ಚಳ್ಳಕೆರೆ ಜ.9 ವಿದ್ಯಾರ್ಥಿಯೋರ್ವ ಮನೆಯಲ್ಲಿ ಆತ್ಮಹತ್ಯೆಗೆ ಶರಗಾಗಿರುವ ಘಟನೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಳ್ಳಕೆರೆ ನಗರದ ವಾಸವಿ ಕಾಲೋನಿಯ ವೆಂಕಟೇಶ ಎಂಬುವರ ಪುತ್ರ ಮುಕುಂದ(15) ವಾಸವಿ ವಿದ್ಯಾಸಂಸ್ಥೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಮನೆಯಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಮೃತ ವಿದ್ಯಾರ್ಥಿ ವ್ಯಾಸಂಗದಲ್ಲಿ ಶಾಲೆಗೆ ಪ್ರಥಮ ಹಾಗೂ ಚೆಸ್ ಆಟದಲ್ಲಿ ರಾಜ್ಯ ಮಟ್ಟದ ಕ್ರೀಡಾಪಟು ಎನ್ನಲಾಗಿದೆ . ಮೃತನ ಕುಟುಂಬಸ್ಥರು ಚಳ್ಳಕೆರೆ ಠಾಣೆಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪ್ರಕರ ದಾಖಲು ಮಾಡಿಕೊಂಡಿದ್ದಾರೆ ಮೃತನ ಕುಟುಂಬಸ್ಥರ ರೋದನ ಮುಗಿಲು ಮುಟ್ಟುವಂತಿತ್ತು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments