ಹಿರಿಯೂರು :
ನಗರದಲ್ಲಿ ಸಾರ್ವಜನಿಕ ಶೌಚಾಲಯಕ್ಕೆ ಹೈಟೆಕ್ ಸ್ಪರ್ಶದ ಜೊತೆಗೆ ಅದರ ಅದರ ಅಂಧ ಹೆಚ್ಚಿಸುವ ಕಾರ್ಯಬರದಿಂದ ಸಾಗುತ್ತಿದ್ದು, ಖಾಸಗಿ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛಗೊಳಿಸಿ ಸಾರ್ವಜನಿಕರ ಮನಸೆಳೆಯಲು ಶೌಚಾಲಯದ ಒಳಗಡೆ ಮತ್ತು ಹೊರಗಡೆ ವಿವಿಧರೀತಿಯ ಸುಂದರವಾದ ಚಿತ್ರಗಳನ್ನು ಬರೆಸುವುದರ ಮೂಲಕ ನಗರದ ಶೌಚಾಲಯಗಳಿಗೆ ಸ್ಪರ್ಶಮಾಂತ್ರಿಕ ಎಂದೇ ಪ್ರಸಿದ್ಧರಾದ ನಗರಸಭೆ ಪೌರಾಯುಕ್ತ ಮಹಂತೇಶ್ ಮೆರುಗು ನೀಡಿದ್ದಾರೆ.
ಸಾರ್ವಜನಿಕರ ಶೌಚಗೃಹಗಳು ಅಸ್ವಚ್ಛತೆಯ ತಾಣ ಎಂಬ ಅಭಿಪ್ರಾಯ ಸರ್ವೇಸಾಮಾನ್ಯವಾಗಿದ್ದು, ಇದೇ ಕಾರಣಕ್ಕೆ ಬಹಳಷ್ಟು ನಗರದಲ್ಲಿ ಇವುಗಳನ್ನು ತೆರವುಗೊಳಿಸಲಾಗಿದೆ, ಆದರೆ ಹಿರಿಯೂರು ನಗರದ ಖಾಸಗಿ ಬಸ್ ನಿಲ್ದಾಣದ ಶೌಚಾಲಯದ ಗೋಡೆಗಳನ್ನು ಬಣ್ಣಬಣ್ಣದ ಚಿತ್ತಾರಗಳಿಂದ ಅಲಂಕರಿಸುವ ಮೂಲಕ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಕಣ್ಣಿಗೆ ಕಂಗೊಳಿಸುವಂತೆ ಮಾಡಲಾಗಿದೆ.
ದಕ್ಷಿಣಕಾಶಿ ಎಂದೇ ಪ್ರಸಿದ್ಧವಾದ ಹಿರಿಯೂರು ನಗರದ ಸೌಂದರ್ಯ ಹೆಚ್ಚಿಸಲು ನಗರಸಭೆ ಈ ವಿಶೇಷ ಯೋಜನೆ ರೂಪಿಸಿದ್ದು, ರಾಜಕಾಲುವೆ ಒತ್ತುವರಿ ತೆರವು, ಪಾರ್ಕ್ ಗಳ ಅಭಿವೃದ್ಧಿ, ಸ್ವಚ್ಛತೆ, ವೇದಾವತಿ ಎಡಬಲದಂಡೆ ಕಾಲುವೆಗಳಿಗೆ ಕಸ ಹಾಕದಂತೆ ತಡೆಗೋಡೆ , ಶೌಚಗೃಹದ ಗೋಡೆ, ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಗೋಡೆಗಳ ಸೌಂದರ್ಯ ಹೆಚ್ಚಿಸಲು ಗೋಡೆಬರಹ, ಸೇರಿದಂತೆ ಬಣ್ಣಬಣ್ಣದ ಚಿತ್ತಾರ ಬಿಡಿಸುವ ಮೂಲಕ ನಗರವನ್ನು ಆಕರ್ಷಕಗೊಳಿಸುವ ಕಾರ್ಯದಲ್ಲಿ ತೊಡಗಿದೆ.
ಹೀಗೆ ನಗರದ ಸಮಗ್ರ ಅಭಿವೃದ್ಧಿಗಾಗಿ ನಗರಸಭೆ ಮಾಸ್ಟರ್ ಪ್ಲಾನ್ ರೂಪಿಸಿದ್ದು, ನಗರದಲ್ಲಿನ ಸ್ವಚ್ಛತೆ ಜೊತೆಗೆ ಸಾರ್ವಜನಿಕ ಶೌಚಗೃಹಗಳ ಅಂದ ಹೆಚ್ಚಿಸುವ ಕೆಲಸ ಆರಂಭಿಸಲಾಗಿದೆ, ನಗರದ ಹೃದಯ ಭಾಗದಲ್ಲಿರುವ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿನ ಸಾರ್ವಜನಿಕ ಶೌಚಗೃಹದ ಗೋಡೆಯ ಮೇಲೆ ಕಲಾವಿದರ ಕುಂಚದಿಂದ ಅರಳಿದ ಚಿತ್ರಗಳು ನಗರದ ಜನರ ಗಮನ ಸೆಳೆಯುತ್ತಿವೆ.
ನಗರದ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಸುಂದರ ನಗರದ ನಿರ್ಮಾಣ ಮಾಡುವಲ್ಲಿ ನಗರದ ಅಭಿವೃದ್ಧಿ ಕುರಿತಂತೆ ವಿನೂತನ ಕಾರ್ಯಕ್ರಮಗಳನ್ನು ರೂಪಿಸಿರುತ್ತಿರುವ ಹಿನ್ನೆಲೆಯಲ್ಲಿ ಹಿರಿಯೂರು ನಗರಸಭೆ ಜನಮನ್ನನೆ ಪಡೆದಿದ್ದು, ನಗರಸಭೆ ಪೌರಾಯುಕ್ತರಾದ ಹೆಚ್.ಮಹಂತೇಶ್ ರವರ ಸೃಜನಶೀಲ ಚಟುವಟಿಕೆಗಳು ಹಾಗೂ ಕಾರ್ಯವೈಖರಿಗೆ ಸಾರ್ವಜನಿಕರು ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ, ಸರ್ಕಾರಿ ಶಾಲೆ ಮೈದಾನದಲ್ಲಿ ಹಾಗೂ ಬಸ್ ನಿಲ್ದಾಣದ ಅಕ್ಕಪಕ್ಕದ ಜಾಗದಲ್ಲಿ ಸಾರ್ವಜನಿಕರು ದಿನನಿತ್ಯ ಮಲಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ಗಮನಿಸಿ, ತರಕಾರಿ ಮಾರ್ಕೆಟ್ ಹಾಗೂ ಗಾಂಧಿವೃತ್ತ ಸೇರಿದಂತೆ ನಗರದ ಎಲ್ಲಾ ಶೌಚಾಲಯಗಳನ್ನು ಸ್ವಚ್ಛಗೊಳಿಸಿ, ಸುಂದರವಾಗಿ ವಿನ್ಯಾಸಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ.
ನಗರಸಭೆ ಪೌರಾಡಳಿತ ಇಲಾಖೆ ನಿರ್ದೇಶನದಂದೆ ಸ್ವಚ್ಛ ಶೌಚಾಲಯ ನಿರ್ಮಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದಾರೆ, ಸಾರ್ವಜನಿಕರ ಹಿತ ದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು, ನಗರದ ಆರು ಶೌಚಾಲಯಗಳನ್ನು ಸ್ವಚ್ಛ ಹಾಗೂ ಸುಂದರಗೊಳಿಸಲಾಗಿದೆ, ಈ ರೀತಿ ನಗರದಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ ನಗರಸಭೆ ಪೌರಾಯುಕ್ತ ಹೆಚ್,ಮಹಂತೇಶ್ ರಂತಹ ದಕ್ಷ ಹಾಗೂ ಸೃಜನಶೀಲ ಅಧಿಕಾರಿಗಳಿಗೆ ಸಾರ್ವಜನಿಕರು ಸ್ಪೂರ್ತಿತುಂಬಬೇಕಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments