ಹೆರಿಗೆಯೂ ಇಲ್ಲ, ತುರ್ತುವಾಹನ ಸೌಲಭ್ಯವಿಲ್ಲದೆ ಆಟೋದಲ್ಲೇ ಗರ್ಭಿಣಿ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದ ಅಮಾನವೀಯ ಘಟನೆ ನಡೆದಿದೆ.

by | 22/05/23 | ಆರೋಗ್ಯ


ಚಳ್ಳಕೆರೆ ಜನಧ್ವನಿ ವಾರ್ತೆ ಮೇ 22
ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸಲು ಮುಂದಾಗದ ಇರುವುದರಿಂದ ತುಂಬು ಗರ್ಭಿಣಿಯನ್ನು ಆಟೋದಲ್ಲೇ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋದ ಅಮಾನವೀಯ ಘಟನೆಯೊಂದು ಸೋಮವಾರ ಚಳ್ಳಕೆರೆ ನಗರದಲ್ಲಿ ನಡೆದಿದೆ.

‌‌‌‌ ಚಳ್ಳಕೆರೆ ನಗರದಿಂದ ಜಿಲ್ಲಾಸ್ಪತ್ರೆಗೆ ಹೆರಿಗೆಗೆಂದು ಆಟೋದಲ್ಲಿ ಗರ್ಭಿಣಿ ಮಹಿಳೆಯನ್ನು ಕರೆದುಕೊಂಡು ಹೋಗುತ್ತಿರುವುದು
ಚಳ್ಳಕೆರೆ ತಾಲೂಕಿನ ದೇವರೆಡ್ಡಿಹಳ್ಳಿ ಗ್ರಾಪಂ ವ್ಯಾಪ್ತಿಯ ಜಿ,ದೇವರಹಳ್ಳಿ ಗ್ರಾಮದ ಸುಮರಾಣಿ(26) ಸೋಮವಾರ ಮಧ್ಯಹ್ನಾನ 2 ಗಂಟೆಸುಮಾರಿನಲ್ಲಿ ಸರಕಾರಿ ಹೆರಿಗೆ ವೈದ್ಯರಿಗೆ ಸೇರಿದ ಖಾಸಗಿ ಹೆರಿಗೆ ಆಸ್ಪತ್ರೆ ಎನ್ನಲಾದ ಆಸ್ಪತ್ರೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ತೋರಿಸಲು ಬಂದಿದ್ದಾರೆ.
ಇದು ಹೆರಿಗೆ ನೋವಾಗಿರುವುದರಿಂದ 38 ಸಾವಿರ ರೂ ಆಗುತ್ತದೆ ಹಣ ಕಟ್ಟಿದರೆ ಹೆರಿಗೆ ಮಾಡಿಸುವುದಾಗಿ ಪ್ರಸೂತಿ ಹಾಗೂ ಸ್ತಿçà ರೋಗ ತಜ್ಞೆ ಡಾ.ಶಮಾಪರ್ವೀನ್ ತಿಳಿಸಿದರು. ಮೇಡಂ ನಮ್ಮ ಬಳಿ ಈಗ ಅಷ್ಟು ಹಣ ಇಲ್ಲ ಸರಕಾರಿ ಆಸ್ಪತ್ರೆಗೆ ಹೋಗುತ್ತೇವೆ ಎಂದು ಹೇಳಿ ನಗರದ ಸಾರ್ವಜನಿಕ ಹೆರಿಗೆ ಆಸ್ಪತ್ರೆಗೆ ಬಂದಾಗ ಅಲ್ಲಿನ ಆರೋಗ್ಯ ಸಹಾಯಕಿಯರು ವೈದ್ಯರಿಗೆ ದೂರವಾಣಿ ಕರೆ ಮಾಡಿ ಹರಿಗೆಗೆ ಬಂದಿದ್ದಾರೆ ಎಂದು ತಿಳಿಸಿದಾಗ ಅವರಿಗೆ ಹೆರಿಗೆ ಮಾಡಿಸಲು ಆಸ್ಪತ್ರೆಗೆ ಸೇರಿಸಿಕೊಳ್ಳ ಬೇಡಿ ಹಾಗೂ ಅಂಬ್ಯೂಲೆನ್ಸ್ ವಾಹನ ಸಹ ಮಾಡಿಕೊಡಬೇಡಿ ಎಂದು ತಿಳಿಸಿದರು.ಇತ್ತ ಹೆರಿಗೆ ನೋವು ಕಾಣಿಸಿಕೊಂಡಿದೆ ಚಳ್ಳಕೆರೆಯಿಂದ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಆಟೋದಲ್ಲೇ ಗರ್ಭಿಣಿ ಮಹಿಳೆಯನ್ನು ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಗರ್ಭಿಣಿ ಪೋಷಕರು ಪತ್ರಿಕೆಯೊಂದಿಗೆ ಅಳಲು ತೋಡಿಕೊಂಡರು.
. ಗರ್ಭಿಣಿ ತಾಯಿ ಬೋರಮ್ಮ ಹೆರಿಗೆ ವೈದ್ಯರ ಹಾಗೂ ಅವ್ಯವಸ್ಥೆ ಬಗ್ಗೆ ಆಕ್ರೋಶ ಹೊರಹಾಕಿರುವುದು
ಸರಕಾರಿ ಆಸ್ಪತ್ರೆಯ ಹೆರಿಗೆ ಮತ್ತು ಸ್ತ್ರೀ ರೋಗ ತಜ್ಞೆ ಡಾ. ಡಾ.ಶಮಾಪರ್ವೀನ್ ಪತ್ರಿಕೆ ಸಂಪರ್ಕಿಸಿದಾಗ ಜಿ.ದೇವರಹಳ್ಳಿ ಗ್ರಾಮದ ಸುಮರಾಣೀ ಮದುವೆಯಾಗಿ ಸುಮಾರು 10 ವರ್ಷಕಳೆದರೂ ಮಕ್ಕಳಾಗಿರಲಿಲ್ಲ ಒಮ್ಮೆ ಬಂದು ನಮ್ಮಬಳಿ ಸಲಹೆ ಕೇಳಿದರು ಆಗನಾನು ಖಾಸಗಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪ್ರಾರಂಭಿಸಿದೆ ಚಿಕಿತ್ಸೆ ನೀಡಿದಾಗ ಗರ್ಭಿಣಿಯಾದರೂ ಈ ದಿನ ಹೊಟ್ಟೆನೋವು ಎಂದು ಬಂದಿದ್ದರೂ ಸರಕಾರಿ ಆಸ್ಪತ್ರೆಯಲ್ಲಿ ಈದಿನ ಅರವಳಿಕೆ ತಜ್ಞ ಡಾ. ಓಂಕಾರಮೂರ್ತಿ ರಜೆ ಇರುವುದರಿಂದ ಜಿಲ್ಲಾ ಆಸ್ಪತ್ರೆಗೆ ಹೋಗಿ ಎಂದಿದ್ದೇನೆ ಆದರೆ ಸರಕಾರಿ ಆಸ್ಪತ್ರೆಯಲ್ಲಿ ಸೇರಿಸಿಕೊಳ್ಳಬೇಡಿ, ಜಿಲ್ಲಾಸ್ಪತ್ರೆಗೆ ಹೋಗಲು ಅಂಬ್ಯುಲೆನ್ಸ್ ಕಳಿಸ ಬೇಡಿ ಎಂದು ಸಿಬ್ಬಂದಿಗೆ ಹೇಳಿಲ್ಲ ಅವರದೇ ಸ್ವಂತ ಆಟೋವಾಗಿರುವುದರಿಂದ 108 ಕ್ಕೆ ಕರೆಮಾಡದೆ ಹೋಗಿದ್ದಾರೆ. ಕರ್ತವ್ಯದಲ್ಲಿದ್ದ ಆರೋಗ್ಯ ಸಿಬ್ಬಂದಿಗಳು 108 ಕ್ಕೆ ಕರೆ ಮಾಡಿದ್ದಾರೆ ಬರುವಷ್ಟರಲ್ಲಿ ಅವರು ಆಟೋದಲ್ಲಿ ಹೋಗಿದ್ದರು ಎಂಬ ಮಾಹಿತಿಯನ್ನು ತಿಳಿಸಿದರು.

ಗರ್ಭಿಣಿ ತಾಯಿ ಬೋರಮ್ಮ ಮಾತನಾಡಿ ಪತ್ರಿ ತಿಂಗಳು ತಪಾಸಣೆಗೆ ಬಂದಾಗ 3 ರಿಂದ 4 ಸಾವಿರ ಬಿಲ್ ಮಾಡುತ್ತಿದ್ದಾರೆ ಇಂದು 8 ತಿಂಗಳಿಗೆ ಸಾಕಷ್ಟು ಹಣ ಖರ್ಚು ಮಾಡಿದ್ದೇವೆ ಈ ದಿನ ಹೆರಿಗೆ ನೋವು ಬಂದಿದೆ ಎಂದು ವೈದ್ಯರ ಬಳಿ ಬಂದರೆ 38 ಸಾವಿರ ರೂ ನೀಡಿದರೆ ಮಾತ್ರ ಹೆರಿಗೆ ಮಾಡಿಸುತ್ತೇನೆ ಎಂದು ಹೇಳಿದ್ದರಿಂದ ಅನಿವಾರ್ಯವಾಗಿ ಜಿಲ್ಲಾಸ್ಪತ್ರೆಗೆ ಆಟೋದಲ್ಲೇ ಹೆರಿಗೆಗೆ ಕರೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು.


ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಎಂದು ಹೇಳುತ್ತಾರೆ ಇಲ್ಲಿನವೈದ್ಯರು ಖಾಸಗಿ ಆಸ್ಪತ್ರೆಗಳನ್ನಿಟ್ಟುಕೊಂಡು ಹಣ ಮಾಡುತ್ತಿದ್ದಾರೆ ಒಂದು ಹೆರಿಗೆ ಆಗುವಷ್ಟರಲ್ಲಿ ಕನಿಷ್ಟ50ರಿಂದ 70 ಸಾವಿರ ಹಣ ಬೇಕು ಬಡವರು ,ಕೂಲಿ ಕಾರ್ಮಿಕರು ಸಾಲಸೂಲ ಮಾಡಿ ಹೆರಿಗೆ ಮಾಡಿಸುವ ಪರಿಸ್ಥಿತಿ ಬಂದಿದೆ ನಮ್ಮ ಮಗಳಿಗೆ ಆದ ಪರಿಸ್ಥಿತಿ ಮತ್ತೆ ಯಾರಿಗೂ ಆಗದಂತೆ ಸಂಬAಧಪಟ್ಟ ಅಧಿಕಾರಿಗಳು ನೋಡಿಕೊಳ್ಳ ಬೇಕಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸAಬಂಧಪಟ್ಟ ಜಿಲ್ಲಾ ಆರೋಗ್ಯಾಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
WhatsApp Audio 2023-05-22 at 6.05.21 PM
ಗರ್ಭಿಣಿ ಮಹಿಳೆಯ ಕುಟುಂಬರಸ್ಥರು ಜನಧ್ವನಿ ಮೀಡಿಯಾದೊಂದಿಗೆ ಮಾತನಾಡಿರುವುದು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page