ಹಣ ಕಳವು ಮಾಡುತ್ತಿದ್ದ ಅಂತರ ರಾಜ್ಯ ಕಳ್ಳರನ್ನು ಬಂದಿಸುವಲ್ಲಿ ಹೊಸದುರ್ಗ ಪೋಲಿಸರು ಯಶಸ್ವಿ.

by | 27/12/23 | ಕ್ರೈಂ

ಹೊಸದುರ್ಗ ಡಿ.27ದಿನಾಂಕ 22.11.2023 ರಂದು ಹೊಸದುರ್ಗ ಟೌನ್ ಹುಳಿಯಾರು ರಸ್ತೆಯಲ್ಲಿ ಬರುವ ಬ್ಯಾಂಕ್ಅ ಫ್ ಬರೋಡ ಬ್ಯಾಂಕಿನ ಮುಂಭಾಗದಲ್ಲಿ ನಿಂತಿದ್ದ ಕೆಎ-06-ಇನ್-5031 ನೇ ಸ್ವಿಫ್ಟ್ ಕಾರಿನ ಗ್ಲಾಸ್ಅನ್ನು ಹೊಡೆದು ಕಾರಿನ ಒಳಗೆ ಇದ್ದ ಒಟ್ಟು 10 ಲಕ್ಷ ರೂ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ಹೊಸದುರ್ಗ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ಒರ್ತೆ ಮಾಡಲು ತಂಡ ರಚನೆ ಮಾಡಲಾಗಿತ್ತು
ಸದರಿ ಪ್ರಕರಣದಲ್ಲಿ ಕಳುವಾದ ಹಣ ಮತ್ತು ಆರೋಪಿತರನ್ನು ಪತ್ತೆ ಮಾಡಲು ಹೊಸದುರ್ಗ
ಪೊಲೀಸ್ ನಿರೀಕ್ಷಕರಾದ .ತಿಮ್ಮಣ್ಣ ಎನ್ ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ತಂಡ ರಚಿಸಿದ್ದು,
ಸದರಿಯವರು ಆರೋಪಿತರ ಪತ್ತೆಯ ಬಗ್ಗೆ ತಾಂತ್ರಿಕ ಸಹಾಯದಿಂದ ಅಂತರರಾಜ್ಯ ಕಳ್ಳರನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾ ಬಾನಾಲ (41) ಪಡೆದುಕೊಂಡು ವಿಚಾರಣೆ ನಡೆಸಿ
ಆರೋಪಿತನ ಕಡೆಯಿಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 7,02,000/- ರೂ ನಗದು ಹಣವನ್ನು
ವಶಪಡಿಸಿಕೊಳ್ಳಲಾಗಿರುತ್ತದೆ.
ಈ ಪ್ರಕರಣದಲ್ಲಿನ ಆರೋಪಿತರು ಬ್ಯಾಂಕ್ ಹಾಗೂ ಹಣದ ವಹಿವಾಟು ನಡೆಯುವ ಸ್ಥಳಗಳಲ್ಲಿ
ವಿಶೇಷವಾಗಿ ಬ್ಯಾಂಕ್‌ಗಳ ಬಳಿ ನಿಗಾ ವಹಿಸಿ 2 ಜನ ಬ್ಯಾಂಕಿನ ಒಳಗಡೆ ಹಾಗೂ 2 ಜನ ಮೋಟಾರ್
ಬೈಕಿನಲ್ಲಿ ಹೊರಗಡೆ ಇದ್ದು, ಇವರು ಬ್ಯಾಂಕಿನಿಂದ ಹೆಚ್ಚಿನ ಹಣವನ್ನು ತರುವ ವ್ಯಕ್ತಿಯನ್ನು ಹಿಂಬಾಲಿಸಿ ಆ
ವ್ಯಕ್ತಿ ಸದರಿ ಹಣವನ್ನು ಕಾರಿನಲ್ಲಿ ಅಥವಾ ಬೈಕಿನಲ್ಲಿ ಇಟ್ಟಾಗ ಇವರೊಂದಿಗೆ ಬಂದ ಇನ್ನೊಬ್ಬ ವ್ಯಕ್ತಿ
ಚಾಟರ್ ಬಿಲ್ ಅಥವಾ ರಬ್ಬರ್ ಬ್ಯಾಂಡ್ ನ ಸಹಾಯದಿಂದ ಕಾರಿನ ಗ್ಲಾಸನ್ನು ಕಲ್ಲಿನಿಂದ ಹೊಡೆದು
ಅಲ್ಲಿದ್ದ ಹಣವನ್ನು ಲಪಟಾಯಿಸುವುದು ಇವರ ವೃತ್ತಿಯಾಗಿರುತ್ತದೆ. ಆರೋಪಿತರು ರೈಲ್ವೆ ಸ್ಟೇಷನ್‌ ಸುತ್ತ
ಮುತ್ತ ತಮ್ಮ ಮನೆಗಳನ್ನು ಮಾಡಿಕೊಂಡು ಅಕ್ಕಪಕ್ಕ ದವರಿಗೆ ಸಂಶಯ ಬಾರದಂತೆ ತಾವು ರೈಲ್ವೆ
ಕೆಲಸದವರು ಎಂಬಂತೆ ನಂಬಿಕೆ ಬರುವಂತೆ ಮಾಡುತ್ತಾರೆ. ಪೊಲೀಸ್ಆದ್ದರಿಂದ ಚಿತ್ರದುರ್ಗ
ವತಿಯಿಂದ ಸಾರ್ವಜನಿಕರಲ್ಲಿ ಮನವಿ ಮಾಡುವುದೇನೆಂದರೆ ತಾವು ಬ್ಯಾಂಕ್‌ಗಳಲ್ಲಿ ಹಣ ವಹಿವಾಟು ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು
ಮತ್ತು ಸುರಕ್ಷಿತರಾಗಿರಬೇಕು. ಸದರಿ ಪತ್ತೆ ಕಾರ್ಯ ಮಾಡಿದ ಹೊಸದುರ್ಗ ಪೊಲೀಸರ ತಂಡಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರುಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page