ಚಿತ್ರದುರ್ಗ:
ಹುಬ್ಬಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹೀರೇಮಠ ಹತ್ಯೆಯನ್ನ ಖಂಡಿಸಿ ಸಿಬಿಐಗೆ ವಹಿಸಬೇಕು ಎಂಬುದಾಗಿ ಸರ್ಕಾರವನ್ನು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಒನಕೆಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ನಗರದಲ್ಲಿ ಹಾಡುಹಗಲೇ ನಡೆದ ಈ ಕೃತ್ಯದಿಂದಾಗಿ ರಾಜ್ಯದ ವಿದ್ಯಾರ್ಥಿ ಸಮುದಾಯ ಬೆಚ್ಚಿಬಿದ್ದಿದೆ ಎಂಬುದಾಗಿ ಅವರು ಆತಂಕ ವ್ಯಕ್ತಪಡಿಸಿದರು. ಕಾಲೇಜು ಆವರಣದೊಳಗೆ ಹತ್ಯೆ ಎಸಗಿರುವ ಆರೋಪಿಗೆ ಕಾನೂನಿನ ಯಾವುದೇ ಭಯವು ಇಲ್ಲವಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂಬುದಾಗಿ ಅವರು ದೂರಿದರು.
ಪೋಲಿಸರು ಸೂಕ್ತ ತನಿಖೆ ನಡೆಸಿ ,ಪ್ರಕರಣದ ಆರೋಪಿ ಎಸಗಿರುವ ಅಪರಾಧಕ್ಕೆ ಕಠಿಣ ಶಿಕ್ಷೆ ಕೊಡಿಸುವ ಮೂಲಕ ಸಂಭಾವ್ಯ ಘಟನೆಗಳನ್ನು ನಿಯಂತ್ರಿಸಬೇಕು. ಅಲ್ಲದೆ ಶಾಲಾ, ಕಾಲೇಜು ಹಾಗೂ ಕ್ಯಾಂಪಾಸ್ ಗಳು ಸುರಕ್ಷತೆಯ ಕೇಂದ್ರಗಳಾಗಬೇಕು.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು. ಜತೆಗೆ ಈ ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಬೇಕು ಎಂಬುದಾಗಿ ಅವರು ಆಗ್ರಹಿಸಿದರು.ಬಳಿಕ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪರಿಷತ್ ರಾಜ್ಯ ಕಾರ್ಯಕಾರಿಣಿ ಸದಸ್ಯ ಕನಕರಾಜ್ ಕೋಡಿಹಳ್ಳಿ, ಎಬಿವಿಪಿ ಜಿಲ್ಲಾ ಕಾರ್ಯದರ್ಶಿ ಸಿದ್ದೇಶ್, ಗೋಪಿ, ಚೈತ್ರಾ, ದರ್ಶನ್, ಸುಮನ್, ಚಿತ್ರಸ್ವಾಮಿ, ಸುದೀಪ್, ಸಂಜನಾ, ಯುವರಾಜ್, ದಾನೇಶ್, ಸುಮಾ, ಚಂದನಾ, ತಿಪ್ಪೇಸ್ವಾಮಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments