ಹೊಸದುರ್ಗ .. ಹೊಸದುರ್ಗ ತಾಲೂಕಿನ ನಾಗನಾಯಕನಕಟ್ಟೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದೆ.
21 ವರ್ಷದ ಮನೋಜ್ ಕೊಲೆಯಾದ ಯುವಕ.
ಗ್ರಾಮದಲ್ಲಿ ಹಬ್ಬ ನಡೆಯುತ್ತಿದ್ದಾಗಲೇ ಮನೋಜ್ ಹಾಗೂ ರಘು ಮತ್ತಿತರರ ನಡುವೆ ಗಲಾಟೆ ನಡೆದಿದ್ದು, ಚಾಕುವಿನಿಂದ ಇರಿದಿದ್ದಾರೆ.
ತಕ್ಷಣ ಮನೋಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಹಿರಿಯೂರು ತಾಲೂಕಿನ ಸೋಮೆನಹಳ್ಳಿ ತಾಂಡಾದ ರಘು ಹಾಗೂ ಮನೋಜ್ ನಡುವೆ ಹಳೆಯ ವೈಷಮ್ಯ ಇತ್ತು ಎನ್ನಲಾಗಿದೆ.
ಇಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಸ್ಥಳಕ್ಕೆ ಶ್ರೀರಾಂಪುರ ಪೊಲೀಸ್ ಠಾಣೆ ಸಿಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
0 Comments