ಚಳ್ಳಕೆರೆ ಡಿ.1 ಅತಿ ಕಡಿಮೆ ನೀರಿನಲ್ಲಿ ತುಂತುರು ಹನಿ ನೀರಾವರಿ ಅಳವಡಿಸಿಕೊಂಡು ಹೆಚ್ಚು ಇಳುವರಿ ಪಡೆಯಲು ಹನಿ ನೀರಾವರಿ ಯೋಜನೆಗೆ ಕೃಷಿ ಇಲಾಖೆಯಿಂದ ಅರ್ಜಿ ಕರೆಯಲಾಗಿದ್ದ ಅರ್ಹ ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಹಾಯಕ ಕೃಷಿ ನಿರ್ಧೇಶಕ ಡಾ.ಅಶೋಕ್ ತಿಳಿಸಿದ್ದಾರೆ.
ಚಳ್ಳಕೆರೆ ತಾಲೂಕಿನಲ್ಲಿ 2023-24 ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕ (ಸ್ಪ್ರಿಂಕ್ಲರ್)ಗಳ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರ ಅರ್ಜಿ ಫಾರಂನೊಂದಿಗೆ ಆಧಾರ್ ಕಾರ್ಡ್ .ಎಫ್ ಐ ಡಿ. ಜೆರಾಕ್ಸ್, ಪಹಣಿ ಜೆರಾಕ್ಸ್, ನೀರಾವರಿ ಮೂಲದ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ 3 ಫೋಟೋಗಳೊಂದಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿ ಕೂಡಲೇ ಅರ್ಜಿ ಸಲ್ಲಿಸಬಹುದು. ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ರೈತರು ಕಡ್ಡಾಯವಾಗಿ ಆರ್.ಡಿ ನಂಬರ್ ಹೊಂದಿರುವ ಜಾತಿ ಪ್ರಮಾಣ ಪತ್ರಗಳೊಂದಿಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಕ್ಷ್ಮ ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ಸೆಟ್ ವಿತರಣೆಯ ವಿವರ ರೈತರ ವಂತಿಕೆ ಸಹಾಯಧನ ಒಟ್ಟು ಮೊತ್ತ (ರೂ.ಗಳಲ್ಲಿ)ಎರಡುವರೆ ಇಂಚಿನ
30ಪೈಪ್.5ತುಂತುರು ಹನಿ ಜೆಟ್ ಸೇರಿ ಒಟ್ಟು 26442 ರೂ ರೈತರ ವಂತಿಗೆ4667ರೂ ಸಹಾಯಧನ 21775 ರೂ ಹೆಚ್ಚಿನ ಮಾಹಿತಿಗಾಗಿ ಅಗತ್ಯ ದಾಖಲೆಗಳೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಸಲ್ಲಿಸುವಂತೆ ಸಹಾಯಕ ಕೃಷಿ ನಿರ್ಧೇಶಕ ಡಾ.ಅಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments