ಚಳ್ಳಕೆರೆ ಆ.4.ಗ್ರಾಮದಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿ ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಸಾಂಕ್ರಮಿಕ ರೋಗ ಭೀತಿಯಲ್ಲಿ ಗ್ರಾಮಸ್ಥರು ದಿನ ನಿತ್ಯ ಜೀವನ ಸಾಗಿಸುವುದು ಅನಿವಾರ್ಯವಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮಪಂಚಾಯತ್ ವ್ಯಾಪ್ತಿಯ ದುರ್ಗವರ ಗ್ರಾಮದಲ್ಲಿ ಚರಂಡಿಗಳಲ್ಲಿ ತ್ಯಾಜ್ಯದಿಂದ ತುಂಬಿರುವುದರಿಂದ ತ್ಯಾಜ್ಯ ನೀರು ಹಾಗು ಮಳೆ ನೀರು ಸರಾಗವಾಗಿ ಹರಿಯದೆ ನಿಂತು ಸೊಳ್ಳೆಗಳ ಉತ್ಪತ್ತಿ ಕೇಂದ್ರವಾಗಿ ಗೊಬ್ಬು ವಾಸನೆ ಬೀರುತ್ತಿದ್ದು ಚರಂಡಿಯಲ್ಲಿ ಹೂಳು ತುಂಬಿ ಸುಮಾರು ವರ್ಷವೇ ಕಳೆದರೂ ಗ್ರಾಪಂ ಸದಸ್ಯರಾಗಲಿ ಅಧಿಕಾರಿಗಳಾಗಲಿ ಚರಂಡಿಗಳ ಸ್ವಚ್ಚತೆ ಮಾಡಿಸದೆ ನಿರ್ಲಕ್ಷ ತೋರುತ್ತಿದ್ದಾರೆ ಎಂದು ಗ್ರಾಮಸ್ಥರ ಆರೋಪವಾಗಿದೆ.
![](https://janadhwani.in/wp-content/uploads/2023/08/IMG-20230803-WA0113.jpg)
ಈಗಾಗಲೆ ಹಲವು ಕಡೆ ಕಾಲರ ಮಲೇರಿಯಾ ಹಾಗೂ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಸಾವಿನ ಮನೆ ಸೇರಿದ ಪ್ರಕರಣಗಳು ಬೆಳಕಿಗೆ ಬಂದರೂ ಸಹ ಗ್ರಾಪಂ ಆಡಳಿತ ಮಂಡಳಿ ಮಾತ್ರ ಚರಂಡಿಗಳ ಸ್ವಚ್ಚತೆಗೆ ಮುಂದಾಗಿಲ್ಲ ಇತ್ತ ಆರೋಗ್ಯ ಇಲಾಖೆ ಗ್ರಾಮದಲ್ಲಿ ಮಲೇರಿಯಾ. ಕಾಲರ ಸಾಂಕ್ರಮಿಕ ರೋಗಗಳ ಬಗ್ಗೆ ಅರಿವು ಮೂಡಿಸುತ್ತಿದೆ . ತಾಲ್ಲೂಕಿನ ಬುಡ್ನಹಟ್ಟಿ ಗ್ರಾಪಂ ವ್ಯಾಪ್ತಿಯ ದುರ್ಗವರ ಗ್ರಾಮದಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿ ಗಬ್ಬುವಾಸನೆ ಬರುತ್ತಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
![](https://janadhwani.in/wp-content/uploads/2023/08/IMG-20230803-WA0115.jpg)
ಗ್ರಾಮದಲ್ಲಿನ ಚರಂಡಿಗಳಲ್ಲಿ ಕಳೆದ ಒಂದು ವರ್ಷದಿಂದ ಹೂಳು ತುಂಬಿದ್ದರೂ ಪಂಚಾಯಿತಿಯವರು ತೆಗೆಸದೆ ನಿರ್ಲಕ್ಷ ತೋರಿರುವುದರಿಂದ ಗ್ರಾಮದಲ್ಲಿ ಡೆಂಗಿ ಜ್ವರ ಹರಡುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
![](https://janadhwani.in/wp-content/uploads/2023/08/IMG-20230803-WA0117.jpg)
ಶೀಘ್ರವೇ ಹೂಳನ್ನು ತೆಗೆಸಿ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈಗಲಾದರೂ ಸಂಬಂಧ ಪಟ್ಡ ಅಧಿಕಾರಿಗಳು ಸ್ವಚ್ವತೆಗೆ ಮುಂದಾಗುವರೇ ಕಾದು ನೋಡ ಬೇಕಿದೆ.
0 Comments