ಸ್ಥಳೀಯ ಬಿಜೆಪಿ ಆಕಾಂಕ್ಷಿಕಗಳಿಗೆ ಟಿಕೇಟ್ ನೀಡುವಂತೆ ತಾಪಂ ಮಾಜಿ ಅಧ್ಯಕ್ಷ ಅಜ್ಜಪ್ಪ

by | 17/03/23 | ರಾಜಕೀಯ


ಚಳ್ಳಕೆರೆ ಜನಧ್ವನಿ ವಾರ್ತೆ ಮಾ.17
ಸ್ಥಳಿಯ ಹಾಗೂ ವಯೋನಿವೃತ್ತಿ ಹೊಂದಿದ ಅಧಿಕಾರಿ ಪ್ರಭಲ ಬಿಜೆಪಿ ಪಕ್ಷದ ಟಿಕೇಟ್ ಆಕಾಂಕ್ಷಿಯಾದ ಜಯರಾಂಇವರಿಗೆ ಟಿಕೇಟ್ ನೀಡುವಂತೆ ತಾಪಂ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ.ಉಪ್ಪಾರಹಟ್ಟಿ ಅಜ್ಜಣ್ಣ ಮನವಿ ಮಾಡಿಕೊಂಡಿದ್ದಾರೆ.
ನಗರದ ಮಹದೇವಿ ರಸ್ತೆಯಲ್ಲಿರುವ ಬಿಜೆಪಿ ಟಿಕೇಟ್ ಆಕಾಂಕ್ಷಿ ಜಯರಾಂ ಕಚೆರಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ರೋಡ್ ಷೋ ಮುನ್ನ ಪಕ್ಷದ ಕಾರ್ಯಕರ್ತರಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಯರಾಂ ಇವರು ಸರಕಾರಿ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸು ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿ ಪ್ರದಾನಿ ಮೋದಿಯವರ ಉತ್ತಮ ಆಡಳೀತ ಹಾಗೂ ಜನ ಪರ ಯೋಜನೆ, ಪಕ್ಷದ ಸಿದ್ದಾಂತವನ್ನು ಮೆಚ್ಚಿ ಸರಕಾರಿ ಹುದ್ದೆಗೆ ಸ್ವಯಂ ನಿವೃತ್ತಿ ಪಡೆದು ರಾಜಕೀಯ ಅಕಾಡಕ್ಕೆ ಇಳಿದಿದ್ದು ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದವರಾಗಿದ್ದು ಈಗಾಗಲೆ ಕ್ಷೇತ್ರದಲ್ಲಿಎರಡು ಬಾರೀಗೂ ಹೆಚ್ಚು ಪ್ರವಾಸ ಮಾಡಿ ಮತದಾರರನ್ನು ಭೇಟಿ ಯಾಗುವುದ ಮೂಲಕ ಜನರಲ್ಲಿ ಚಿರಪರಿಚಿತರಾಗಿದ್ದಾರೆ ಇವರಿಗೆ ಬಿಜೆಪಿ ಪಕ್ಷದವತಿಯಿಂದ ಟಿಕೇಟ್ ನೀಡಿದರು ಗೆಲವುದು ಖಚಿತ ಎಂದು ತಿಳಿಸಿದರು.
ಬಿಜೆಪಿ ಟಿಕೇಟ್ ಆಕಾಂಕ್ಷಿ ಎಂ.ಎಸ್.ಜಯರಾಂಮಾತನಾಡಿ ಚಳ್ಳಕೆರೆ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿದರೆ 40ಸಾವಿರ ಅಂತರದಲ್ಲಿ ಗೆಲುವು ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಿ ಪಡೆಸಿದರು.

ನಾನು ಉಪನ್ಯಾಸಕನಾಗಿ ,ಉನ್ನತ ಉದ್ದೆ ಅಲಂಕರಿಸಿ ಜನ ಸೇವೆ ಮಾಡುವ ಉದ್ದೇಶದಿಂದ ನಾನು 2019ರಲ್ಲಿ ಸರಕಾರಿ ನೌಕರಿಗೆ ಸ್ವಯಂ ನಿವೃತ್ತಿ ಪಡೆದು ಪ್ರದಾನಿ ನರೇಂದ್ರಮೋದಿ ಆಡಳಿತ ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಬಿಜೆಪಿ ಪಕ್ಷಕ್ಕೆ ಸರ್ಪಡೆಯಾಗಿ ಕಳೆದು ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡಿ ಬಿಜೆಪಿ ಪಕ್ಷ ಸಂಘಟನೆ ಮಾಡಿಕೊಂಡು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮತದಾರರಿಗೆ ಅರಿವು ಮೂಡಿಸುತ್ತಾ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದೇನೆ.
ನಾನೂ ಸ್ಥಳಿಯವಾಗಿದ್ದು ನನ್ನ ಖಾಯಂ ಮತಗಳು 15ಸಾವಿರಕ್ಕೂ ಹೆಚ್ಚು ಇದ್ದು ಪ್ರತಿಯೊಂದು ಸಮುದಾಯದವರು ನನಗೆ ಬೆಂಬಲ ಸೂಚಿಸುತ್ತಿದ್ದಾರೆ, ಬಿಜೆಪಿ ತತ್ವ ಸಿದ್ದಾಂತದAತೆ ನಾನು ಪಕ್ಷದಕ್ಕೆ ದುಡಿಯುತ್ತಿದ್ದೇನೆ ನನಗೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡುವ ಭರವಸೆ ಇದೆ ಆದ್ದರಿಂದ ಈಗಾಗಲೆ ಕ್ಷೇತ್ರದಲ್ಲಿ ಮುರು ಬಾರಿ ಮತದಾರರನ್ನು ಭೇಟಿಯಾಗಿದ್ದೇನೆ, ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಕಿರಿ ಕಿರಿ ಮಾಡದೆ ಕೆಲವೇ ಕಾರ್ಯಕರ್ತರೊದಂದಿಗೆ ಸರಳವಾಗಿ ಎಲೆಮರೆಕಾಯಿಯಂತೆ ಪ್ರಚಾರ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಉಪ್ಪಾರ ಸಂಘದ ಮಾಜಿ ತಾಲೂಕು ಅಧ್ಯಕ್ಷ ವೈ.ಯಲ್ಲಪ್ಪ ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page