ಸೋಮವಾರ ಕ್ಯಾತೇದೇವರ ಬಾರೆ ಕಳ್ಳೆಯ ಗುಡಿಏರಿ ಕಳಸ ಕೀಳುವ ಪರಿಷೆ .

by | 28/01/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜ.28. ಐತಿಹಾಸಿಕ ಹಾಗೂ ಬುಡಕಟ್ಟು ಸಮುದಾಯಗಳ ಸಾಂಸ್ಕೃತಿಕ ಕೇಂದ್ರ ಚಿತ್ರದುರ್ಗ ಜಿಲ್ಲೆಯಲ್ಲಿ ಜನವರಿ-11 ರಿಂದ ಫೆ 2 ರ ವರೆಗೆ ವಿಜೃಂಬಣೆಯಿಂದ ನಡೆಯುವ ಕಾಡುಗೊಲ್ಲ ಆರಾಧ್ಯ ದೈವವಾದ ಕ್ಯಾತಪ್ಪನ ಪರಿಷೆ ಜವರಿ 29 ರ ಸೋಮವಾರ ಸುಮಾರು 4 ಗಂಟೆ ಸಮಯದಲ್ಲಿ ಬಾರೆ ಕಳ್ಳೆಗುಡಿ ಏರಿ ಕಳಸ ಕೀಳುವ ಕಾರ್ಯಕ್ರಮ ನಡೆಯಲಿದ್ದು. ಯಾವುದೇ ಜಾತಿ, ಧರ್ಮ ಬೇಧವಿಲ್ಲದೆ ಇಂದಿಗೂ ಭಾವೈಕ್ಯ ಹಾಗೂ ಸಾಮಾಜಿಕ ಸಾಮರಸ್ಯದ ದ್ಯೂತಕವಾಗಿದೆ. ಈ ಪರಿಷೆಗೆ ಆಂದ್ರಪ್ರದೇಶದ ಅನಂತಪುರ, ರಾಯದುರ್ಗ, ಕಲ್ಯಾಣದುರ್ಗ, ಬಳ್ಳಾರಿ, ಹಾವೇರಿ, ದಾರವಾಡ, ಶಿವಮೊಗ್ಗ, ಮೈಸೂರು, ಬೆಂಗಳೂರು, ಕೋಲಾರ, ತುಮಕೂರು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಸೇರುತ್ತಾರೆ.

ವಿಶಿಷ್ಟ ಆಚರಣೆ :-ಕಾಡುಗೊಲ್ಲ ಬುಡಕಟ್ಟಿನ ಹದಿಮೂರು ಗುಡಿಕಟ್ಟಿನವರು ನವಣೆ ಮತ್ತು ಹುರುಳಿ ಭತ್ತ(ವ್ರತ) ಹಾಗೂ ಮನೆ ಶುದ್ಧೀಕರಿಸಿ ಕೊಳ್ಳುವುದರರೊಂದಿಗೆ ಆಚರಣೆಗಳು ಆರಂಭವಾಗುತ್ತವೆ. ಜಾತ್ರೆ ಮುಗಿಯುವವರೆಗೆ ಹುರುಳಿ, ನವಣೆ ಬಸಳಸುವುದಾಗಲಿ, ಮುಟ್ಟುವುದಾಗಲಿ ಮತ್ತು ನವಣೆ -ಹರುಳಿ ಬೆಳೆದ ಹೊಲದಲ್ಲಿ ಹೋಗದಂತೆ ಕಟ್ಟುನಿಟ್ಟಿನ ವ್ರತವನ್ನು ಇಂದಿಗೂ ಪಾಲಿಸುತ್ತಾರೆ.

ಐತಿಹ್ಯ: ಕ್ಯಾತಪ್ಪದೇವರು ಕಾಡುಗೊಲ್ಲರಿಗೆ ಒಲಿಯುವ ಮೊದಲು ರೆಡ್ಡಿ ಜನಾಂಗದ ಹೇಮಾರೆಡ್ಡಿ ಮತ್ತು ಭೀಮಾರೆಡ್ಡಿ ರವರಿಗೆ ಒಲಿದಿತ್ತು. ಇದರಿಂದ ರೆಡ್ಡಿಗಳಿಗೆ ಶ್ರೀಮಂತಿಕೆ ಬಂತು. ಆಗ ಅಲಕ್ಷö್ಯದಿಂದ ದೇವರನ್ನು ಹುರುಳಿ-ನವಣೆ ಕಣಜದಲ್ಲಿ ಹಾಕಿ ಮುಚ್ಚಿದರು. ರೆಡ್ಡಿಗಳ ನಿರ್ಲಕ್ಷö್ಯಕ್ಕೆ ಬೇಸತ್ತ ಕ್ಯಾತೇದೇವರು ಕಾಡಿಗೊಲ್ಲರ ದನಗಾಹಿ ಬೊಮ್ಮಲಿಂಗನಿಗೆ ಒಲಿದು ಬಂದು ಗೊಲ್ಲರ ತಾಣದಲ್ಲಿ ನೆಲೆ ನಿಲ್ಲುತ್ತಾನೆ. ಗೊಲ್ಲರು ಇಂದಿಗೂ ಜಾತ್ರೆ ನಡೆಯುವ ಸಂದರ್ಭದಲ್ಲಿ ಹರುಳಿ-ನವಣೆಯ ಕಟ್ಟು ನಿಟ್ಟಿನ ವ್ರತವನ್ನು ಆಚರಿಸುತ್ತಾರೆ. ಕಾರೆ, ಬಾರೆ ಮುಳ್ಳಿನ ಗಿಡಗಳು ಹಾಗೂ ಹತ್ತಿ, ಕಳ್ಳಿ, ಬೇವಿನ (ದೇವರ) ಮರವನ್ನು ಕಡಿದು ನೆಲಕ್ಕೆ ಮುಟ್ಟಿಸದಂತೆ ಜಾತ್ರೆ ನಡೆಯುವ ಸ್ಥಳಕ್ಕೆ ಸಾಗಿಸುತ್ತಾರೆ. ಕ್ಯಾತಪ್ಪದೇವರ ಮೂಲ ನೆಲೆಯಾದ ಚನ್ನಮ್ಮನಾಗತಿಹಳ್ಳಿ ಗ್ರಾಮದ ದೇವರ ಗುಡಿ ಸುತ್ತಲೂ ಕಳ್ಳೆಯ ಬೇಲಿ ಹಾಕುತ್ತಾರೆ.

ಗುಡಿ ನಿರ್ಮಾಣ:-ಒಕ್ಕಲು ಮಕ್ಕಳು ಸಜ್ಜೆರೊಟ್ಟಿ, ಶೇಂಗಾ ಚಟ್ನಿ, ಅನ್ನ ಮೊಸರಿನ ಬುತ್ತಿ ಕಟ್ಟಿಕೊಂಡು ಗುಡಿ ನಿರ್ಮಿಸಲು ಹೋಗುತ್ತಾರೆ. ಜಾತ್ರೆ ನಡೆಯುವ ಪುರ್ಲಹಳ್ಳಿಯ ವಸಲು ದಿಬ್ಬದಲ್ಲಿ ಬೆಳಗಿನಜಾವ ಏಳು ಗಂಟೆ ಸುಮಾರಿನಲ್ಲಿ 18 ರಿಂದ 20 ಅಡಿ ಎತ್ತರದ ಬಾರೆ, ಕಾರೆ, ಬಂದ್ರೆ, ತುಗ್ಗಲಿಮೋರು ಮತ್ತು ಎರದ ಕಳ್ಳೆಯಿಂದ 20 ನಿಮಿಷಕ್ಕೆ ದೇವರ ಒಕ್ಕಲ ಮಕ್ಕಳು (ಬೊಮ್ಮನಗೊಲ್ಲರು ಹಾಗೂ ಕೋಣನ ಗೊಲ್ಲರು ) ಕಳ್ಳೆ ಮುಳ್ಳಿನಿಂದ ಗುಡಿ ನಿರ್ಮಿಸಿ ಅದರ ತುದಿಗೆ ಕಂಚಿನ ಪಂಚಕಳಶಗಳನ್ನು ಏರಿಸುತ್ತಾರೆ.
ಚನ್ನಮ್ಮನಾಗತಿಹಳ್ಳಿ ಕ್ಯಾತಪ್ಪದೇವರು, ಪರಿವಾರದ ದೇವರುಗಳಾದ ಬಂಜಗೆರೆ ವೀರಣ್ಣ, ಈರಬಡಕ್ಕ, ಆಂಧ್ರಪ್ರದೇಶ ಕಲ್ಯಾಣದುರ್ಗ ತಾಲ್ಲೂಕಿನ ತಾಳಿ ದೇವರು,ಬತವಿನದೇವರು, ಕೋಣನ ದೇವರು ಸೇರಿದಂತೆ ಎಲ್ಲಾ ಪೆಟ್ಟಿಗೆ ದೈವಗಳನ್ನು ಜಾತ್ರೆ ಜರುಗುವ ವಸಲು ದಿಬ್ಬದ ಕಳ್ಳೆಮುಳ್ಳಿನ ಬೇಲಿಗುಡಿ ಒಳಗೆ ಪ್ರತಿಷ್ಠಾಪಿಸುತ್ತಾರೆ. ಅಲ್ಲಿ ಮೊದಲಿಗೆ ಗಂಗಾಪೂಜೆ, ಹಾವಿನಗೂಡು, ಕರವಿನಗೂಡು, ಮಜ್ಜನಭಾವಿ, ಹುತ್ತದ, ಕೋಣನ ಪೂಜೆ ಮುಗಿಸಿದ ನಂತರ ಗುಂಡಿ ತೆಗೆದು ಮಧ್ಯರಾತ್ರಿ ಮಡಿಯಿಂದ ಐದು ಜನ ಮುತ್ತೆöÊದೆಯರು ಒನಕೆಯಿಂದ ನವಣೆ ಕುಟ್ಟಿ ದೇವರಿಗೆ ನೈವೇದ್ಯ ಅರ್ಪಿಸಿ, ಭಕ್ತರು ವ್ರತ ಅಳಿಯುತ್ತಾರೆ.
ಚಳ್ಳಕೆರೆ ತಾಲ್ಲೂಕು ಪುರ್ಲಹಳ್ಳಿಯ ವಸಲು ದಿಬ್ಬದಲ್ಲಿ ನಡೆಯುವ ಜಾತ್ರೆಗೆ ಬಂದ ಭಕ್ತರು ವಿವಿಧ ಹರಕೆಯನ್ನು ತೀರಿಸುತ್ತಾರೆ. ಜ.29 ರ ಸೋಮವಾರ ಮದ್ಯಾಹ್ನ 4.30ಕ್ಕೆ ಸರಿಯಾಗಿ ತಣ್ಣೀರಿನಲ್ಲಿ ಸ್ನಾನ ಮಾಡಿದ ದೇವರ ಒಕ್ಕಲಿನ ಏಳೆಂಟು ಜನ ಈರಗಾರರು ಬರಿ ಮೈ-ಬರಿಗಾಲಲ್ಲಿ ನಾ ಮುಂದು ತಾ ಮುಂದು ಎಂದು ಕೇಕೆ ಹೊಡೆಯುತ್ತ ಕಳ್ಳೆ ಮುಳ್ಳಿನಿಂದ ನಿರ್ಮಿಸಿದ ದೇವರ ಗುಡಿಯನ್ನು ಎದ್ದು ಬಿದ್ದು ಹೊರಳಾಡುತ್ತಾ ಹುರುಪಿನಿಂದ ಗುಡಿ ಮೇಲೆ ಹತ್ತಿ ಕಳಶ ಕೀಳಲು ಕೇಲವೇ ನಿಮಿಷಗಳಲ್ಲಿ ನಡೆದು ಹೋಗುತ್ತದೆ. ಈ ಕ್ರಿಯೆ ನೋಡುಗರಲ್ಲಿ ಆಶ್ಚರ್ಯ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page