ಚಿತ್ರದುರ್ಗ ಫೆ.29:
ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್ನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ದಿನಾಂಕದಿಂದ 7 ದಿನಗಳೊಳಗಾಗಿ ಲೆಕ್ಕಪರಿಶೋಧಕರಿಗೆ, ಲೆಕ್ಕಪರಿಶೋಧನಾ ಫರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.
ಆದರೆ ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ, ಲೆಕ್ಕಪರಿಶೋಧನಾ ಫರ್ಮ್ನ ನೇಮಕಾತಿಯ ಬಗ್ಗೆ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಮಾಹಿತಿ ಸಲ್ಲಿಸಿರುವ ಸುಮಾರು ಆಯ್ಕೆ ಪತ್ರಗಳಲ್ಲಿ ದಿನಾಂಕ ಮತ್ತು ಲೆಕ್ಕಪರಿಶೋಧಕರ, ಸನ್ನದು ಲೆಕ್ಕಪರಿಶೋಧಕರ ಹೆಸರುಗಳು ತಿದ್ದುಪಡಿಯಾಗಿರುತ್ತವೆ.
ಆದ್ದರಿಂದ 2023-24ನೇ ಸಾಲಿನ ಆಯ್ಕೆ ಪತ್ರಗಳನ್ನು ಸಲ್ಲಿಸುವಾಗ ವಾರ್ಷಿಕ ಮಹಾಸಭೆಯ ನಡುವಳಿಗಳ ಧೃಢೀಕೃತ ನಕಲು ಪ್ರತಿಯೊಂದಿಗೆ ಆಯ್ಕೆ ಪತ್ರವನ್ನು ವಾರ್ಷಿಕ ಮಹಾಸಭೆಯ ನಡಾವಳಿಯೊಂದಿಗೆ ಕಚೇರಿಯ ಇ-ಮೇಲ್ ಮುಖಾಂತರ ಸಲ್ಲಿಸಲು, ಸಹಕಾರ ಸಂಘಗಳ ಲೆಕ್ಕಪರಿಶೋಧಕರನ್ನು, ಲೆಕ್ಕಪರಿಶೋಧನಾ ಫರ್ಮ್ನ್ನು ನೇಮಕಾತಿ ಮಾಡಿಕೊಂಡಿರು ಬಗ್ಗೆ 3 ದಿನಗಳೊಳಗಾಗಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕರ ಕಚೇರಿ, ಸಪ್ತಗಿರಿ ನಿಲಯ, ಜೆಸಿಆರ್ ಬಡಾವಣೆ, 3ನೇ ಕ್ರಾಸ್, ಚಿತ್ರದುರ್ಗ-577501, 08194-200105, ಇ-ಮೇಲ್ ddca-chitradurg-ka@nic.inಕಛೇರಿಗೆ ಸಲ್ಲಿಸಲು ತಿಳಿಸಿದೆ.
ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿ ಸಲ್ಲಿಸದಿದ್ದಲ್ಲಿ ಅಂತಹ ಸಂಘಗಳಿಗೆ ಇಲಾಖೆಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಹಾಗೂ ಲೆಕ್ಕಪರಿಶೋಧನೆಯಲ್ಲಿ ವಿಳಂಬವಾದಲ್ಲಿ ಸಂಬಂಧಿಸಿದ ಸಂಘಗಳ, ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೇ ಹೊಣೆಗಾರರು ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments