ಚಳ್ಳಕೆರೆ ಜನಧ್ವನಿ ವಾರ್ತೆ ಮೇ 4ಮೇ
ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತುರುನೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ರವಿಶ್ಕುಮಾರ ಪರ ರೋಡ್ ಶೋ ಹಾಗೂ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಸಭೆ ನಡೆಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿ ರಾಜ್ಯದಲ್ಲಿ ಕುಮಾರಣ್ಣ ನವರು ಮಾಡಿರುವ ಜನಪರವಾದ ಕಾರ್ಯಗಳೇ ನಮ್ಮೆಲ್ಲರಿಗೆ ವರದಾನವಾಗಿವೆ. ಹಿಂದುಳಿದ ವರ್ಗ, ಕೂಲಿ ಕಾರ್ಮಿಕರು ಹಾಗೂ ಶೋಷಿತ ವರ್ಗದವರ ಅಭಿವೃದ್ದಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದು ಕಡಿಮೆ ಅಂತರದಲ್ಲಿ ಸೋತಿದ್ದ ನಮ್ಮ ಅಭ್ಯೃರ್ಥಿ ಎಂ.ರವೀಶ್ಕುಮಾರ್ ರವರಿಗೆ ಈ ಬಾರಿ ನಿಮ್ಮೆಲ್ಲರ ಆಶೀರ್ವಾದದಿಂದ ಹೆಚ್ಚಿನ ಮತಗಳನ್ನು ನೀಡಬೇಕಾಗಿದೆ. ಕ್ಷೇತ್ರದಲ್ಲಿ ರವೀಶ್ ಕುಮಾರ್ ರವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕುಮಾರಣ್ಣ ರವರನ್ನು ಮುಖ್ಯಮಂತ್ರಿಯನ್ನಾಗಿ ಕಾಣುವುದೇ ನಮ್ಮೆಲ್ಲರ ಕನಸಾಗಿದೆ. ಮೇ 10 ರಂದು ನಡೆಯಲಿರುವ ವಿಧಾನ ಸಭೆ ಚುನಾವನೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಗೆ ಮತನೀಡುವ ಮೂಲಕ ನನಸು ಮಾಡುವ ಜವಾಬ್ದಾರಿ ಕ್ಷೇತ್ರದಲ್ಲಿನ ಪ್ರತಿಯೊಬ್ಬ ಮತದಾರರ ಮೇಲಿದೆ ಎಂದು ಹೇಳಿದರು.
ಜೆಡಿಎಸ್ ಅಭ್ಯೃರ್ಥಿ ಎಂ,ರವೀಶ್ ಕುಮಾರ್ ಮಾತನಾಡಿ ಕುಮಾರಣ್ಣಮುಖ್ಯಮಂತ್ರಿ ಅವಧಿಯಲ್ಲಿ ರೈತರ ಸಾಲ ಮನ್ನ, ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಸುವರ್ಣ ಗ್ರಾಮಯೋಜನೆ. ಪಂಚರತ್ನ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ.
ರಾಜ್ಯದ ಯಾವುದೇ ಮೂಲೆಯಲ್ಲಾದರೂ ಬಡ ಕುಟುಂಬದಲ್ಲಿ ಯಾರಿಗಾದ ಗಂಭೀಲಕಾಯಿಲೆಗೆ ಚಿಕಿತ್ಸೆಪಡೆಯಲು ಹಣದ ಕೊರತೆ ಇದ್ದರೆ ಅಂತಹ ಕುಟುಂಬಗಳಿಗೆ ಹಣ ಹಾಗೂ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆಗೆ ನೆರವಾಗುತ್ತಾರೆ. ಚಳ್ಳಕೆರೆ ಕ್ಷೇತ್ರಕ್ಕೆ ಪಂಚರತ್ನ ಯಾತ್ರೆ ಬಂದ ಸಂಬAಧದಲ್ಲಿ ಬಿಸಿನೀರು ಮುದ್ದಪ್ಪಸರಕಾರಿ ಪ್ರೌಢಶಾಲೆ ಆವರಣದಲ್ಲಿ ಬಹಿರಂಗ ಸಭೆಯಲ್ಲಿ ಕುಮಾರಣ್ಣ ಮಾತನಾಡುವಾಗ, ತಾಲೂಕಿನ ಕಾಪರಹಳ್ಳಿ ಗ್ರಾಮದ ಬಡಕುಟುಂಬದ ೬ ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಗೆ ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯಲು ಹಣದ ಕೊರತೆ ಇದೆ ಈಗಾಗಲೆ ಸಾಲ ಮಾಡಿ ಸಾಕಷ್ಟು ಹಣ ಖರ್ಚು ಮಾಡಿದ್ದೇನೆ ನಮ್ಮಮಗಳಿಗೆ ಚಿಕಿತ್ಸೆಗೆ ನೆರವು ನೀಡಿ ಎಂದು ಮನವಿ ಮಾಡಿಕೊಂಡಾಗ ತಕ್ಷಣ ಸ್ಪಂಧಿಸಿ ಬೆಂಗಳೂರಿನ ಇಂದಿರಾಗಾAಧಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ವೈಯುಕ್ತ ಹಣ ಸಹಾಯ ಮಾಡಿರುತ್ತಾರೆ ಇಂತಹ ಕುಮಾರಣ್ಣ ಮತ್ತೆ ಮುಖ್ಯಮಂತ್ರಿಯಾಗಾದರೆ ಮತದಾರರು ಜೆಡಿಎಸ್ ಪಕ್ಷಕ್ಕೆ ಮತನೀಡಿದಾರೆ ಅಧಿಕಾರಕ್ಕೆ ಬಂದ ತಕ್ಷಣ ಪಂಚರತ್ನ ಯೋಜನೆಗಳನ್ನುಜಾರಿಗೊಳಿಸಲಾಗುವುದು ಎಂದತು ತಿಲಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು. ಅಪಾರ ಅಭಿಮಾನಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments