ಹಿರಿಯೂರು.19:
ಬಾಲ ಕಾರ್ಮಿಕರ ಹೋಬಳಿವಾರು ಟಾಸ್ಕ್ ಪೆÇೀರ್ಸ್ ಕಮಿಟಿ ರಚಿಸಲಾಗಿದ್ದು, ಈ ಸಮಿತಿ ಅಧಿಕಾರಿಗಳು ತಿಂಗಳಿಗೊಂದು ದಿನ ಬಾಲ ಕಾರ್ಮಿಕರ ಅನಿರೀಕ್ಷಿತ ದಾಳಿ ಕೈಗೊಳ್ಳಬೇಕು ಎಂದು ಹಿರಿಯೂರು ತಹಶೀಲ್ದಾರ್ ರಾಜೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿರಿಯೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲ್ಲೂಕು ಬಾಲ ಕಾರ್ಮಿಕ ಟಾಸ್ಕ್ ಫೆÇೀರ್ಸ್ ಹಾಗೂ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ತಂಡದ ವ್ಯಾಪ್ತಿಯಲ್ಲಿ ಬರುವ, ಬಾರ್, ರೆಸ್ಟೋರೆಂಟ್, ಗ್ಯಾರೇಜ್, ಕಟ್ಟಡ ನಿರ್ಮಾಣ, ಪೌಲ್ಟ್ರಿಫಾರಂನಲ್ಲಿ ಅನಿರೀಕ್ಷಿತ ದಾಳಿಯನ್ನು ನಡೆಸಿ, ಬಾಲ ಕಾರ್ಮಿಕ ಮಕ್ಕಳು ಕಂಡುಬಂದರೆ ತಕ್ಷಣ ತಪ್ಪಿತಸ್ಥ ಮಾಲೀಕರಿಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ನಗರಸಭೆ ಪೌರಾಯುಕ್ತ ಮಹಂತೇಶ್, ಕಾರ್ಮಿಕ ನಿರೀಕ್ಷಕ ಅಲ್ಲಾಭಕ್ಷ್, ಬಾಲ ಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿ ಕೆ.ಎಂ.ಮನೋಹರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧೀರ್ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments