ಹಿರಿಯೂರು ನ.8
ಸಾರ್ವಜನಿಕರು ಕಡ್ಡಾಯವಾಗಿ ಹಸಿರು ಪಟಾಕಿಯನ್ನು ಮಾತ್ರ ಬಳಕೆ ಮಾಡಬೇಕು, ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಯನ್ನು ಹಚ್ಚಬೇಕು, 125 ಡೆಸಿಬಲ್ ಗಿಂತ ಹೆಚ್ಚಿನ ಶಬ್ದದ ಪಟಾಕಿಗಳನ್ನು ಹಚ್ಚುವಂತಿಲ್ಲ, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಹಾಗೂ ವೃದ್ದಾಶ್ರಮಗಳ ಹತ್ತಿರ ಪಟಾಕಿ ಹಚ್ಚುವುದನ್ನು ನಿಷೇದಿಸಲಾಗಿದೆ ಎಂಬುದಾಗಿ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ರೀಮತಿ ವೈ.ಎಸ್.ಸಂಧ್ಯಾ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದರು.
ನಗರ ವ್ಯಾಪ್ತಿಯ ಸೆಂಟೆನನ್ಸ್ ನರ್ಸರಿ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ಪರಿಸರ ಸ್ನೇಹಿಯಾದ ಹಸಿರು ಪಟಾಕಿ ಬಳಕೆ ಮಾಡುವುದರ ಮೂಲಕ ದೀಪಾವಳಿ ಹಬ್ಬವನ್ನು ಆಚರಣೆ ಮಾಡುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿವಿಧ ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹಸಿರು ಪಟಾಕಿಗಳ ಮೇಲೆ ಸಿಎಸ್.ಐ.ಆರ್ ಹಾಗೂ ಎನ್.ಇ.ಇ.ಆರ್.ಐ ಇವರ ಲೋಗೋ ಇರುತ್ತದೆ, ಈ ಲೋಗೋ ಇರುವ ಪರಿಸರ ಸ್ನೇಹಿಯಾದ ಹಸಿರು ಪಟಾಕಿಗಳನ್ನು ಮಾತ್ರ ಬಳಕೆ ಮಾಡಬೇಕು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪಟಾಕಿ ಹಚ್ಚುವುದನ್ನು ನಿಷೇದಿಸಲಾಗಿದೆ ಎಂದರಲ್ಲದೆ,
ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಪರಿಸರ ಸ್ನೇಹಿಯಾದ ಹಸಿರು ಪಟಾಕಿ ಬಳಕೆ ಮಾಡುವುದರ ಮೂಲಕ ಆಚರಣೆ ಮಾಡಬೇಕು, ಹಸಿರು ಪಟಾಕಿಯನ್ನು ಹೊರತುಪಡಿಸಿ, ಬೇರೆ ಯಾವುದೇ ರೀತಿಯ ಪಟಾಕಿಗಳನ್ನು ಹಚ್ಚುವಂತಿಲ್ಲ ಎಂಬುದಾಗಿ ಅವರು ಸೂಚನೆ ನೀಡಿದರು.
[raw]
ಈ ಅಭಿಯಾನದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ವೈ.ಎಸ್.ಸಂಧ್ಯಾ, ಕಿರಿಯ ಆರೋಗ್ಯ ನೀರಿಕ್ಷಕರಾದ ಅಶೋಕ್ ಕುಮಾರ್, ಸೆಂಟೆನನ್ಸ್ ಶಿಕ್ಷಕಿ ಸಿಸ್ಟರ್ ಮಟ್ಟಿ ಮೇಡಂ, ಶಿಕ್ಷಕ-ಶಿಕ್ಷಕಿಯರು, ವಿದ್ಯಾರ್ಥಿಗಳು ನಗರಸಭೆಯ ಸ್ವಚ್ಛತಾ ಕಾರ್ಮಿಕರು, ಹಾಗೂ ವಾಹನ ಚಾಲಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments