ಸುರಕ್ಷಿತ ತಾಯ್ತತನದ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ತಾಯಿ ಮರಣ ನಿಯಂತ್ರಿಸಲು ಸಾಂಸ್ಥಿಕ ಹೆರಿಗೆ ಮಾಡಿಸಿ

by | 11/04/23 | ಆರೋಗ್ಯ


ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.11:
ತಾಯಿ ಮರಣ ನಿಯಂತ್ರಿಸಲು ಸಾಂಸ್ಥಿಕ ಹೆರಿಗೆ ಮಾಡಿಸಿ ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಎಂದರು.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸುರಕ್ಷಿತ ಮಾತೃತ್ವ ದಿನದ ಅಂಗವಾಗಿ ಗರ್ಭಿಣಿ ಮಹಿಳೆಯರು ತಾಯಂದಿರಿಗೆ ಸುರಕ್ಷಿತ ತಾಯ್ತನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಯಿಯ ಆರೋಗ್ಯ ಉತ್ತೇಜಿಸಲು ಮತ್ತು ತಾಯಿಯರ ಮರಣ ಕಡಿಮೆ ಮಾಡಲು ಸರ್ಕಾರವು ಈ ದಿನವನ್ನು ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವೆಂದು ಘೋಷಿಸಿತು. ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಏಪ್ರಿಲ್ 11 ರಂದು ಆಚರಿಸಲಾಗುತ್ತದೆ. ಗರ್ಭಿಣಿಗೆ ಹೆರಿಗೆಯ ಮೊದಲು, ಹೆರಿಗೆಯ ಸಮಯದಲ್ಲಿ ಮತ್ತು ನಂತರ ಅಗತ್ಯವಿರುವ ಆರೈಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಸುರಕ್ಷಿತ ಮಾತೃತ್ವ ದಿನ ಆಚರಣೆ ಮಾಡಲಾಗುತ್ತದೆ ಎಂದರು.
ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ತಿಮ್ಮೆಗೌಡ ಮಾತನಾಡಿ, ವಿಶ್ವದಾದ್ಯಂತ ಎಲ್ಲ ದೇಶಗಳೂ ಮಾತೃ ಮರಣವನ್ನು ಗಂಭೀರವಾಗಿ ಪರಿಗಣಿಸುತ್ತವೆ. ಕಾರಣ, ಇದು ಆ ದೇಶದ ಆರೋಗ್ಯ ವ್ಯವಸ್ಥೆಯ ಮತ್ತು ಅಭಿವೃದ್ಧಿಯ ಸೂಚ್ಯಂಕವಾಗಿದೆ ಎಂದು ಹೇಳಿದರು.
ಸ್ತ್ರಿ ರೋಗ ತಜ್ಞೆ ಡಾ.ಪವಿತ್ರ ಮಾತನಾಡಿ, ಪ್ರಸವದ ಬಳಿಕ ಮಹಿಳೆಯರ ಮನಸ್ಸು ಸೂಕ್ಷ್ಮವಾಗಿರುತ್ತದೆ. ಈ ಅಂಶವನ್ನು ಅರಿತು ಮನೆಯವರು ಆಕೆಯೊಂದಿಗೆ ಪ್ರೀತಿಯಿಂದ ನಡೆದುಕೊಳ್ಳಬೇಕು. ಕೆಲವು ಬಾಣಂತಿಯರನ್ನು ಕಾಡುವ ಬಾಣಂತಿ ಸನ್ನಿ ಮತ್ತು ಬಾಣಂತನದ ಖಿನ್ನತೆಯ ಲಕ್ಷಣಗಳ ಬಗ್ಗೆಯೂ ಮನೆಯ ಸದಸ್ಯರು ತಿಳಿದಿರಬೇಕು. ತಾಯಿ ಸದಾ ಮಂಕಾಗಿ ಕುಳಿತಿದ್ದರೆ, ಮಗುವಿನ ಆರೈಕೆಯಲ್ಲಿ ಆಸಕ್ತಿ ತೋರದಿದ್ದರೆ, ನಿದ್ರಾಹೀನತೆ ಅಥವಾ ಮಾನಸಿಕ ಕಿರಿಕಿರಿಯಿಂದ ಬಳಲುತ್ತಿದ್ದರೆ, ಅತಿಯಾಗಿ ಸಿಟ್ಟು, ರಂಪಾಟ ಮಾಡುತ್ತಿದ್ದರೆ ನಿರ್ಲಕ್ಷಿಸಬಾರದು. ಇದು ಮಾನಸಿಕ ಸಮಸ್ಯೆ ಇರಬಹುದು ಎಂಬುದನ್ನು ಮನಗಂಡು ಮನೋವೈದ್ಯರ ಬಳಿ ಸಮಾಲೋಚನೆಗೆ ಕರೆದೊಯ್ಯಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಪ್ರಸವದ ಬಳಿಕ ಮಹಿಳೆಯ ಆರೈಕೆಯಲ್ಲಿ ಇಂದಿಗೂ ಅವೈಜ್ಞಾನಿಕ ಪದ್ಧತಿ ಕೆಲವೆಡೆ ಅನುಸರಿಸುತ್ತಿರುವುದು ದುಃಖಕರ. ಬಾಣಂತಿಯರಿಗೆ ಕುಡಿಯಲು ಕೊಡುವ ನೀರಿನ ಪ್ರಮಾಣದಲ್ಲಿ ಕಟ್ಟುನಿಟ್ಟು, ಆಹಾರದಲ್ಲಿ ಹಣ್ಣು, ತರಕಾರಿಗಳ ನಿμÉೀಧ, ಅತಿಯಾದ ತುಪ್ಪದ ಬಳಕೆ ಮೊದಲಾದ ಅಭ್ಯಾಸಗಳು ಸಮಂಜಸವಲ್ಲ. ತಾಯಿ, ಮಗುವಿನ ಸ್ನಾನಕ್ಕೆ ಸುಡುವ ಅತಿ ಬಿಸಿಯಾದ ನೀರನ್ನೇ ಬಳಸಬೇಕೆಂಬ ಪರಿಕಲ್ಪನೆ ಕೂಡ ಅವೈಜ್ಞಾನಿಕವೇ. ಇವು ಪರೋಕ್ಷವಾಗಿ ತಾಯಿ ಮಗುವಿನ ಅನಾರೋಗ್ಯಕ್ಕೆ ಕಾರಣವಾಗಬಹುದು ಎಂದರು.
ಪ್ರಸವ ಬಹಳ ಮುಖ್ಯವಾದ ಹಂತ. ತಜ್ಞರು ಸೂಚಿಸಿದ ದಿನಾಂಕದಂದು ಅಥವಾ ಯಾವುದೇ ಅಸಾಮಾನ್ಯ ಲಕ್ಷಣಗಳು ಕಂಡುಬಂದ ತಕ್ಷಣವೇ ಆಕೆಯನ್ನು ಸುಸಜ್ಜಿತ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವುದು ಮತ್ತು ಆಕೆಗೆ ಹಿತವೆನಿಸುವ ಆಸ್ಪತ್ರೆಯಲ್ಲಿಯೇ ಪ್ರಸವಕ್ಕೆ ವ್ಯವಸ್ಥೆ ಮಾಡುವುದೂ ಮುಖ್ಯವೆನಿಸುತ್ತವೆ. ಮಧುಮೇಹ ಅಥವಾ ಏರು ರಕ್ತದೊತ್ತಡದಿಂದ ಬಳಲುವ ಗರ್ಭಿಣಿಯರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ. ಮಹಿಳೆಯರ ಆ ಹಂತದ ಸೂಕ್ಷ್ಮ ಮನಃಸ್ಥಿತಿಯನ್ನು ಕುಟುಂಬದ ಎಲ್ಲ ಸದಸ್ಯರೂ ಅರ್ಥೈಸಿಕೊಂಡಿದ್ದರೆ ಒಳಿತು ಎಂದರು. ಇದೇ ಸಂದರ್ಭದಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ಗರ್ಭಿಣಿಯರ ತಪಾಸಣೆ ಮಾಡಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ, ಶ್ರೀಧರ್, ಫಾರ್ಮಸಿ ಆಧಿಕಾರಿ ಮೋಹನ್, ಆರೋಗ್ಯ ಸುರಕ್ಷತಾಧಿಕಾರಿ ಶೋಭಾ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page