ಕರ್ನಾಟಕ ಭೀಮಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮ ಲಿಂಗಯ್ಯನವರ ಆದೇಶದ ಮೇರೆಗೆ ಜಿಲ್ಲಾಪದಾಧಿಕಾರಿಗಳ ಹಾಗೂ ಕಾರ್ಯಕಾರಣಿ ಸಭೆಯ ಉದ್ಘಾಟನೆ ಕಾರ್ಯಕ್ರಮ

by | 24/07/24 | ಸುದ್ದಿ


ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಯನ್ನು ಬಲಪಡಿಸುವ ಮೂಲಕ ಬಡವರಿಗೆ, ನೊಂದವರಿಗೆ, ಶೋಷಿತರಿಗೆ, ಸಮಾಜದ ಎಲ್ಲಾ ವರ್ಗದ ನೋವುಂಡ ಜನರಿಗೆ ಧ್ವನಿಯಾಗಬೇಕು ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಸಮಿತಿ ಅಧ್ಯಕ್ಷರಾದ ರೇವಣಸಿದ್ದಪ್ಪ ಬಿ.ಕಲ್ಕುಂಟೆ ಅವರು ಹೇಳಿದರು.
ಕರ್ನಾಟಕ ಭೀಮ್ ಸೇನೆಯ ರಾಜ್ಯಾಧ್ಯಕ್ಷರಾದ ಶಂಕರ್ ರಾಮಲಿಂಗಯ್ಯರವರ ಆದೇಶದ ಮೇರೆಗೆ ಚಿತ್ರದುರ್ಗ ಜಿಲ್ಲಾ ಸಮಿತಿ ಅಧ್ಯಕ್ಷರಾದ ರೇವಣಸಿದ್ದಪ್ಪ ಬಿ.ಕಲ್ಕುಂಟೆ ಮತ್ತು ಹಿರಿಯೂರು ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎನ್.ವಿಜಯಕುಮಾರ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪಧಾದಿಕಾರಿಗಳು ಹಾಗೂ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸಂಘಟನೆಯನ್ನು ಬಲ ಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚಿತ್ರದುರ್ಗ ನಗರದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಲು ಮತ್ತು ಜಿಲ್ಲೆಯಲ್ಲಿ ಸಂಘಟನೆಯ ಬಲ ಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಭೀಮ ಸೇನೆ ಸಂಘಟನೆಗೆ ಹೆಚ್ಚಿನ ಸದಸ್ಯರನ್ನು ನೊಂದಾಯಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಘಟನೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಚಿತ್ರದುರ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಪ್ರದೀಪ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ವಸಂತಕುಮಾರ್, ಯುವ ಘಟಕದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ವಿನಯ್ ಪ್ರಸಾದ್,
ಕಾರ್ಮಿಕ ಘಟಕದ ನಗರ ಅಧ್ಯಕ್ಷರಾಗಿ ಶಾರುಖ್, ಉಪಾಧ್ಯಕ್ಷರಾಗಿ ಪವನ್, ಕಾರ್ಯದರ್ಶಿಯಾಗಿ ಮನ್ಸೂರ್, ಅಲ್ಪಸಂಖ್ಯಾತರ ಕಾರ್ಯದರ್ಶಿಯಾಗಿ ಮುಬಾರಕ್, ಹೊಸದುರ್ಗ ತಾಲ್ಲೂಕಿಗೆ ಯುವ ಘಟಕದ ಅಧ್ಯಕ್ಷರಾಗಿ ವರದರಾಜ್, ಮತ್ತೋಡು ಹೋಬಳಿ ಅಧ್ಯಕ್ಷರಾಗಿ ಮಂಜುನಾಥ್,
ಹಿರಿಯೂರು ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಕರಿಯಮ್ಮ ಸೇರಿದಂತೆ ಹಲವಾರು ಪದಾಧಿಕಾರಿಗಳ ಕನಾ೯ಟಕ ಭೀಮ್ ಸೇನೆಯ ಕುಟುಂಬಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಉಸ್ತುವಾರಿ ಅಧ್ಯಕ್ಷರು ರಂಗಸ್ವಾಮಿ ಕೋಟೆನಾಡು, ಮಧ್ಯ ಕನಾ೯ಟಕ ವಿ.ಶಿವಕುಮಾರ್, ರಾಜ್ಯ ಕಾರ್ಯದರ್ಶಿಗಳು ಮಸ್ಕಲ್ ಮಟ್ಟಿ ಎನ್.ರಮೇಶ್, ಜಿಲ್ಲಾ ಗೌರವಾಧ್ಯಕ್ಷರು ಜಿಲ್ಲಾ ಅಧ್ಯಕ್ಷರು ಕಲ್ಕುಂಟೆ ಬಿ.ರೇವಣಸಿದ್ದಪ್ಪ, ಕರ್ನಾಟಕ ಭೀಮ್ ಸೇನೆ ಜಿಲ್ಲಾ ಅಧ್ಯಕ್ಷರು ಕೆ.ಬಿ.ದಾದಾಪೀರ್,
ಅಲ್ಪಸಂಖ್ಯಾತರ ಘಟಕ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಇಂದಿರಮ್ಮ, ಜಿಲ್ಲಾ ಕಾರ್ಯಾಧ್ಯಕ್ಷರು ವೃಷಭೇಂದ್ರಬಾಬು, ಜಿಲ್ಲಾ ಉಪಾಧ್ಯಕ್ಷರುಗಳಾದ ಸಿದ್ದಪ್ಪ ಮಲ್ಲಪ್ಪನಹಳ್ಳಿ, ಲಿಂಗರಾಜ್, ಹನುಮಂತು, ದುರ್ಗೇಶ್, ಘಾಟ್ ನಾರಸಿಂಹಮೂರ್ತಿ, ದೇವರಾಜ್, ಇಸ್ಮಾಯಿಲ್,
ಜಿಲ್ಲಾ ಕಾರ್ಯದರ್ಶಿ ಜಬೀಉಲ್ಲಾ, ಅಧ್ಯಕ್ಷರು ಮೊಳಕಾಲ್ಮೂರು ಮಂಜುನಾಥ್, ತಾಲ್ಲೂಕು ಸಮಿತಿ ಗಂಗಾಧರ್ , ಹೊಳಲ್ಕೆರೆ ತಾಲ್ಲೂಕು ಸಮಿತಿ ಅಧ್ಯಕ್ಷರು ಗೌತಮ್, ಚಿತ್ರದುರ್ಗ. ತಾಲ್ಲೂಕು ಸಮಿತಿ ಅಧ್ಯಕ್ಷರು ಸುರೇಶ್ ಎಸ್.(ಕಳವಿಭಾಗಿ), ಹಿರಿಯೂರು ತಾಲ್ಲೂಕು ಉಸ್ತುವಾರಿ ಕಾರ್ಯಾಧ್ಯಕ್ಷರು ತಿಮ್ಮಯ್ಯ( ಬಗ್ಗನಾಡು),
ಹಿರಿಯೂರು ತಾಲ್ಲೂಕು ಎಸ್.ಕುಮಾರ್, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಕೆ.ಶಿವಕುಮಾರ್, ತಾಲ್ಲೂಕು ಯುವ ಘಟಕದ ಗೌರವಾಧ್ಯಕ್ಷರು ವೈ ಮಹೇಶ್,. ತಾಲ್ಲೂಕು ಯುವ ಘಟಕದ ಅಧ್ಯಕ್ಷರು ನಗರ ಘಟಕದ ಅಧ್ಯಕ್ಷರು ಡಿ.ಕೆ.ರಘು, ಆಟೋ ಘಟಕದ ಗೌರವಾಧ್ಯಕ್ಷರು ನೌಷಂದ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಮಹಮ್ಮದ್ ಖಾಸಿಂ, ಆಟೋ ಘಟಕದ ಅಧ್ಯಕ್ಷರು ಟಿ.ನಾಗರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page