ಹಿರಿಯೂರು:
ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ ವ್ಯಕ್ತಿಯ ಶವವನ್ನು ಅಂತ್ಯಸಂಸ್ಕಾರ ಮಾಡುವ ಜಾಗಕ್ಕೆ ತೆಗೆದುಕೊಂಡು ಹೋಗಲು ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕಾಗಿದೆ ಎಂಬುದಾಗಿ ಗ್ರಾಮಸ್ಥರು ಮಾಧ್ಯಮಗಳೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಮೂರು ವರ್ಷಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ದಯಮಾಡಿ ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ರಸ್ತೆ ಹಾಗೂ ಸೇತುವೆ ಮಾಡಿಸಿಕೊಡಬೇಕೆಂದು ಗ್ರಾಮಸ್ಥರು ಪರವಾಗಿ ಕೇಳಿಕೊಳ್ಳುತ್ತಿದ್ದೇವೆ ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲ್ಲೂಕಿನ ಆಡಳಿತ ಕಚೇರಿ ಮುಂದೆ ಶವ ಇಟ್ಟು ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂಬುದಾಗಿ ಗ್ರಾಮಸ್ಥರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎ.ರಾಘವೇಂದ್ರ ಮತ್ತು ಹಿರಿಯೂರು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಉಚ್ಚವನಹಳ್ಳಿ ಪಾಪಣ್ಣ ಹಾಗೂ ಗ್ರಾಮಸ್ಥರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments