಸಿದರು. ಈ ಸಂದರ್ಭದಲ್ಲಿ ಡಾಕ್ಟರ್ ದೊಡ್ಡಮಲ್ಲಯ್ಯನವರು ಮಾತನಾಡಿ ಮರೆಯಾಗುತ್ತಿರುವ ಗಾಂಧಿ ಚಿಂತನೆಗಳನ್ನು ಮುನ್ನಡೆಗೆ ತರಬೇಕಾದ ಜವಾಬ್ದಾರಿ ಪ್ರಸ್ತುತ ಸಮಾಜದ ಮುಂದಿದೆ ಎಂದು ಹೇಳಿದರು. ಯಾದವ್ ರೆಡ್ಡಿ ಅವರು ಮಾತನಾಡಿ ಬಹುತ್ವ ಭಾರತದ ಪರಿಕಲ್ಪನೆಯನ್ನು ಉಳಿಸಿ ಬೆಳೆಸಬೇಕು ಇದು ಗಾಂಧೀಜಿಯವರ ಮಹೋನ್ನತ ಆಶಯವಾಗಿತ್ತು ಎಂದು ಹೇಳಿದರು ಮುಂದುವರೆದು ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ತುಮಕೂರು ಜಿಲ್ಲಾಧ್ಯಕ್ಷರಾದಂತಹ ಪುಟ್ಟಕಾಮಣ್ಣ,ನವರು ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ತಿಳಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page