ಹಿರಿಯೂರನ್ನು ಶಿಕ್ಷಣಕಾಶಿಯನ್ನಾಗಿಸಲು ಯೋಜನೆಯನ್ನು ರೂಪಿಸಲಾಗಿದೆ : ಜಿಲ್ಲಾಉಸ್ತುವಾರಿಸಚಿವ ಡಿ.ಸುಧಾಕರ್

by | 07/11/23 | ಶಿಕ್ಷಣ


ಹಿರಿಯೂರು :
ಆಡಳಿತರೂಢ ಕಾಂಗ್ರೆಸ್ ಸರ್ಕಾರ ದಕ್ಷಿಣ ಕಾಶಿ ಎಂದೇ ಖ್ಯಾತಿಯಾಗಿರುವ ಹಿರಿಯೂರು ಕ್ಷೇತ್ರವನ್ನು ಶಿಕ್ಷಣಕಾಶಿಯನ್ನಾಗಿ ಮಾಡಲು ಹಲವಾರು ಪ್ರಗತಿಪರ ಯೋಜನೆಗಳನ್ನು ರೂಪಿಸಲಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಸೋಮವಾರದಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ “ವಿಜಯವಾಣಿ” ಪತ್ರಿಕೆಯ ವಿದ್ಯಾರ್ಥಿ ಮಿತ್ರ ಸಂಚಿಕೆಯನ್ನು ವಿತರಿಸಿ, ನಂತರ ಅವರು ಮಾತನಾಡಿದರು.
ತಾಲೂಕಿನ ಸಮಗ್ರ ಅಭಿವೃದ್ಧಿಯ ಜೊತೆಗೆ ಶೈಕ್ಷಣಿಕ ಪ್ರಗತಿಗೂ ಆದ್ಯತೆ ನೀಡಲಾಗುವುದು ಈ ಬಾರಿಯ 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಮತ್ತು ರ್ಯಾಂಕ್ ಪಡೆಯುವ ಹಿರಿಯೂರಿನ ವಿದ್ಯಾರ್ಥಿಗಳಿಗೆ 50 ಸಾವಿರ ಹಾಗೂ ಶೇ 100 ಫಲಿತಾಂಶ ಪಡೆಯುವ ಶಾಲೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಹೇಳಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಹಿರಿಯೂರು ಮೊದಲ ಸ್ಥಾನಕ್ಕೆ ಲಗ್ಗೆ ಹಾಕಬೇಕು. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಸಹಕಾರ ನೀಡಲು ನಾನು ಸಿದ್ಧನಿದ್ದೇನೆ. ಶಿಕ್ಷಕರ ಮಾರ್ಗದರ್ಶನ, ಪಾಲಕರ ಸಹಕಾರ , ವಿದ್ಯಾರ್ಥಿಗಳ ಶ್ರಮ ಸೇರಿದರೆ ಈ ಸಾಧನೆ ಕಷ್ಟವೇನಲ್ಲ ಎಂಬುದಾಗಿ ಸಚಿವರು ಹೇಳಿದರು.
ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ವಿದ್ಯಾರ್ಥಿಮಿತ್ರ ಸಂಚಿಕೆ ರೂಪಿಸಲಾಗಿದ್ದು, ಇದು ವಿದ್ಯಾರ್ಥಿಗಳ ಸಾಧನೆಗೆ ದಾರಿದೀಪವಾಗಿದೆ. ಎಂದರಲ್ಲದೆ, ಇಂದಿನ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ , ನೈತಿಕ ಮೌಲ್ಯ, ನಡೆ-ನುಡಿ , ಸಂಸ್ಕೃತಿ ಅಳವಡಿಸಿಕೊಳ್ಳುವ ಕಲಿಸುವ ಜವಾಬ್ದಾರಿ ಶಾಲೆಯ ಶಿಕ್ಷಕರು, ಹಾಗೂ ಪಾಲಕರ ಮೇಲಿದೆ ಎಂದು ಹೇಳಿದರು.
ಈ ತಾಲ್ಲೂಕಿನ ಅತ್ಯಂತ ಕಡುಬಡವರ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಲಾಗುವುದು, ಬಬ್ಬೂರು ಕೃಷಿ ವಿಜ್ಞಾನಸಂಶೋಧನಾ ಕೇಂದ್ರ, ತೋಟಗಾರಿಕೆ ಕಾಲೇಜ್ ಕ್ಯಾಂಪಸ್ ನಲ್ಲಿ ಇಂಜಿನಿಯರಿಂಗ್ ಕಾಲೇಜು, ತೋಟಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ಇದೆ ಎಂದರಲ್ಲದೆ,
ಕಳೆದ 2008 ರಲ್ಲಿ ಮಂತ್ರಿಯಾದ ನಂತರ ನಾನು ಮೊದಲು ಭೇಟಿ ನೀಡಿದ್ದು, ಸರ್ಕಾರಿ ಜೂನಿಯರ್ ಕಾಲೇಜಿಗೆ, ಈ ಶಾಲೆ ನೂರಾರು ಜನರಿಗೆ ಅಕ್ಷರ ಜ್ಞಾನ ನೀಡಿ, ಅವರ ಭವಿಷ್ಯವನ್ನು ಉಜ್ವಲವಾಗಿಸಿರುವ, ಸರ್ಕಾರಿ ಜೂನಿಯರ್ ಕಾಲೇಜಿನ ಶಿಕ್ಷಕರು ಹಾಗೂ ಸಿಬ್ಬಂದಿವರ್ಗದವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ.ನವೀನ್ ರವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ , ನಗರಸಭೆ ಸದಸ್ಯರುಗಳಾದ ಮಮತಾ , ಶಿವರಂಜನಿ , ಮಾಜಿ ಸದಸ್ಯ ಜಿ.ಪ್ರೇಮ್ ಕುಮಾರ್ , ಜಿಪಂ ಮಾಜಿ ಸದಸ್ಯ ಆರ್.ನಾಗೇಂದ್ರನಾಯ್ಕ್, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶ್ ಬಾಬು , ಕಲ್ಲಹಟ್ಟಿ ಹರೀಶ್ , ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಫಕ್ರುದ್ಧೀನ್ ,ಉಪಪ್ರಾಚಾರ್ಯ ಸಿ.ಎಸ್ .ರಾಮಚಂದ್ರಪ್ಪ, ಶಿಕ್ಷಕರಾದ ಆರ್.ವೆಂಕಟೇಶ್, ಕೆ.ರಾಮಚಂದ್ರಪ್ಪ, ಪಿಟ್ಲಾಲಿ ರವಿ , ವಿಜಯವಾಣಿ ವಿಶೇಷ ವರದಿಗಾರ ನಾಗರಾಜ್ ಶ್ರೇಷ್ಠಿ, ಜಾಹಿರಾತು ವಿಭಾಗದ ಶುಭಕರ್, ತಾಲ್ಲೂಕು ವರದಿಗಾರ ಖಂಡೇನಹಳ್ಳಿ ಬಸವರಾಜ್ ಇತರರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *