ಹೆಗ್ಗೆರೆ ತಾಯಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಕೊರೋನಾ ರೋಗದ ಜಾಗೃತಿ ಮೂಡಿಸಿದ ಶಿಕ್ಷಕ ವೃಂದ.

by | 20/12/23 | ಆರೋಗ್ಯ


ಚಳ್ಳಕೆರೆ: ದೇಶದಲ್ಲಿ ಈಗಾಗಲೇ ಮತ್ತೊಮ್ಮೆ ಕೊರೋನ ರೋಗದ ಆತಂಕ ಶುರುವಾಗಿದ್ದು ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವರ್ಗ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಾಗೃತವಾಗುವ ಅನಿವಾರ್ಯತೆ ಬಂದೊದಗಿದೆ ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಜಕುಮಾರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ನಗರದ ಹೆಗ್ಗೇರೆ ತಾಯಮ್ಮ ಸರ್ಕಾರಿ ಬಾಲಕಿಯ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಕೊರೋನ ರೋಗದ ಹತೋಟಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಈ ಹಿಂದೆ 2020- 21 ಅವಧಿಯಲ್ಲಿ ಕರೋನ ರೋಗವು ದೇಶದಲ್ಲಿ ಮಹಾಮಾರಿಯಂತೆ ಅಪ್ಪಳಿಸಿ ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿತು ವಿದ್ಯಾರ್ಥಿಗಳಿಗೆ ತರಗತಿಗಳಿಲ್ಲದೆ ಪಾಠ ಪ್ರವಚನಗಳನ್ನು ಆನ್ಲೈನ್ ತರಗತಿಗಳ ಮೂಲಕ ಬೋಧಿಸಿ ಅವರ ಜೀವನವನ್ನು ಕಟ್ಟಿಕೊಳ್ಳಲು ಶಿಕ್ಷಕರು ಅವಿರತ ಶ್ರಮವನ್ನು ವಹಿಸಿದರು ಹೀಗಾಗಿ ಈಗ ಬಂದಿರುವ ಕರೋನ ಹೊಸ ತಳಿಯ ರೋಗವನ್ನು ಹಿಮ್ಮೆಟ್ಟಿಸಲು ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವರ್ಗ ಜಾಗೃತಿ ವಹಿಸುವುದು ಬಹುಮುಖ್ಯವಾಗಿದೆ ಸರ್ಕಾರ ಸೂಚಿಸುವ ಎಲ್ಲಾ ಆದೇಶಗಳನ್ನು ಕಟ್ಟನಿಟ್ಟಾಗಿ ಶಾಲೆಗಳಲ್ಲಿ ಪಾಲಿಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಲ್ಲ ವಿದ್ಯಾರ್ಥಿಗಳು ಉದಾಸೀನ ತೋರದೆ ಶಾಲೆಗಳಲ್ಲಿನ ಶಿಕ್ಷಕರ ಸೂಚನೆಗಳನ್ನು ಪಾಲಿಸಿ ತಮ್ಮ ಮನೆಯವರ ಹಾಗೂ ತಮ್ಮ ಸಹಪಾಠಿಗಳ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳುವಲ್ಲಿ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ವೇಣಿ ಮಾತನಾಡಿ ಕೊರೋನಾ ರೋಗ ರಾಜ್ಯದಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಕಾಣಿಸಿಕೊಂಡಿಲ್ಲ ಹಾಗೆಂದ ಮಾತ್ರಕ್ಕೆ ಮಕ್ಕಳು ಹಾಗೂ ಪೋಷಕರು ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಉದಾಸೀನ ತೋರಬಾರದು ವಿದ್ಯಾರ್ಥಿಗಳು ಶಾಲೆಗಳಲ್ಲಿ ಸಹಪಾಠಿಗಳೊಂದಿಗೆ ಊಟ ಮಾಡುವಾಗ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಾಗ ಅಂತರ ಕಾಯ್ದುಕೊಳ್ಳಬೇಕು ಮತ್ತು ತಮ್ಮ ಕೈಗಳನ್ನು ಆಗಿಂದಾಗೆ ಸ್ವಚ್ಛಗೊಳಿಸಿಕೊಂಡು ಶಾಲೆಯ ಆವರಣವನ್ನು ಶುಚಿತ್ವವಾಗಿಟ್ಟುಕೊಳ್ಳಬೇಕು ಮಾಸ್ಕ್ ಧರಿಸಿಕೊಳ್ಳಬೇಕು ವಿದ್ಯಾರ್ಥಿಗಳು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ ಕೊರೊನ ರೋಗವನ್ನು ಹಿಮ್ಮಟ್ಟಿಸಲು ಶಾಲೆಯಲ್ಲಿ ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.


ಈ ವೇಳೆ ಶಿಕ್ಷಕರಾದ ಪ್ರದೀಪ್ ಪ್ರಾಣೇಶ್ ಗಂಗೂಬಾಯಿ ಉಮಾ ಶಿವಣ್ಣ ಶಂಕರ ಪ್ರಸನ್ನ ಸಿಬ್ಬಂದಿಗಳಾದ ರಂಗನಾಥ್ ಸೇರಿದಂತೆ ಶಿಕ್ಷಕರು ಶಿಕ್ಷಕಿಯರು ಹಾಗೂ ವಿಧ್ಯಾರ್ಥಿಗಳು ಇದ್ದರು‌.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page