ಚಳ್ಳಕೆರೆ ಸೆ.2. ಕಾನೂನು ಕಟ್ಟುನಿಟ್ಟಾಗಿದ್ದರೂ ಸಹ ವ್ಯಾಪಕ ವಾಮಕ್ಕಳನ್ನು ನಾವು ಕೈಹಿಡಿದು ನಡೆಸಬೇಕಾಗಿತ್ತೋ, ಯಾವ ಮಕ್ಕಳನ್ನು ಹೆಗಲ ಮೇಲೆ ಹತ್ತಿಸಿಕೊಂಡು ಜಾತ್ರೆಯಲ್ಲಿತೆರನ್ನು ತೋರಿಸಬೇಗಾಗಿತ್ತೋ ಮತ್ತು ಯಾವ ಮಕ್ಕಳಿಗೆ ಕೈತುತ್ತು ಉಣಿಸಬೇಗಾಗಿತ್ತೋ ಅಂತಹ ಮಕ್ಕಳಿಗೆ ಬಾಲ್ಯವಿವಾಹ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಅಕ್ಷಮ್ಯ ಅಪರಾದವಾಗಿದೆ ಎಂದು ಬಾಲ್ಯ ವಿವಾಹ ಹಾಗೂ ಪೋಸ್ಕೋ ಕಾಯ್ದೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಧಿಕಾರಿಗಳ ಜವಾಬ್ದಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿಎಸ್ ರೇಖಾ ವಿಷಾದ ವ್ಯಕ್ತಪಡಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕು ವಕೀಲರ ಸಂಘ ಪೊಲೀಸ್ ಇಲಾಖೆ ಸಂಯುಕ್ತಾಕ್ಷರದಲ್ಲಿ ಹಮ್ಮಿಕೊಂಡಿದ್ದ ಪೋಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ತಡೆ ಕಾಯ್ದೆ ಕುರಿತು ಬಾಲ್ಯ ವಿವಾಹ ನಿಷೇಧಾಧಿಕಾರಿಗಳ ಒಂದು ದಿನದ ತರಬೇತಿ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಫೋಸ್ಕೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ತಡೆ ಕಾಯ್ದೆ ಹಾಗೂ ಶಿಕ್ಷೆಯ ಕುರಿತ ಕಾನೂನಿನ ಅರಿವು ಇದ್ದರೂ ಸಹ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಾಲ್ಯ ವಿವಾಹಗಳು ನಡೆಯುತ್ತಿರುವುದು ದುರ್ದೈವದ ಸಂಗತಿಯಾಗಿದ್ದು. ಪ್ರತಿಯೊಬ್ಬ ತಂದೆ ತಾಯಿ, ಮಗುವನ್ನು ಮಗುವಿನ ರೀತಿಯಲ್ಲಿ ಕಾಣಬೇಕು ಮಗುವಿಗೆ ಸಿಗಬೇಕಾದ ಸ್ವಾತಂತ್ರ್ಯ ನೀಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಬಾಲ್ಯದಲ್ಲಿ ಮಕ್ಕಳಿಗೆ ವಿವಾಹ ಮಾಡುವುದರಿಂದ ಹಲವು ಸಮಸ್ಯೆಗಳು ಆ ಮಗು ಎದುರಿಸಬೇಕಾಗುತ್ತದೆ ತನ್ನ ಜೀವನವನ್ನು ಕಟ್ಟಿಕೊಳ್ಳಲು ಕನಸು ಕಾಣುವ ವಯಸ್ಸಿನಲ್ಲಿ ಒಂದು ಮಗುವಿಗೆ ತಾಯಿಯಾದರೆ ಆ ಮಗುವಿಗೆ ಪೌಷ್ಟಿಕಾಂಶದ ಕೊರತೆಯಿಂದಾಗಿ ಜೀವನ ಭದ್ರತೆ ಇಲ್ಲದೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಫೋಸ್ಕೋ ಪ್ರಕರಣಗಳನ್ನು ತಡೆಗಟ್ಟಲು ಶಾಲೆಗಳಲ್ಲಿ ಶಿಕ್ಷಕರಿಗೆ ಮಕ್ಕಳ ಜೊತೆ ವರ್ತನೆಯ ಬಗ್ಗೆ ತರಬೇತಿ ನೀಡಿ ಮಕ್ಕಳನ್ನು ಯಾವ ರೀತಿ ರಕ್ಷಣೆ ಮಾಡಬೇಕು ಎಂಬುದನ್ನು ತಿಳಿಯಪಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಎಂ ವಿಜಯ್ ಮಾತನಾಡಿ ಚಿತ್ರದುರ್ಗ ಜಿಲ್ಲೆ, ಬಾಲ್ಯ ವಿವಾಹ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದ್ದು ಏಪ್ರಿಲ್ ನಿಂದ ಆಗಸ್ಟ್ ಮಾಹೆಯವರೆಗೆ 157 ಪ್ರಕರಣಗಳು ದಾಖಲಾಗಿದ್ದು ಇಂತಹ ಪ್ರಕರಣಗಳು ಹೆಚ್ಚಾಗಲು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ತಿಳುವಳಿಕೆ ಮೂಡಿಸಬೇಕಾದ ಅಧಿಕಾರಿಗಳು ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇಂತಹ ಪ್ರಕರಣಗಳ ಬಗ್ಗೆ ಗಮನ ಹರಿಸಲೇಬೇಕಾದ ಅನಿವಾರ್ಯತೆ ಉಂಟಾಗಿ ತಮ್ಮ ವೃತ್ತಿ ಬದುಕಿಗೆ ಧಕ್ಕೆ ಬರಬಹುದು ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಷ್ಮಾ ಕಲಕಪ್ಪ ಗೋಣೆ .ನ್ಯಾಯದೀಶೆ ಗಾಯತ್ರಿ ಎಸ್ ಕಾಟೆ ಡಿವೈಎಸ್ಪಿ ಟಿ.ಬಿ ರಾಜಣ್ಣ ಡಿ.ಹೆಚ್ ಓ ರಂಗನಾಥ್. ತಾಪಂ ಇಒ ಹೊನ್ನಯ್ಯ. ಸಿ ಡಿ ಪಿ ಓ ಹರಿಪ್ರಸಾದ್ .ಸಾಮಾಜಕಲ್ಯಾಣ ಇಲಾಖೆ ಮಂಜಪ್ಪ. ವಕೀಲರ ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು.ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments