ಚಿತ್ರದುರ್ಗ ಆ.23: 2023-24ನೇ ಸಾಲಿಗೆ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕು ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳ ಮೌಲ್ಯಗಳನ್ನು ಪರಿಷ್ಕರಿಸುವ ಕುರಿತು, ಆಯಾ ತಹಶೀಲ್ದಾರ ನೇತೃತ್ವದಲ್ಲಿ ಮೌರುಕಟ್ಟೆ ಮೌಲ್ಯ ಮಾಪನ ಉಪ ಸಮಿತಿ ಸಭೆಗಳನ್ನು ಜರುಗಿಸಲಾಗಿದೆ.
ಸಭೆಯಲ್ಲಿ ಸ್ಥಿರಾಸ್ತಿಗಳ ತಾತ್ಕಾಲಿಕ ಅಂದಾಜು ದರಪಟ್ಟಿಯನ್ನು ಸರ್ವಾನುಮತದಿಂದ ಅಂಗೀಕರಿಸಿ, ಸಾರ್ವಜನಿಕರ ಅವಗಹಾನೆಗೆ ಆಯಾ ತಾಲ್ಲೂಕು ಉಪನೋಂದಣಾಧಿಕಾರಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಪರಿಷ್ಕೃತ ಮಾರುಕಟ್ಟೆ ಮೌಲ್ಯಮಾಪನ ಅಂದಾಜು ಪಟ್ಟಿಗೆ ಸಾರ್ವಜನಿಕರ ಅಹವಾಲು, ಆಕ್ಷೇಪಣೆ, ಸಲಹೆ, ಸೂಚನೆಗಳು ಇದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ 15 ದಿನಗಳ ಒಳಗಾಗಿ ಆಯಾ ತಹಶೀಲ್ದಾರ್ ಅಥವಾ ಉಪನೋಂದಣಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments