ಅತ್ತಿಮಗ್ಗೆ ಗ್ರಾಮದಲ್ಲಿ ಜನತಾದರ್ಶನ ಕಾರ್ಯಕ್ರಮ ಭದ್ರಾದಿಂದ ಶುದ್ಧ ಕುಡಿಯುವ ನೀರು ಹಾಗೂ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ದೊರೆತಿದೆ- ಬಿ.ಜಿ. ಗೋವಿಂದಪ್ಪ

by | 21/11/23 | ಸುದ್ದಿ


ಹೊಸದುರ್ಗ ನ.21:
ಭದ್ರಾ ಜಲಾಶಯದಿಂದ ಹೊಸದುರ್ಗ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 400 ಕೋಟಿ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ವೇಗ ನೀಡಿ, ಕಾರ್ಯಗತಗೊಳಿಸಲಾಗುವುದು ಎಂದು ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.
ಮಂಗಳವಾರ ಹೊಸದುರ್ಗ ತಾಲ್ಲೂಕಿನ ಅತ್ತಿಮಗ್ಗೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಭದ್ರಾ ಯೋಜನೆ ಅನುμÁ್ಠನದಿಂದ ಹೊಸದುರ್ಗ ತಾಲ್ಲೂಕಿನ 1.33 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಉಣಿಸಲಾಗುವುದು. ರೂ.400 ಕೋಟಿ ವೆಚ್ಚದಲ್ಲಿ ಭದ್ರಾ ಜಲಾಶಯದಿಂದ ಬಹುಗ್ರಾಮ ಯೋಜನೆಯಡಿ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ತ್ವರಿತವಾಗಿ ನಡೆಯುತ್ತಿದೆ. ಮಾರ್ಚ್ ವೇಳೆಗೆ ಮೊದಲ ಹಂತದಲ್ಲಿ ಹೊಸದುರ್ಗ ನಗರ, ಕಸಬಾ ಹಾಗೂ ಮಾಡದಕರೆ ಹೋಬಳಿ ಅರ್ಧ ಭಾಗದ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ನೀಡಲಾಗುವುದು. ಮುಂದಿನ ವರ್ಷದ ವೇಳೆಗೆ ಉಳಿದ ಭಾಗಗಳಿಗೂ ಶುದ್ಧ ಕುಡಿಯುವ ನೀರು ನೀಡಲಾಗುವುದು ಎಂದರು.
ಬಗರ್ ಹುಕುಂ ನಡಿ ಭೂಮಿ ಸಾಗುವಳಿ ದಾಖಲೆ ನೀಡುವಂತೆ ಈ ಭಾಗದ ಬಹಳಷ್ಟು ರೈತರು ಅರ್ಜಿ ಸಲ್ಲಿಸುತ್ತಿರುವುದು ಗಮನಕ್ಕೆ ಬಂದಿದೆ. ಬಗರ್‍ಹುಕುಂ ಸಾಗುವಳಿ ಸಮಿತಿ ರಚನೆಗೆ ಈಗಾಗಲೆ ಸರ್ಕಾರಕ್ಕೆ ಪತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಸರ್ಕಾರ ಸಮಿತಿ ರಚನೆಗೆ ಅನುಮತಿ ನೀಡಲಿದೆ. ಫಾರಂ 54 ಹಾಗೂ 57 ಅಡಿ ಸಾಗುವಳಿ ಜಮೀನು ಮಂಜೂರಾತಿಗೆ ಸಲ್ಲಿಸಿದ ಅರ್ಜಿಗಳ ಆಧಾರದಲ್ಲಿ ಕಂದಾಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಜಮೀನಗಳ ಜಿ.ಪಿ.ಎಸ್ ಸರ್ವೇ ಮಾಡಿ ಸಾಗುವಳಿದಾರರ ವಿವರ ನಮೂದಿಸುವರು. ಇದನ್ನು ಆಧರಿಸಿ ಬಗರ್ ಹುಕುಂ ಸಮಿತಿ ಸಭೆಯಲ್ಲಿ ರೈತರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು. ವಿ.ವಿ. ಸಾಗರ ಜಲಾಶಯದ ಹಿನ್ನೀರಿನಿಂದ ತೊಂದರೆ ಅನುಭವಿಸುತ್ತಿರುವ ಈ ಭಾಗದ ರೈತರಿಗೇ ಮೊದಲು ಭೂಮಿ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಕಂದಾಯ ಸಚಿವರಾದ ಕೃಷ್ಣ ಭೈರೇಗೌಡವರು ತಾಂತ್ರಿಕ ಸಲಹೆ ಪಡೆದುಕೊಂಡು ಜಮೀನು ಹಂಚಿಕೆಗೆ ಕ್ರಮ ಕೈಗೊಂಡಿದ್ದಾರೆ. ಬಗರ್ ಹುಕುಂ ಅರ್ಜಿಗಳನ್ನು ಗಣಕೀಕರಣ ಮಾಡಿ ನೊಂದಾಯಿಸಲಾಗುವುದು. ಇದರಿಂದ ಅರ್ಜಿಗಳು ಕಳೆದು ಹೋಗುವ ಸಂಭವ ಎದುರಾಗುವುದಿಲ್ಲ. ಬಗರ್ ಹುಕುಂ ಸಮಿತಿಗೆ ಸರ್ಕಾರದಿಂದ ಅನುಮತಿ ಬಂದ ಬಳಿಕ, ತಹಶಿಲ್ದಾರರು ಕಾರ್ಯದರ್ಶಿಯಾಗಲಿದ್ದು ಪ್ರತಿ ವಾರ ತಪ್ಪದೇ ಸಭೆಗಳನ್ನು ನಡೆಸಿ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು. ಬಗರ್ ಹುಕುಂ ಸಮಿತಿಗೆ ಸ್ಥಳೀಯ ಶಾಸಕರು ಅಧ್ಯಕ್ಷರಾಗಿದ್ದು ಅನುಮೋದಿಸಿದ ಅರ್ಜಿಗಳಿಗೆ ಬಯೋ ಮೆಟ್ರಿಕ್ ನೀಡಬೇಕಾಗುತ್ತದೆ. ಅರ್ಜಿದಾರರಿಗೆ ಆನ್ ಲೈನ್ ಮೂಲಕವೇ ಸಾಗುವಳಿ ಚೀಟಿ ಲಭಿಸಲಿದೆ. ಫಾರಂ 53 ಅಡಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡಲಾಗುವುದು. ಸರ್ಕಾರ ಹಾಗೂ ಹೈಕೋರ್ಟ್ ಆದೇಶಗಳ ಅನುಸಾರ ಫಾರಂ 57 ಅಡಿ ಕ್ರಮಕೈಗೊಳ್ಳಲಾಗುವುದು. ಮಾರ್ಗಸೂಚಿಗಳ ಅನುಸಾರವೇ ಭೂಮಿ ಮುಂಜೂರು ಮಾಡಲಾಗುವುದು. ರೈತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬಾರದು. ಮುಂದಿನ ವರ್ಷದ ಮೇ ತಿಂಗಳಿನಲ್ಲಿ ಹೊಸ ಮನೆಗಳಿಗೆ ಅರ್ಜಿ ಕರೆಯಲಾಗುವುದು. ಹೊಸ ಅರ್ಜಿಗಳನ್ನು ಗ್ರಾಮ ಸಭೆಯ ಮುಂದಿರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಸದ್ಯ ಈ ಹಿಂದೆ ಮಂಜೂರು ಆಗಿರುವ ಮನೆಗಳಿಗೆ ಸರ್ಕಾರ ಅನುದಾನದ ನೀಡಿದೆ. ಫಲಾನುಭವಿಗಳು ಶೀಘ್ರವಾಗಿ ಮನೆಗಳನ್ನು ನಿರ್ಮಿಸಿಕೊಳ್ಳಬೇಕು ಎಂದರು.
ಜನತಾ ದರ್ಶನದಲ್ಲಿ ಸಲ್ಲಿಸಿದ ಅರ್ಜಿಗಳಿಗೆ 15 ದಿನದಲ್ಲಿ ಮನೆ ಬಾಗಿಲಿಗೆ ಉತ್ತರ ಬರುತ್ತದೆ. ಯಾರೂ ಕೂಡ ಕಚೇರಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಆದಿ ಜಾಂಬವ, ಅಂಬೇಡ್ಕರ್, ದೇವರಾಜ ಅರಸು, ಉಪ್ಪಾರ ಸೇರಿದಂತೆ ಎಲ್ಲಾ ನಿಗಮಮಂಡಳಿಗಳಲ್ಲಿ ಸಾಲ ಸೌಲಭ್ಯಕ್ಕೆ ಹಲವು ಜನರು ಅರ್ಜಿ ಸಲ್ಲಿಸಲಾಗಿದೆ. ನಿಗಮಗಳ ಸಾಲ ಮಂಜೂರಾತಿಗೆ ಗುರಿ ನಿಗದಿಯಾಗಿಲ್ಲ. ಗುರಿ ನಿಗದಿಯಾದ ಬಳಿಕ ಜೇಷ್ಠತೆ ಹಾಗೂ ಅರ್ಹತೆ ಆಧರಿಸಿ ಸಾಲ ಮಂಜೂರು ಮಾಡಲಾಗುವುದು. ವಿವಿಧ ನಿಗಮಗಳಡಿ ಸಾಲ ಸೌಲಭ್ಯ, ಗಂಗಾ ಕಲ್ಯಾಣ ಸೇರಿದಂತೆ ಯಾವುದೇ ಯೋಜನೆಗಳಡಿ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯಕ್ಕಾಗಿ ಯಾರೂ ಕೂಡ ಮಧ್ಯವರ್ತಿಗಳ ಹಾವಳಿಗೆ ಒಳಗಾಗಿ ಹಣ ಕಳೆದುಕೊಳ್ಳಬೇಡಿ, ಯೋಜನೆಗಳು ನೇರವಾಗಿ ಫಲಾನುಭವಿಗೆ ಮಂಜೂರು ಮಾಡಲಾಗುವುದು ಎಂದರು.
ಅತ್ತಿಮಗ್ಗೆ ಗ್ರಾ.ಪಂ. ಭಾಗದಲ್ಲಿ ಹಲವು ಗ್ರಾಮಗಳ ಜಮೀನು ವಿ.ವಿ. ಸಾಗರ ಹಿನ್ನೀರಿನಲ್ಲಿ ಮುಳುಗಡೆಯಾಗಿವೆ. ಇವರಿಗೆ ಬೇರೆಡೆ ಸಾಗುವಳಿ ಜಮೀನು ನೀಡಲಾಗುವುದು. ಬರಗಾಲದ ಹಿನ್ನಲೆಯಲ್ಲಿ ಕೆರೆ ಮೀನುಗಳ ಪಾಶುವಾರು ಹಕ್ಕಿನ ಹರಾಜಿಗೆ ತಡೆ ನೀಡಿ, ಲೈಸೆನ್ಸ್ ಹೊಂದಿದ ಮೀನುಗಾರರಿಗೆ ಮೀನು ಹಿಡಿಯಲು ಅವಕಾಶ ಮಾಡಿಕೊಡಲಾಗಿದೆ. ವಿವಿ ಸಾಗರ ಕೋಡಿಯಲ್ಲಿ ಹೆಚ್ಚಿನ ನೀರು ಹರಿದು ಹೋಗದೆ ಅತ್ತಿ ಮಗ್ಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಮೀನು ಮುಳುಗಡೆಯಾಗುತ್ತಿತ್ತು. ಇದಕ್ಕೆ ಪರಿಹಾರ ಒದಗಿಸಲು ವೇದಾವತಿ ನದಿ ನೀರಿನ ಜೊತೆಗೆ ವಿ.ವಿ ಸಾಗರಕ್ಕೆ ಸೇರುವ ಇತರೆ ಹಳ್ಳಗಳ ನೀರಿನ ಅಳತೆಗೂ ಗೇಜಿಂಗ್ ಅಳವಡಿಸಲಾಗುವುದು. ಜಲಾಶಯ ಗರಿಷ್ಟ 130 ಅಡಿಗೆ ಮಾತ್ರ ನೀರು ನಿಲ್ಲುವಂತೆ ತಂತ್ರಜ್ಞಾನ ಅಳವಡಿಸಲಾಗುವುದು. ಕಳೆದ ಬಾರಿ 25 ಸಾವಿರ ಎಕರೆಗೂ ಹೆಚ್ಚಿನ ಜಮೀನನಲ್ಲಿ ನೀರು ನಿಂತು ಅಪಾರ ಹಾನಿ ಸಂಭವಿಸಿತ್ತು. ವಿಶ್ವೇಶ್ವರಯ್ಯ ಜಲ ನಿಗಮದಿಂದ ಯೋಜನೆ ಡಿಪಿಆರ್ ಅನ್ನು ಜಲಸಂಪನ್ಮೂಲ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯೋಜನೆ ಅನುμÁ್ಠನಕ್ಕೆ ಅನುಮೋದನೆ ನೀಡುವರು ಎಂದರು. ಕೋಡಿ ನೀರು ಹರಿದು ಹೋಗವ ಹಾದಿಯಲ್ಲಿ ರಸ್ತೆ ಮುಳುಗಡೆಗೊಂಡು ಸಂಪರ್ಕ ಕಡತ ತಪ್ಪಿಸಲು ರೂ.33 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. ಹೊಸದುರ್ಗ ತಾಲ್ಲೂಕು ಆಡಳಿತ ಹಾಗೂ ಪಂಚಾಯತಿಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಮುಂದಿನ ಮಂಗಳವಾರ ತಾಲ್ಲೂಕಿನ ಬಾಗೂರು ಗ್ರಾ.