ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ಕೆಯುಡಬ್ಲೂಜೆ ಯ ಪ್ರತಿಷ್ಠಿತ “ಬಾಬಾಸಾಹೇಬ್ ಅಂಬೇಡ್ಕರ್ ದತ್ತಿಪ್ರಶಸ್ತಿ”

by | 23/02/23 | Uncategorized

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ಕೆಯುಡಬ್ಲೂಜೆ ಯ ಪ್ರತಿಷ್ಠಿತ “ಬಾಬಾಸಾಹೇಬ್ ಅಂಬೇಡ್ಕರ್ ದತ್ತಿಪ್ರಶಸ್ತಿ”

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಕೊಡ ಮಾಡುವ 2022-23 ನೇ ಸಾಲಿನ ಪ್ರತಿಷ್ಠಿತ *”ಡಾ. ಬಿ.ಆರ್ ಅಂಬೇಡ್ಕರ್ ದತ್ತಿ ಪ್ರಶಸ್ತಿ” ಗೆ ಹಿರಿಯರು, ವಿಚಾರಶೀಲ-ಸಂವೇದನಾಶೀಲ ಪತ್ರಕರ್ತರಾದ ಶ್ರೀಯುತ ಡಿ. ಉಮಾಪತಿ ಅವರನ್ನು ಆಯ್ಕೆ ಮಾಡಲಾಗಿದೆ.

ಸಾಮಾಜಿಕ ಕಳಕಳಿಯ , ಸಮಸಮಾಜದ ಆಶಯಗಳ ಬಿಂಬಿತ , ಮಾನವೀಯ ವರದಿ ಮತ್ತು ವಿಶ್ಲೇಷಣಾ ಬರಹಗಳ ಸಂವೇದನಾ ಶೀಲ ಪತ್ರಕರ್ತರನ್ನು ಗುರುತಿಸಿ ಗೌರವಪೂರ್ವಕವಾಗಿ ಅಭಿನಂದಿಸುವ ಆಶಯದಿಂದ ಬಾಗಲಕೋಟೆಯ ಹಿರಿಯ ಪತ್ರಕರ್ತರಾದ ಸುಭಾಷ್ ಹೊದ್ಲೂರು ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಮಹಾ ಮಾನವತಾವಾದಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಯ ದತ್ತಿನಿಧಿಯನ್ನು ಸ್ಥಾಪಿಸಿದ್ದು, 2021-22 ನೇ ಸಾಲಿನಿಂದ ಈ ಪ್ರಶಸ್ತಿಯನ್ನು ವೃತ್ತಿಪರ- ಸಾಧಕ ಪತ್ರಕರ್ತರಿಗೆ ಪ್ರಧಾನಮಾಡಲಾಗುತ್ತಾ ಬರಲಾಗುತ್ತಿದೆ.

ಭಾರತದ ಪತ್ರಿಕೋದ್ಯಮಕ್ಕೆ ಮತ್ತು ಪತ್ರಕರ್ತನಿಗೆ ಮೌಲಿಕ ಮಾದರಿಯೊಂದನ್ನು ಕಟ್ಟಿಕೊಟ್ಟ ಶ್ರೇಷ್ಠ ಪತ್ರಕರ್ತ ಬಾಬಾಸಾಹೇಬ್ ಅಂಬೇಡ್ಕರ್. ನಮ್ಮ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಲಯಗಳು ಅದೆಷ್ಟೇ ಕಲುಷಿತಗೊಂಡಿದ್ದರೂ ಅವುಗಳ ನಡುವೆಯೇ ಇದ್ದು ಅವುಗಳನ್ನು ಮಾನವೀಯಗೊಳಿಸುವ, ನ್ಯಾಯಬದ್ದಗೊಳಿಸುವ ಹಾಗೂ ಆ ದಿಕ್ಕಿನಲ್ಲಿ ಜನಸಮುದಾಯಗಳನ್ನು ವೈಚಾರಿಕವಾಗಿ ಎಚ್ಚರಿಸಬೇಕಾಗುತ್ತದೆ. ಅದಕ್ಕಾಗಿ ಚಳವಳಿಮಾದರಿಯಲ್ಲಿ ಬರೆಯುವುದು, ಬದುಕುವುದು ನೈಜ ಪತ್ರಕರ್ತನ ಗುಣಲಕ್ಷಣಗಳಾಗುತ್ತವೆ. ಇದನ್ನೆ *ಅಂಬೇಡ್ಕರ್ ಮಾದರಿ* ಎನ್ನುವುದನ್ನು ಇತಿಹಾಸದಲ್ಲಿ ಕಾಣಬಹುದು.

ಇಂತಹ ಮಾದರಿ ಪತ್ರಕರ್ತರನೇಕರು ನಮ್ಮ ನಡುವೆ ಇಂದಿಗೂ ಇದ್ದಾರೆ . ಅಂತಹವರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಆದರ್ಶ ವೃತ್ತಿಪರತೆಯನ್ನು ಹೊಸತಲೆಮಾರಿಗೂ ವಿಸ್ತರಿಸುವ ಹೊಣೆಗಾರಿಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಚನಾತ್ಮಕ ಕಾರ್ಯಕ್ರಮಗಳ ಭಾಗವಾಗಿದೆ.

2021-22 ನೇ ಸಾಲಿನ ಮೊದಲ ಪ್ರಶಸ್ತಿಯನ್ನು ನಾಡಿನ ಹಿರಿಯ ಪತ್ರಕರ್ತರು, ಸಾಧಕರೂ ಆದ ದಿನೇಶ್ ಅಮೀನ್ ಮಟ್ಟು ಅವರಿಗೆ ಪ್ರಧಾನ ಮಾಡುವ ಮೂಲಕ ಬಾಬಾಸಾಹೇಬ ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಸಾರ್ಥಕ ಮುನ್ನುಡಿಯನ್ನು ಬರೆಯಲಾಗಿತ್ತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ರಾಜ್ಯ ಪದಾಧಿಕಾರಿಗಳ ಸಮಿತಿ,
2022-23 ನೇ ಸಾಲಿನ *”ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿ”* ಗೆ ಹಿರಿಯ ಪತ್ರಕರ್ತರಾದ *ಡಿ.ಉಮಾಪತಿ* ಅವರನ್ನು ಆಯ್ಕೆ ಮಾಡುವ ಮೂಲಕ ಪ್ರಶಸ್ತಿಯ ಆಶಯಕ್ಕೆ ಮೆರಗು ತಂದಂತಾಗಿದೆ.

ಪ್ರಶಸ್ತಿಯು 10 ಸಾವಿರ ರೂ. ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿದೆ.

ಡಿ.ಉಮಾಪತಿ ಅವರ ಪರಿಚಯ:

ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಎಂ.ಎಂ ಸ್ನಾತಕೋತ್ತರ ಪದವಿಯಲ್ಲಿ ಎರಡನೆ ರ‍್ಯಾಂಕ್ ಪಡೆದವರು.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಸಮೂಹ ಸಂಸ್ಥೆ ಯ ಕನ್ನಡ ಪ್ರಭ, ಈ ಟಿವಿ, ಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು.

ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ನಲ್ಲಿನ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ದೆಹಲಿಯಲ್ಲಿದ್ದು ರಾಷ್ಟ್ರೀಯ ಪತ್ರಕರ್ತರಾಗಿರುವ ಉಮಾಪತಿ ಅವರು ಅಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ‍್ನಲ್ ನ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ಸೇವೆ. ವಿದ್ವತ್ ಪೂರ್ಣ ಸಾಧನೆಯನ್ನು ಗುರುತಿಸಿ ಅನೇಕ ಪ್ರಶಸ್ತಿ – ಸಮ್ಮಾನಗಳು ಮುಡಿಗೇರಿವೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಅಂಬೇಡ್ಕರ್ ಪ್ರತಿಷ್ಠಾನದ ಭೋಧಿವರ್ಧನ ಪ್ರಶಸ್ತಿ, ಎಸ್ಸಿ/ಎಸ್ಟಿ ಎಡಿಟರ್ ಅಸೋಸಿಯೇಷನ್‌ನ ’ಬಿ. ರಾಚಯ್ಯ ಪ್ರಶಸ್ತಿ’ , ಪ್ರೆಸ್ ಕ್ಲಬ್ ಬೆಂಗಳೂರು ನ ಜೀವಮಾನಸಾಧನೆ ಪ್ರಶಸ್ತಿ, ಇಂಡಿಯನ್ ಎಕ್ಸ್ ಪ್ರೆಸ್ ಗ್ರೂಪ್ ನೀಡುವ ಸಂಪಾದಕ ಮಂಡಳಿ ಆಯ್ಕೆಯ ಅತ್ಯುತ್ತಮ ಶ್ರಮಜೀವಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ನ ನಾಡಿಗೇರಿ ಕಿಟ್ಟಪ್ಪ ದತ್ತಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸಿಗಳಿಂದ ಪುರಸ್ಕೃತರಾಗಿರುವುದು ಅವರ ಸಾಧನೆ ವಿದ್ವತ್ತಿಗೆ ವೃತ್ತಿಪರತೆಗೆ ಹಿಡಿದ ಕನ್ನಡಿಯಾಗಿವೆ.

’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿ ಪ್ರಕಟವಾಗಿವೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-23 ನೇ ಸಾಲಿನ ವಾರ್ಷಿಕ *”ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿ”* ಗೆ ಆಯ್ಕೆಯಾಗಿರುವ ಡಿ. ಉಮಾಪತಿ ಅವರಿಗೆ ಅಭಿನಂದನೆಗಳು.

ಸದ್ಯದಲ್ಲೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ..

ಅಭಿನಂದನೆಗಳು ಉಮಣ್ಣ. ನಿಮ್ಮಿಂದ ಜಿಲ್ಲೆಗೊಂದು ಗರಿ.

ಮಾಲತೇಶ್ ಅರಸ್ ಹರ್ತಿಕೋಟೆ.
ಸಂಪಾದಕರು. ಈ ನಗರವಾಣಿ.. ಚಿತ್ರದುರ್ಗ
ಜಿಲ್ಲಾ ವರದಿಗಾರರು ZEE ಕನ್ನಡ ನ್ಯೂಸ್.
ರಾಜ್ಯ. ಜಂಟಿ ಕಾರ್ಯದರ್ಶಿ,
ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ. ಬೆಂಗಳೂರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page