ಹಿರಿಯೂರುರೇಷ್ಮೆಇಲಾಖೆಯನ್ನ ಈಗ ಇರುವ ಸ್ಥಳದಲ್ಲಿಯೇ ಮುಂದುವರೆಸಲು ರೈತಮುಖಂಡ ಹೊರಕೇರಪ್ಪ ಒತ್ತಾಯ

by | 23/02/23 | ಪ್ರತಿಭಟನೆ

ಹಿರಿಯೂರು ಫೆ.23
ಹಿರಿಯೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ರೇಷ್ಮೆ ಬೆಳೆಗಾರರಿದ್ದು, ರೇಷ್ಮೆ ಇಲಾಖೆ ಕಚೇರಿಯು ನಗರದ ತಾಲ್ಲೂಕು ಕಚೇರಿ ಪಕ್ಕದಲ್ಲಿದ್ದು, ಕಚೇರಿಯು ರೈತರಿಗೆ ತುಂಬಾ ಉಪಯುಕ್ತವಾದ ಸ್ಥಳದಲ್ಲಿರುತ್ತದೆ, ಈ ಕಚೇರಿಯನ್ನು ಹಾಲಿ ಇರುವ ಸ್ಥಳದಲ್ಲಿಯೇ ಮುಂದುವರೆಸಿಕೊಂಡು ಹೋಗಬೇಕು ಎಂಬುದಾಗಿ ರೈತಸಂಘದ ಜಿಲ್ಲಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ ಒತ್ತಾಯಿಸಿದರು.
ತಾಲ್ಲೂಕು ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಹಿರಿಯೂರು ನಗರದ ರೇಷ್ಮೆ ಇಲಾಖೆ ಕಚೇರಿಯನ್ನು ಹಾಲಿ ಇರುವ ಸ್ಥಳದಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ದಿವಾಕರ್ ರವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ತಾಲ್ಲೂಕು ಕಚೇರಿ ಪಕ್ಕದಲ್ಲೇ ರೇಷ್ಮೆ ಇಲಾಖೆ ಕಚೇರಿಯಿದ್ದು, ಇದಕ್ಕೆ ಹೊಂದಿಕೊಂಡಂತೆ ಪಿ.ಎಲ್.ಡಿಬ್ಯಾಂಕ್, ಸಬ್ ರಿಜಿಸ್ಟರ್ ಕಚೇರಿ, ಟ್ರಜರಿಇಲಾಖೆ, ಅರಣ್ಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಸ್ಟೇಂಟ್ ಬ್ಯಾಂಕ್ ಆಫ್ ಇಂಡಿಯಾ, ಪ್ರಗತಿ ಗ್ರಾಮೀಣ ಬ್ಯಾಂಕ್, ಸೇರಿದಂತೆ ಅನೇಕ ಕಚೇರಿಗಳಿವೆ

ಅಲ್ಲದೆ ಪ್ರತಿದಿನ ತಾಲ್ಲೂಕು ಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ಬರುವ ರೈತರಿಗೆ ಉಪಯುಕ್ತವಾದ ಸ್ಥಳದಲ್ಲಿ ರೇಷ್ಮೆ ಇಲಾಖೆ ಕಚೇರಿ ಇರುವುದರಿಂದ ರೈತರ ದೈನಂದಿನ ಚಟುವಟಿಕೆಗಳಿಗೆ ತುಂಬಾ ಉಪಯುಕ್ತವಾಗಿದ್ದು, ತಾಲ್ಲೂಕಿನ ರೇಷ್ಮೆ ಬೆಳೆಗಾರರ ರೈತರ ಹಿತದೃಷ್ಟಿಯಿಂದ ಸಹಾಯಕ ರೇಷ್ಮೆ ನಿರ್ದೇಶಕರ ಕಚೇರಿಯನ್ನು ಸದರಿ ಸ್ಥಳದಲ್ಲಿಯೇ ಮುಂದುವರೆಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತಸಂಘದ ತಾಲ್ಲೂಕು ಅಧ್ಯಕ್ಷರಾದ ಬಿ.ಓ.ಶಿವಕುಮಾರ್, ಚೇತನ್ ಯಳನಾಡು, ಮೇಟಿಕುರ್ಕೆ ತಿಪ್ಪೇಸ್ವಾಮಿ, ದೇವರಕೊಟ್ಟ ರಂಗಸ್ವಾಮಿ, ಬುರುಜನರೊಪ್ಪ ತಿಪ್ಪೇಸ್ವಾಮಿ, ರೇಷ್ಮೆ ಬೆಳಗಾರರ ಸಂಘದ ಅಧ್ಯಕ್ಷರಾದ ಕುಮಾರ ಎಂ.ಡಿ.ಕೋಟೆ, ಗೌ.ಅಧ್ಯಕ್ಷರಾದ ಸಿದ್ಧಪ್ಪ, ಮಲ್ಲೇಣುಅಜಯಕುಮಾರ್, ನಾಗರಾಜ್, ಮಂಜುನಾಥ್, ಸೇರಿದಂತೆ ಅನೇಕ ರೈತಮುಖಂಡರು ಹಾಗೂ ರೇಷ್ಮೆ ಬೆಳೆಗಾರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page