‌ಹಳೆ ವೈಶಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬ ತಂದೆ ಮತ್ತು ಮಗನಿಗೆ ಚಾಕುವಿನಿಂದ ಇರಿತ.ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಘಟನೆ.

by | 19/12/23 | ಕ್ರೈಂ

ಜಗಳೂರು ಡಿ.19 ‌ಹಳೆ ವೈಶಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬ ತಂದೆ ಮತ್ತು ಮಗನಿಗೆ ಚಾಕುವಿನಿಂದ ಇರಿತ.ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಘಟನೆ.

ಗೌರಿಪುರ ಗ್ರಾಮದ ಚಂದ್ರಪ್ಪ ಮತ್ತು ಅವರ ಪುತ್ರ ಹೇಮಂತ್ ಗಾಯಗೊಂಡವರು.

ಹಾಲಸ್ವಾಮಿ ಚಾಕುವಿನಿಂದ ಇರಿದ ವ್ಯಕ್ತಿ.

ಚಂದ್ರಪ್ಪ ಮತ್ತು ಅವರ ಪುತ್ರ ಹೇಮಂತ್ ಜಿಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲು.

ಹಾಲಸ್ವಾಮಿ ಕೂಡ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಯಲ್ಲಿ ದಾಖಲು.


ಘಟನೆ ಹಿನ್ನೆಲೆ:

ಕಳೆದ ವರ್ಷ ಕ್ಯಾಸೆನಹಳ್ಳಿ ಗ್ರಾಪಂನಲ್ಲಿ ನರೇಗಾ ಕಾಮಗಾರಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಹೊಸಕೆರೆ ಗ್ರಾಮದ ಮಾಯಮ್ಮ ಡಾಬಾದಲ್ಲಿ ರಾಮಕೃಷ್ಣ ಎಂಬ ಯುವಕನ ಕೊಲೆಯಾಗಿತ್ತು.

ಪ್ರಕರಣದ ಆರೋಪಿಗಳಾದ ಪಿಡಿಒ ಎ.ಟಿ.ನಾಗರಾಜ್ ಹಾಗೂ ಅವರ ಸಹೋದರ ಎ.ಟಿ.ಪ್ರಭು ಮತ್ತು ಧನ್ಯಕುಮಾರ್ ಸೇರಿ ಅನೇಕರ ವಿರುದ್ದ ಕೇಸ್ ದಾಖಲಿಸಲಾಗಿತ್ತು.


ಕೊಲೆ ಪ್ರಕರಣ ಆರೋಪ ಹೊತ್ತಿರುವ ಧನ್ಯಕುಮಾರ್‌ಗೆ ಜಮೀನು ನೀಡಲು ಸಹಕಾರ ನೀಡುತ್ತಿದ್ದೀರಿ ಎಂದು ಅನುಮಾಸಿ ಕೊಲೆಯಾದ ರಾಮಕೃಷ್ಣ ಸಹೋದರ ಹಾಲಸ್ವಾಮಿ ಡಿ.೧೮ರ ಸೋಮವಾರ ರಾತ್ರಿ ಚಂದ್ರಪ್ಪ ಮತ್ತು ಅವರ ಪುತ್ರ ಹೇಮಂತ್ ಜತೆಗೆ ಜಗಳ ತೆಗೆದಿದ್ದಾನೆ.

ಅಷ್ಟೇ ಅಲ್ಲ ಬುಧವಾರ ಬೆಳಿಗ್ಗೆ ಚಂದ್ರಪ್ಪ ಅವರ ಮನೆ ಬಳಿ ಬಂದು ಚಾಕುವಿನಿಂದ ತಂದೆ ಮತ್ತು ಮಗನ ಬೆನ್ನು ಮತ್ತು ಎದೆಗೆ ಇರಿದಿದ್ದಾನೆ.

ಆಗ ತಮ್ಮನ್ನು ರಕ್ಷಣೆ ಮಾಡಿಕೊಳ್ಳಲು ಬಡಿಗೆಗಳನ್ನು ಹಿಡಿದು ಬೆನ್ನು ಹತ್ತಿದ ಚಂದ್ರಪ್ಪ ಮತ್ತು ಹೇಮಂತ್, ಅವರಿಂದ ತಪ್ಪಿಸಿಕೊಳ್ಳಲು ಹೋದ ಹಾಲಸ್ವಾಮಿ ನಿಂತಿದ್ದ ಟ್ರ್ಯಾಕ್ಟರ್ ಅಡಿ ನುಗ್ಗುವಾಗ ಕಬ್ಬಿಣ ತಲೆಗೆ ಬಡಿದು ಬಲವಾದ ಪೆಟ್ಟು ಬಿದ್ದಿದ್ದು ದಾವಣಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇತ್ತ ಹಾಲಸ್ವಾಮಿಯಿಂದ ಚಾಕು ಇರಿತಕ್ಕೆ ಒಳಗಾದ ಚಂದ್ರಪ್ಪ ಮತ್ತು ಹೇಮಂತ್‌ಗೆ ಎದೆ ಮತ್ತು ಬೆನ್ನಿಗೆ ಬಲವಾದ ಇರಿತಗಳಾಗಿದ್ದು, ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ಸಂಬಂಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು ದಾಖಲಾಗಿವೆ.

ಪಿಐ ಎಂ.ಶ್ರೀನಿವಾಸ್, ಪಿಎಸ್‌ಐ ಎಸ್.ಡಿ.ಸಾಗರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಸಂಬAಧ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗೌರಿಪುರ ಗ್ರಾಮದಲ್ಲಿ ರಿಸರ್ವ್ ಪೋಲಿಸರನ್ನು ನಿಯೋಜನೆ ಮಾಡಲಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page