ಕರ್ನಾಟಕ ಪ್ರೆಸ್ ಕ್ಲಬ್ ನ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

by | 27/11/23 | ಸುದ್ದಿ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಗುರುತಿಸಿ ನೀಡುತ್ತಾ ಬರುತ್ತಿರುವ ಕರ್ನಾಟಕ ಪ್ರಜಾ ಭೂಷಣ ಪ್ರಶಸ್ತಿಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕಾಳಮ್ಮನಕೊಪ್ಪಲು ಗ್ರಾಮದ ಪತ್ರಕರ್ತರು, ಸಾಮಾಜಿಕ ಸೇವಾ ಕಾರ್ಯಕರ್ತರು ಹಾಗೂ ಸಂಘಟಕರಾದ ಕೆ.ಟಿ.ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ.

ಇವರು ಸಾಕ್ಷರತೆ, ವಿವಿಧ ಜನಜಾಗೃತಿ ಕಲಾ ಜಾಥ ಕಾರ್ಯಕ್ರಮ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರಗಳು, ಯುವಜನ ಮೇಳಗಳು, ರಕ್ತದಾನ ಶಿಬಿರ, ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಕಾನೂನು ಅರಿವು ಕಾರ್ಯಕ್ರಮ ಸೇರಿದಂತೆ ಹತ್ತಾರು ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಕಳೆದ 15 ವರ್ಷಕ್ಕೂ ಹೆಚ್ಚಿನ ಕಾಲದಿಂದಲೂ ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದಾರೆ.

ಇವರಿಗೆ ಜಿಲ್ಲಾ ಯುವ ಪ್ರಶಸ್ತಿ, ಡಾ.ಎಪಿಜೆ ಅಬ್ದುಲ್ ಕಲಾಂ ಸದ್ಭಾವನಾ ಪ್ರಶಸ್ತಿ, ಲೇಪಾಕ್ಷ ಶ್ರೀ ಪ್ರಶಸ್ತಿ, ಕರ್ನಾಟಕ ಭೂಷಣ ಪ್ರಶಸ್ತಿ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ಪ್ರಶಸ್ತಿ, ಸಮಾಜ ಸೇವಾ ರತ್ನ ಪ್ರಶಸ್ತಿ, ಗಣರಾಜ್ಯೋತ್ಸವ ಪ್ರಶಸ್ತಿ, ಯುವ ಚೇತನ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಇವರಿಗೆ ಸಂದಿವೆ. ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಲವು ಸಂಘಟನೆಗಳು ಇವರನ್ನು ಸನ್ಮಾನಿಸಿವೆ.

ಇವರಿಗೆ ನ.30ರಂದು ಮೈಸೂರು ನಗರದ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಭಾಂಗಣದಲ್ಲಿ ನಡೆಯುವ ಸುವರ್ಣ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿಯನ್ನು ಪ್ರಧಾನ ಮಾಡಿ ಗೌರವಿಸಲಾಗುವುದು ಎಂದು ಸುಮಂಗಲಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಹೆಚ್‌.ವಿ.ಪುಟ್ಟಸ್ವಾಮಿ ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page