ಪಂ. ನಲ್ಲಿ ಜನತಾ ದರ್ಶನ ಏರ್ಪಡಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಪ್ರ್ರಾಸ್ತಾವಿಕವಾಗಿ ಮಾತನಾಡಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಅಲಿಸಿ ಪರಿಹಾರ ನೀಡಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಇದುವರೆಗೂ ಜರುಗಿದ ಜನತಾ ದರ್ಶನ ಕಾರ್ಯಕ್ರಮಗಳಲ್ಲಿ ಒಟ್ಟು 721 ಅರ್ಜಿಗಳು ಸ್ವೀಕರಿಸಲಾಗಿದ್ದು, ಈಗಾಗಲೆ 589 ಅರ್ಜಿಗಳನ್ನು ವಿಲೇ ಮಾಡಲಾಗಿದೆ. ಉಳಿದ ಅರ್ಜಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಳೆದ ಅ. 30 ರಂದು ಹೊಸದುರ್ಗ ನಗರದಲ್ಲಿ ಜರುಗಿದ ಜನತಾ ದರ್ಶನದಲ್ಲಿ 262 ಅರ್ಜಿಗಳು ಸ್ವೀಕರಿಸಲಾಗಿದ್ದು, 20 ದಿನದಲ್ಲಿ 80 ಅರ್ಜಿಗಳು ವಿಲೆ ಮಾಡಲಾಗಿದೆ. ಉಳಿದ 182 ಅರ್ಜಿಗಳಿಗೆ ಒಂದು ತಿಂಗಳ ಒಳಗಾಗಿ ಪರಿಹಾರ ನೀಡಲಾಗುವುದು ಎಂದರು.
ಜನತಾ ದರ್ಶನದ ಅಂಗವಾಗಿ ವಿವಿಧ ಇಲಾಖೆಗಳಿಂದ ಕೌಂಟರ್ ತೆರದು ಸ್ಥಳದಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಯಿತು. ಜನರು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಬಳಿ ತಮ್ಮ ಅಹವಾಲುಗಳನ್ನು ನಿವೇದಿಸಿಕೊಂಡರು. ಅತ್ತಿಮಗ್ಗೆ ಗ್ರಾಮದಲ್ಲಿ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದ್ದು, ಪೂರ್ಣಕಾಲಿಕ ಅಧಿಕಾರಿಗಳನ್ನು ನೇಮಿಸುವಂತೆ ಕೇಳಿಕೊಂಡರು. ಅತ್ತಿಮಗ್ಗೆ-ಮುದ್ದೇನಟ್ಟಿ ಗ್ರಾಮದ ದಾರಿಯಲ್ಲಿ ಕಿರು ಸೇತುವೆ ನಿರ್ಮಿಸಿಕೊಡಲು ಮನವಿ ಮಾಡಿದರು. ಮಾಡದಕೆರೆ ಹೋಬಳಿಯಲ್ಲಿ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ತನಿಖೆ ನಡೆಸುವಂತೆ ಕೋರಿದರು. ಅಲ್ಲದೆ ಗೃಹಲಕ್ಷ್ಮಿ ಯೋಜನೆಯಡಿ ಕೆಲವರು ಹಣ ಬಂದಿಲ್ಲ ಎಂದು ಅಹವಾಲು ಸಲ್ಲಿಸಿದರು.
ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಅನುಸೂಯಮ್ಮ, ಜಿ.ಪಂ. ಯೋಜನಾ ನಿರ್ದೆಶಕ ರಂಗಸ್ವಾಮಿ, ತಾ.ಪಂ. ಇಓ ಸುನೀಲ್ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಹೊಸದುರ್ಗ ತಹಶೀಲ್ದಾರ್ ತಿರುಪತಿ ಪಾಟೀಲ್ ಸ್ವಾಗತಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page