ಹಿರೇಕೆರೆ ಕಾವಲಿನ ಗೋಶಾಲೆಯಲ್ಲಿ ರೈತರ ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಮೇವು ನೀಡಲಾಗುತ್ತದೆ ನಲಗೇತನಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಹೇಳಿದರು.

by | 12/03/24 | ಸುದ್ದಿ


ನಾಯಕನಹಟ್ಟಿ:: ಮಾ.12. ಹಿರೆಕೆರೆ ಕಾವಲು ಗೋಶಾಲೆಯಲ್ಲಿ ರೈತರ ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಮೇವನ್ನು ವಿತರಿಸಲಾಗುತ್ತದೆ ಎಂದು ನಲಗೇತನಹಟ್ಟಿ ಗ್ರಾಮ ಲೆಕ್ಕಾಧಿಕಾರಿ ಹರೀಶ್ ಹೇಳಿದ್ದಾರೆ.

ಮಂಗಳವಾರ ಸಮೀಪದ ಹಿರೆಕೆರೆ ಕಾವಲು ಪ್ರದೇಶದ ಗೋಶಾಲೆಯಲ್ಲಿ ರೈತರ ಜಾನುವಾರುಗಳಿಗೆ ಭತ್ತದ ಹುಲ್ಲನ್ನು ವಿತರಣೆ ಮಾಡಿ ಮಾತನಾಡಿದ ಅವರು
ಚಳ್ಳಕೆರೆ ತಾಲೂಕು ಅತ್ಯಂತ ಬರಪೀಡಿತ ಪ್ರದೇಶ ಆಗಿರುವುದರಿಂದ 202324ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಚಳ್ಳಕೆರೆ ತಾಲೂಕನ್ನು ಬರಪೀಡು ಪ್ರದೇಶ ಎಂದು ಘೋಷಣೆ ಮಾಡಿರುವುದರಿಂದ ಹಿರೇಕೆರೆ ಕಾವಲಿನಲ್ಲಿ ಮಾರ್ಚ್ 6 ರಂದು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಗೋಶಾಲೆಯನ್ನ ಪ್ರಾರಂಭಿಸಿದ್ದಾರೆ ಈ ಭಾಗದ ರೈತರ ಜಾನುವಾರುಗಳು ಗೋಶಾಲೆಗೆ ಸುಮಾರು 2500 ರಿಂದ 3000 ಜಾನುವಾರಗಳು ಇಲ್ಲಿಗೆ ಬರುತ್ತವೆ ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಬರೆದ ಛಾಯಾ ಆವರಿಸಿದೆ ಇಲ್ಲಿನ ರೈತರ ಜಾನುವಾರುಗಳಿಗೆ ಭತ್ತದ ಹುಲ್ಲನ್ನು ನೀಡಲಾಗುತ್ತದೆ ದೊಡ್ಡ ಎತ್ತು ಅಥವಾ ಹಸುಗೆ 6 ಕೆ ಜಿ. ಚಿಕ್ಕ ಎತ್ತು ಅಥವಾ ಹಸುಗೆ 3 ಕೆಜಿ ಮೇವನ್ನು ವಿತರಿಸಲಾಗುತ್ತದೆ. ರೈತರು ಮೆಕ್ಕೆಜೋಳ ಸಪ್ಪೆಯನ್ನು ಕೇಳುತ್ತಿದ್ದಾರೆ ಶೀಘ್ರದಲ್ಲೇ ಮೇಲಾಧಿಕಾರಿಗಳ ಗಮನಕ್ಕೆ ತಂದು ಮೆಕ್ಕೆಜೋಳ ಸಪ್ಪೆಯನ್ನು ವಿತರಣೆ ಮಾಡಲಾಗುತ್ತದೆ ಎಂದರು.


ಇದೆ ವೇಳೆ ಎತ್ತಿನಹಟ್ಟಿ ರೈತ ಬೋರೇಗೌಡ ಮಾತನಾಡಿ ಶಾಸಕ ಎನ್ ವೈ ಗೋಪಾಲಕೃಷ್ಣ ರವರು ಈ ಭಾಗದ ರೈತರ ನೋವನ್ನು ಆಲಿಸಿ ಜಾನುವಾರುಗಳಿಗೆ ಗೋಶಾಲೆಯನ್ನು ಪ್ರಾರಂಭಿಸಿರುವುದು ತುಂಬಾ ಸಂತೋಷದ ವಿಷಯ ಈ ಗೋಶಾಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿ ಟಿ ವೆಂಕಟೇಶ್ ತಹಶೀಲ್ದಾರ್ ರೇಹಾನ್ ಪಾಷಾ ಭೇಟಿ ನೀಡಿದ್ದರು ಮತ್ತು ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಉತ್ತಮವಾಗಿ ರೈತರಿಗೆ ಗೋಶಾಲೆಯಲ್ಲಿ ಮೇವು ನೀರು ನೆರಳು ಸೇರಿದಂತೆ ರೈತರಿಗೆ ಸಹಕಾರ ನೀಡುತ್ತಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನೇರಲಗುಂಟೆ ಗ್ರಾಮ ಲೆಕ್ಕಾಧಿಕಾರಿ ಶಶಿಕಲಾ, ಗ್ರಾಮ ಸಹಾಯಕ ಚನ್ನಬಸಪ್ಪ. ಕುಮಾರ್ ನಾಗರಾಜ್ ಹೇಮಂತ್ ನಾಯ್ಕ ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page