ಸಹಕಾರ ಶಿಕ್ಷಣ ನಿಧಿ ಸಹಕಾರ ಸಂಘಗಳಿಂದ ಶಿಕ್ಷಣಕ್ಕೆ ನೀಡುವ ಬಹುದೊಡ್ಡ ಕೊಡುಗೆ : ನಾಗರಾಜ್ ಪಾಟೀಲ್.

by | 14/12/23 | ಆರ್ಥಿಕ


ಹಿರಿಯೂರು :
ರಾಜ್ಯದ ಎಲ್ಲಾ ಸಹಕಾರಿ ಸಂಘಗಳಿಂದ ಸಹಕಾರ ಶಿಕ್ಷಣ ನಿಧಿಗೆ ತನ್ನ ನಿವ್ವಳಲಾಭದ ಶೇ.1 ರಷ್ಟು ಮೊತ್ತವನ್ನು ನೀಡಬೇಕಾಗಿದ್ದು, ಇದು ಸಹಕಾರ ಸಂಘಗಳಿಂದ ಸಹಕಾರ ಶಿಕ್ಷಣಕ್ಷೇತ್ರದ ಪ್ರಗತಿಗೆ ನೀಡುವ ಬಹುದೊಡ್ಡ ಕೊಡುಗೆಯಾಗಿದೆ ಎಂಬುದಾಗಿ ಚಿತ್ರದುರ್ಗ ಯೂನಿಯನ್ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಹೇಳಿದರು.
ನಗರದ ವಾಣಿವಿಲಾಸ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕೋ ಆಪರೇಟಿವ್ ಫೆಡರೇಶನ್ ಲಿಮಿಟೆಡ್ ಸಂಸ್ಥೆಯ ಪರವಾಗಿ ವಾಣಿವಿಲಾಸ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಸಹಕಾರ ಶಿಕ್ಷಣ ನಿಧಿಗೆ ಚೆಕ್ ಪಡೆದು ನಂತರ ಅವರು ಮಾತನಾಡಿದರು.
ಸಹಕಾರ ಶಿಕ್ಷಣ ನಿಧಿಗೆ ಸಹಕಾರಿ ಸಂಘಗಳು ಲಾಭದ ಶೇ.1ರಷ್ಟು ಹಣವನ್ನು ಪ್ರತಿವರ್ಷವೂ ನೀಡುತ್ತಾ ಬರುತ್ತಿವೆ, ಇದರಿಂದ ಸಹಕಾರಿ ಕ್ಷೇತ್ರದಲ್ಲಿ ಸಹಕಾರಿಗಳಿಗೆ ಹಾಗೂ ಸಹಕಾರಿ ಸಂಘಗಳ ನೌಕರ ವರ್ಗದವರಿಗೆ ಅಗತ್ಯವಾದ ಹೊಸಹೊಸ ಆವಿಷ್ಕಾರಗಳು, ತರಬೇತಿ, ಸೇರಿದಂತೆ ಸಹಕಾರ ಶಿಕ್ಷಣ ನೀಡಲು ಸಹಕಾರಿಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ನಗರದ ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ವೀರಶೈವ ಪತ್ತಿನ ಸಹಕಾರ ಸಂಘ ಸೇರಿದಂತೆ ವಿವಿಧ ಸಹಕಾರ ಸಂಘಗಳಿಂದ ಸಹಕಾರ ಶಿಕ್ಷಣ ನಿಧಿಯ ಚೆಕ್ ಗಳನ್ನು ಪಡೆಯಲಾಯಿತು ಎಂಬುದಾಗಿ ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಯೂನಿಯನ್ ವ್ಯವಸ್ಥಾಪಕರಾದ ಶ್ರೀಮತಿ ಸೌಮ್ಯ, ವಾಣಿವಿಲಾಸ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಆಲೂರು ಹನುಮಂತರಾಯಪ್ಪ, ವಾಣಿವಿಲಾಸ ಪತ್ತಿನ ಸಹಕಾರ ಸಂಘದ ವ್ಯವಸ್ಥಾಪಕರಾದ ಶ್ರೀಮತಿನಂದಿನಿ, ಲೇಖಪಾಲಕರಾದ ಶಿವರಾಜ ನಾಯಕ, ಉಮೇಶ್ ಯಾದವ್, ಚೈತ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page