ಚಳ್ಳಕೆರೆ ಡಿ,5: ಹೆಚ್ಐವಿ ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ಕಾಣುವುದರಿಂದ ಅವರ ಸಮಾನತೆ ಹಕ್ಕಿಗೆ ಧಕ್ಕೆಯಾಗಲಿದ್ದು ಕಾನೂನು ಬಾಹಿರವು ಆಗಿದೆ ಎಂದು ಅಪಾರ ಸಿವಿಲ್ ನ್ಯಾಯಾಧೀಶೆ ಹೆಚ್ಆರ್ ಹೇಮ ತಿಳಿಸಿದರು.
ನಗರದ ವಾಸವಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಮತ್ತು ವಾಸವಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಲವು ಸಂದರ್ಭಗಳನ್ನು ಹೊರತುಪಡಿಸಿ ಹೆಚ್ ಐವಿ ಸೋಂಕಿತರನ್ನು ಸಮಾನವಾಗಿ ಕಾಣಬೇಕು ಸಮಾಜದಲ್ಲಿ ಶಿಕ್ಷಿತರು ವಿಶಿಷ್ಟ ವರ್ಗವನ್ನು ಸೃಷ್ಟಿಸಬಾರದು ಕಳೆದ ಸುಮಾರು ವರ್ಷಗಳಿಂದ ಹೆಚ್ಐವಿ ಕುರಿತು ಮಾತನಾಡುತ್ತಿದ್ದು ಹೆಚ್ಐ ವಿ ಬಗೆಗಿರುವ ತಪ್ಪು ಕಲ್ಪನೆಗಳನ್ನು ಬಿಡಬೇಕು ಮುಂಜಾಗ್ರತ ಕ್ರಮಗಳನ್ನು ಸಕಾಲದಲ್ಲಿ ಕೈಗೊಂಡು ಜಾಗೃತರಾಗಬೇಕು ಮಾಧ್ಯಮಗಳ ಮೂಲಕ ಸಮಾಜಕ್ಕೆ ಜಾಗೃತಿ ಸಂದೇಶ ತಲುಪಿಸಬೇಕು ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಕಾಶಿ ಮಾತನಾಡಿ ಪ್ರತಿಯೊಬ್ಬರಿಂದಲೂ ಹೆಚ್ಐ ವಿ ಸೋಂಕಿತರನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕಿದ್ದು ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭವಾಗಬೇಕು ಅರಿವಿಲ್ಲದೆ ಬರುವ ರೋಗ ಇದಾಗಿದ್ದು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಎಆರ್ಟಿ ಚಿಕಿತ್ಸೆ ನೀಡಲಾಗುತ್ತಿದ್ದು ಪದವಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹೆಚ್ಐವಿ ರೋಗದ ಬಗ್ಗೆ ಮಾಹಿತಿ ನೀಡಲಾಗುತ್ತದೆ ಹಾಗೂ ಹೆಚ್ಐವಿ ಪೀಡಿತರಿಗೆ ಆಪ್ತ ಸಮಾಲೋಚನೆ ನಡೆಸಲಾಗುವುದು.ಸಾರ್ವಜನಿಕರು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಹೆಚ್ಐವಿ ಸೋಂಕಿತರನ್ನು ಸಹೋದರತೆಯ ಭಾವನೆಯಿಂದ ಕಾಣುವ ಮೂಲಕ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಸರ್ಕಾರಿ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಜೆ ಡಿ ವೆಂಕಟೇಶ್ ಸಮಾಜದಲ್ಲಿ ಹೆಚ್ಐವಿ ಸೋಂಕಿತರನ್ನು ಶೋಷಿತರಂತೆ ಕಾಣಬಾರದು ಅವರು ಸಮಾಜಕ್ಕೆ ಕಳಂಕಿತ ವ್ಯಕ್ತಿಗಳಲ್ಲ ಈ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಉದ್ದೇಶಕ್ಕಾಗಿ ವಿಶ್ವಸಂಸ್ಥೆ ವಿಶ್ವ ಏಡ್ಸ್ ದಿನಾಚರಣೆಗೆ ಕರೆ ನೀಡಿದ್ದು ವೈದ್ಯರ ಸಲಹೆಯಂತೆ ಸಕಾಲದಲ್ಲಿ ಎಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ವೈದ್ಯಕೀಯ ನೆರವು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ವಾಸವಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜೆ ಶ್ರೀರಾಮುಲು ವಕೀಲರ ಸಂಘದ ಉಪಾಧ್ಯಕ್ಷ ಟಿ ಪಾಲಯ್ಯ ಕಾರ್ಯದರ್ಶಿ ಸಿದ್ದರಾಜು ತಿಪ್ಪೇಸ್ವಾಮಿ ಸ್ಕಂದ ಜ್ಯೋತಿ, ಕಿರಣ, ನಂದ ,ನೇಮ ನಾಯಕ್ ಶಂಕರ್ ಬಸವರಾಜು, ಹರೀಶ್, ಭೀಮಣ್ಣ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪನ್ಯಾಸಕರು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
0 Comments