ಹಿರಿಯೂರು ತಾಲ್ಲೂಕು ಈಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.75ರಷ್ಟು ಫಲಿತಾಂಶವನ್ನ ಗಳಿಸಿದ್ದು ಜಿಲ್ಲೆಗೆ 2ನೇ ಸ್ಥಾನವನ್ನು ಪಡೆದಿದೆ:ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ

by | 09/05/24 | ಶಿಕ್ಷಣ


ಹಿರಿಯೂರು:
ಹಿರಿಯೂರು ತಾಲೂಕಿನ ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೇಕಡ 75.04 ರಷ್ಟು ಬಂದಿದ್ದು ಚಿತ್ರದುರ್ಗ ಜಿಲ್ಲೆಯಲ್ಲಿ ನಮ್ಮ ತಾಲ್ಲೂಕು 2ನೇ ಸ್ಥಾನಗಳಿಸಿರುವುದು ನಮಗೆ ಅತ್ಯಂತ ಸಂತಸವನ್ನು ಉಂಟುಮಾಡಿದೆ ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ ಮಾಧ್ಯಮಗಳೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ಈ 2023-24 ನೇ ಸಾಲಿನಲ್ಲಿ ಹಿರಿಯೂರು ತಾಲೂಕಿನಲ್ಲಿ ಫಲಿತಾಂಶ ಉತ್ತಮಪಡಿಸಲು ವ್ಯವಸ್ಥಿತವಾದ ಕ್ರಿಯೆಯನ್ನು ಅನುಸರಿಸಲಾಗಿತ್ತು. ಅದರಲ್ಲಿ ಎರಡು ಮೂರು ಶಾಲೆಗಳು ಒಂದೆಡೆ ಸೇರಿ ಹಮ್ಮಿಕೊಳ್ಳಲಾಗುತ್ತಿದ್ದ ಅಂತರ ಶಾಲಾ ಶೈಕ್ಷಣಿಕ ಸ್ಪರ್ಧಾ ಕಾರ್ಯಕ್ರಮಗಳು ಅತ್ಯಂತ ಪರಿಣಾಮಕಾರಿಯಾಗಿ ಮಕ್ಕಳ ಶೈಕ್ಷಣಿಕ ಮಟ್ಟವನ್ನು ಉತ್ತಮಗೊಳಿಸಿದವು.
ಇವಲ್ಲದೆ ಪ್ರತಿ ಶಾಲೆಗಳಲ್ಲೂ ಪೋಷಕರ ಸಭೆಗಳನ್ನು ಹಮ್ಮಿಕೊಂಡು ಪ್ರತಿ ವಿದ್ಯಾರ್ಥಿಯ ಪ್ರಗತಿಯನ್ನು ಪೋಷಕರೊಂದಿಗೆ ಚರ್ಚಿಸಿದ್ದು ವಿದ್ಯಾರ್ಥಿಗಳಿಗೆ ಅಗತ್ಯ ಸಲಹೆ -ಸೂಚನೆಗಳನ್ನು ಕೂಡ ಉತ್ತಮ ಪರಿಣಾಮ ಬೀರಿತು.ಅಲ್ಲದೆ ಫ್ರೌಢಶಾಲಾ ಶಿಕ್ಷಕರು ನಿಗದಿತವಾಗಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಅವರ ಕಲಿಕೆಯನ್ನು ಪರಿಶೀಲಿಸುತ್ತಿದ್ದರು.
ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ದತ್ತು ಪಡೆದು ಅವರ ಕಲಿಕೆಯನ್ನು ಉತ್ತಮ ಪಡಿಸಲು ವೈಯಕ್ತಿಕ ಗಮನವನ್ನು ಶಿಕ್ಷಕರು ನೀಡಿದ್ದರಿಂದ ಉತ್ತಮ ಫಲಿತಾಂಶ ಸಾಧ್ಯವಾಯಿತು. ಇದಲ್ಲದೆ ಪ್ರತಿ ತಿಂಗಳು ತಾಲ್ಲೂಕು ಮಟ್ಟದಲ್ಲಿ ಮುಖ್ಯ ಶಿಕ್ಷಕರ ಸಭೆಗಳನ್ನು ನಡೆಸಿದ್ದು, ಪ್ರತಿ ಶಾಲೆಯ ಕಲಿಕಾ ಪ್ರಗತಿಯನ್ನು ಪರಾಮರ್ಶಿಸಿ ಸಲಹೆಗಳನ್ನು ಮತ್ತು ಗುರಿಗಳನ್ನು ನೀಡಲಾಗುತ್ತಿತ್ತು.
ಈ ಎಲ್ಲಾ ಕಾರಣದಿಂದಾಗಿ ತಾಲೂಕಿನ ಫಲಿತಾಂಶ ಉತ್ತಮವಾಯಿತು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಅವರು ತಿಳಿಸಿದರಲ್ಲದೆ, ತಾಲ್ಲೂಕಿನಲ್ಲಿ ಶಾಲೆಗಳು ಶೇಕಡಾ 100 ಫಲಿತಾoಶ ಪಡೆದಿದ್ದು, ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಎಲ್ಲಾ ಶಾಲೆಗಳ ಶಿಕ್ಷಕ-ಶಿಕ್ಷಕಿಯರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 620 ಅಂಕಗಳನ್ನು ಗಳಿಸಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ರಾಷ್ಟ್ರೀಯ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ತನುಶ್ರೀ ಮತ್ತು ಕುಮಾರಿ ಹಿರಣ್ಮಯಿ ಇವರುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಂ.ತಿಪ್ಪೇಸ್ವಾಮಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ತಿಪ್ಪೇರುದ್ರಪ್ಪ, ಶಿಕ್ಷಣ ಸಂಯೋಜಕರುಗಳಾದ ಶಶಿಧರ್, ಲೋಹಿತ್, ಹರೀಶ್, ಗಿರೀಶ್, ಪ್ರಸನ್ನಕುಮಾರ್,ಅಕಾಡೆಮಿಪರಮೇಶ್, ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಪೋಷಕರುಗಳು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page