ಚಳ್ಳಕೆರೆ ಜನಧ್ವನಿ ವಾರ್ತೆ ಮೇ 11 ಹೂಳು ತುಂಬಿದ ಚರಂಡಿಗಳು ಸಾಂಕ್ರಮಿಕ ರೋಗ ಬೀತಿಯಲ್ಲಿ ನಗರವಾಸಿಗಳು.
ಹೌದು ಇದು ಚಳ್ಳಕೆರೆ ನಗರದ ವಿವಿಧ ವಾರ್ಡ್ ಗಳಲ್ಲಿ ನೀರು ಸರಾಗವಾಗಿ ಹರಿಯಲೆಂದು ನಿರ್ಮಿಸಿದ ಚರಂಡಿಗಳು ಹೂಳು ತುಂಬಿಕೊಂಡಿದ್ದು ನೀರು ಹರಿಯದೆ ಸೊಳ್ಳೆಗಳ ಉತ್ಪತ್ತಿ ತಾಣವಾಗಿದ್ದು ಚರಂಡಿಗಳ ಸ್ವಚ್ಚತೆಯಿಲ್ಲದೆ ಗೊಬ್ಬುವಾಸನೆ ಬೀರುತ್ತಿವೆ.
ನಗರದ ಕಾಟಪ್ಪನಹಟ್ಟಿ ದಿ.ಮಾಜಿ ಸಚಿವ ತಿಪ್ಪೇಸ್ವಾಮಿ ಮನೆ ಬಳಿ ಚರಂಡಿಗಳು ಹೂಳು ತುಂಬಿಕೊಂಡಿದ್ದು ಸಾಂಕ್ರಮಿಕ ರೋಗಗಳಿಗೆ ಕೈಬೀಸಿ ಕಡೆಯುಂತಿವೆ. ಹೂಳು ತುಂಬಿದ ಚರಂಡಿಗಳ ಪೋಟೊಗಳು ಸಾಮಾಜಿಕ ಜಾಲತಾಣದ ಗ್ರೂಪ್ ನಲ್ಲಿ ಹರಿದಾಡುತ್ತಿವೆ.
ನಗರದ ಮುಖ್ಯ ರಸ್ತೆಗಳಲ್ಲಿನ ಚರಂಡಿಗಳು ಕಸದ ತೊಟ್ಟಿಗಳಾಗಿದ್ದು ಕಸದಿಂದ ತುಂಬಿಕೊಂಡಿದ್ದು ನೀರು ಎಲ್ಲಿಗೆ ಹೋಗುತ್ತವೆ ಎಂಬ ಯಕ್ಷ ಪ್ರಶ್ನೆಯಾಗಿದೆ ನಗರದ ಬಹುತೇಕ ವಾರ್ಡ್ ಗಳಲ್ಲಿನ ಚರಂಡಿಗಳು ಹೂಳು ತುಂಬಿಕೊಂಡಿದ್ದ ಗೊಬ್ಬೆದ್ದು ನಾರುತ್ತಿವೆ.
ನಗರದ ನಿವಾಸಿಗಳು ಸಾಂಕ್ರಮಿಕ ರೋಗಬೀತಿಯಲ್ಲಿ ಜೀ ವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಚರಂಡಿಗಳ ಸ್ವಚ್ಚತೆಗೆ ಮುಂದಾಗುವರೇ ಕಾದು ನೋಡ ಬೇಕಿದೆ.
0 Comments