ಸಿಎಂ ಜನತಾ ದರ್ಶನ : ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಕಣ್ಣೀರಿಟ್ಟ ಶಿಕ್ಷಕ

by | 27/11/23 | ಕರ್ನಾಟಕ

‌‌‌‌ ಬೆಂಗಳೂರು : ಜನರ ಬಳಿ ಆಡಳಿತ.. ಜನರ ಕಷ್ಟಗಳನ್ನ ಪರಿಹರಿಸೋದೇ ನಮ್ಮ ಕಾಯಕ ಇದೇ ದ್ಯೇಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಇದೀಗ ಆಡಳಿತ ಯಂತ್ರವನ್ನ ಜನರ ಬಳಿಗೆ ಕೊಂಡೊಯ್ಯುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಮೆಗಾ ಜನತಾ ದರ್ಶನ ಮಾಡ್ತಿದ್ದಾರೆ.ಬೆಳಗ್ಗೆಯಿಂದ ಜನರ ಅಹವಾಲು ಆಲಿಸ್ತಿದ್ದು, ಸಿಎಂ ಗೃಹ ಕಚೇರಿಗೆ ಕೃಷ್ಣಾಗೆ ಸಾವಿರಾರು ಜನರು ಹರಿದು ಬಂದಿದ್ದಾರೆ.

ಇಂದು ಬೆಳಗ್ಗೆಯಿಂದಲೆ ಜನಸ್ಪಂದನಾ ಹೆಸರಿನಲ್ಲಿ, ಸಿಎಂ ಸಿದ್ದರಾಮಯ್ಯರ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸಾವಿರಾರು ಜನ ಸಿಎಂ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಕೆಲವರಿಗೆ ಸಿಎಂ ಅವರು ಕೂತಲ್ಲೇ ಪರಿಹಾರ ನೀಡಿ ಸ್ಪಂದಿಸುತ್ತಿದ್ದಾರೆ.

ಗ್ರಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಜನತಾದರ್ಶನ ಜನತಾದರ್ಶನದ ವೇಳೆ ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದ ಘಟನೆ ಜರುಗಿತು.ಜನತಾದರ್ಶನ ವೇಳೆ ಇಲಾಖೆಯ ಕುರಿತಂತೆ ಮಾಹಿತಿಗೆ ಹುಡುಕಾಟ ನಡೆಸಲಾಗಿತ್ತು.

ಈ ವೇಳೆ ಆ ಎಲ್ಲಿ ಅಧಿಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅದಕ್ಕೆ ಕೆಲ ಅಧಿಕಾರಿಗಳು ಊಟಕ್ಕೆ ಹೋಗಿದ್ದಾರೆ ಅಂದಿದ್ದಕ್ಕೆ, ಅಧಿಕಾರಿಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆದರು. ನಾನೇ ಇಲ್ಲಿ ಹಸಿದುಕೊಂಡು ಕೂತಿದ್ದೇನೆ.ಜನತಾದರ್ಶನ ಮುಗಿಯುವ ತನಕ ಯಾರು ಹೋಗಬೇಡಿ ಎಂದು ಗರಂ ಆದರು.ಸಿಎಂ ಸೂಚನೆ ಹಿನ್ನೆಲೆ ಮೈಕ್ ನಲ್ಲಿ ಅಧಿಕಾರಿಗಳು ಅನೌನ್ಸ್ ಮಾಡಿದರು. : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ನಡೆಯುತ್ತಿದ್ದು, ಸಾರ್ವಜನಿಕರು ತಮ್ಮ ತಮ್ಮ ಅಹವಾಲು, ದೂರುಗಳನ್ನು ಸಲ್ಲಿಸುತ್ತಿದ್ದಾರೆ
ಮಗನಿಗೆ ಕಿಡ್ನಿ ಸಮಸ್ಯೆ ಇದೆ ವರ್ಗಾವಣೆ ಮಾಡಿ ಎಂದು ಶಿಕ್ಷಕರೊಬ್ಬರು ಸಿಎಂ ಬಳಿ ಕಣ್ಣೀರಿಟ್ಟಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ಹೈಸ್ಕೂಲ್ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರೊಬ್ಬರು ತಮ್ಮನ್ನು ಕನಕಪುರಕ್ಕೆ ವರ್ಗಾವಣೆ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದಾರೆ.ನನ್ನ ಮಗನಿಗೆ ಕಿಡ್ನಿ ಸಮಸ್ಯೆ ಇದೆ. ಟ್ರೀಟ್ ಮೆಂಟ್ ಗೋಸ್ಕರ ಕನಕಪುರಕ್ಕೆ ಪ್ರತಿ ಸಾರಿ ಹೋಗಬೇಕು, ಆಸ್ಪತ್ರೆ ಇದ್ದ ಕಡೆ ವರ್ಗಾವಣೆ ಮಾಡಿಕೊಡಿ ಎಂದು ಶಿಕ್ಷಕರೊಬ್ಬರು ಸಿಎಂ ಬಳಿ ಕಣ್ಣೀರಿಟ್ಟಿದ್ದಾರೆ.ಶಿಕ್ಷಕನ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ ತಕ್ಷಣ ವರ್ಗಾವಣೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಮಹಿಳೆಯೊಬ್ಬರು ನನ್ನ ಮಗನ ಆಪರೇಷನ್ ಗೆ ಸಹಾಯ ಮಾಡಿ ಸಿಎಂ ಬಳಿ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಲೈನ್ ಮ್ಯಾನ್ ಒಬ್ಬರು ಕೆಲಸ ಮಾಡುವಾಗ ನನ್ನ ಕೈ ಹೋಗಿದೆ. ಇದಕ್ಕೆ ಪರಿಹಾರ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ಹೀಗೆ ಹಲವಾರು ಸಮಸ್ಯೆ, ದೂರುಗಳನ್ನು ಹೊತ್ತ ಸಾರ್ವಜನಿಕರು ಸಿಎಂ ಬಳಿ ದೂರು, ಅಹವಾಲು ಸಲ್ಲಿಸಿ ಸಹಾಯಕ್ಕಾಗಿ ಮೊರೆ ಇಡುತ್ತಿರುವ ದೃಶ್ಯಗಳು ಕಂಡು ಬಂದಿತು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page