ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕ ಮಾಹಿತಿ ಸಲ್ಲಿಸಲು ಸೂಚನೆ

by | 29/02/24 | ಸುದ್ದಿ

ಚಿತ್ರದುರ್ಗ ಫೆ.29:
ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8)ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ನಿಯಮಗಳು 2004 ನಿಯಮ 8-ಬಿ(8) ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್‍ನ್ನು ನೇಮಕ ಮಾಡಿಕೊಂಡ ಬಗ್ಗೆ ವಾರ್ಷಿಕ ಮಹಾಸಭೆಯ ದಿನಾಂಕದಿಂದ 7 ದಿನಗಳೊಳಗಾಗಿ ಲೆಕ್ಕಪರಿಶೋಧಕರಿಗೆ, ಲೆಕ್ಕಪರಿಶೋಧನಾ ಫರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.
ಆದರೆ ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹಾರ್ದ ಸಹಕಾರಿಗಳು ಲೆಕ್ಕಪರಿಶೋಧಕರ, ಲೆಕ್ಕಪರಿಶೋಧನಾ ಫರ್ಮ್‍ನ ನೇಮಕಾತಿಯ ಬಗ್ಗೆ ಕಛೇರಿಗೆ ಮಾಹಿತಿ ಸಲ್ಲಿಸಿರುವುದಿಲ್ಲ. ಮಾಹಿತಿ ಸಲ್ಲಿಸಿರುವ ಸುಮಾರು ಆಯ್ಕೆ ಪತ್ರಗಳಲ್ಲಿ ದಿನಾಂಕ ಮತ್ತು ಲೆಕ್ಕಪರಿಶೋಧಕರ, ಸನ್ನದು ಲೆಕ್ಕಪರಿಶೋಧಕರ ಹೆಸರುಗಳು ತಿದ್ದುಪಡಿಯಾಗಿರುತ್ತವೆ.
ಆದ್ದರಿಂದ 2023-24ನೇ ಸಾಲಿನ ಆಯ್ಕೆ ಪತ್ರಗಳನ್ನು ಸಲ್ಲಿಸುವಾಗ ವಾರ್ಷಿಕ ಮಹಾಸಭೆಯ ನಡುವಳಿಗಳ ಧೃಢೀಕೃತ ನಕಲು ಪ್ರತಿಯೊಂದಿಗೆ ಆಯ್ಕೆ ಪತ್ರವನ್ನು ವಾರ್ಷಿಕ ಮಹಾಸಭೆಯ ನಡಾವಳಿಯೊಂದಿಗೆ ಕಚೇರಿಯ ಇ-ಮೇಲ್ ಮುಖಾಂತರ ಸಲ್ಲಿಸಲು, ಸಹಕಾರ ಸಂಘಗಳ ಲೆಕ್ಕಪರಿಶೋಧಕರನ್ನು, ಲೆಕ್ಕಪರಿಶೋಧನಾ ಫರ್ಮ್‍ನ್ನು ನೇಮಕಾತಿ ಮಾಡಿಕೊಂಡಿರು ಬಗ್ಗೆ 3 ದಿನಗಳೊಳಗಾಗಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ ಉಪನಿರ್ದೇಶಕರ ಕಚೇರಿ, ಸಪ್ತಗಿರಿ ನಿಲಯ, ಜೆಸಿಆರ್ ಬಡಾವಣೆ, 3ನೇ ಕ್ರಾಸ್, ಚಿತ್ರದುರ್ಗ-577501, 08194-200105, ಇ-ಮೇಲ್ ddca-chitradurg-ka@nic.inಕಛೇರಿಗೆ ಸಲ್ಲಿಸಲು ತಿಳಿಸಿದೆ.
ಸಹಕಾರ ಸಂಘಗಳು ಲೆಕ್ಕಪರಿಶೋಧಕರ ನೇಮಕಾತಿ ಮಾಹಿತಿ ಸಲ್ಲಿಸದಿದ್ದಲ್ಲಿ ಅಂತಹ ಸಂಘಗಳಿಗೆ ಇಲಾಖೆಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದು ಹಾಗೂ ಲೆಕ್ಕಪರಿಶೋಧನೆಯಲ್ಲಿ ವಿಳಂಬವಾದಲ್ಲಿ ಸಂಬಂಧಿಸಿದ ಸಂಘಗಳ, ಸಹಕಾರಿಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳೇ ಹೊಣೆಗಾರರು ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page