ಕಲಾ ಸರಸ್ವತಿಯು ಕಲಾ ರಂಗಕ್ಕೆ ಎಲ್ಲರನ್ನೂ ಆಹ್ವಾನಿಸುತ್ತದೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ: ಶಾಸಕ ಟಿ ರಘುಮೂರ್ತಿ

by | 07/08/23 | ರಂಗಭೂಮಿ

ಚಳ್ಳಕೆರೆ: ಕನ್ನಡ ನಾಡು ನುಡಿ ಸಂಸ್ಕೃತಿಯ ರಕ್ಷಣೆಗೆ ತಾಲೂಕಿನ ಕನ್ನಡ ಅಭಿಮಾನಿಗಳು ಸದಾ ಮುಂದಿರುತ್ತಾರೆ. ಆಂಧ್ರದ ಗಡಿಭಾಗವಾಗಿ ತಾಲೂಕು ಗುರುತಿಸಿಕೊಂಡಿದ್ದರು ನಾಡು ನುಡಿಯ ವಿಷಯದಲ್ಲಿ ದಕ್ಕೆ ಉಂಟಾದಾಗ ಹೋರಾಟದ ಮನೋಭಾವ ಬೆಳೆಸಿಕೊಂಡಿರುವುದು ಶ್ಲಾಘನೀಯವಾದಂತಹ ವಿಷಯವಾಗಿದೆ. ಇತ್ತೀಚಿನ ದಿನಗಳಲ್ಲಿ ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳ ವ್ಯಾಮೋಹದಿಂದ ಸಾರ್ವಜನಿಕರು ಬಯಲು ರಂಗಮಂದಿರದಲ್ಲಿ ಒಂದೆಡೆ ಸೇರಿ ಚಲನಚಿತ್ರ ಗೀತೆಗಳ ರಸಮಂಜರಿ ಕಾರ್ಯಕ್ರಮಗಳನ್ನು ವೀಕ್ಷಿಸುವ ಕಾಲ ಮರೆಯಾಗುತ್ತಿರುವುದು ವಿಷಾದ ಸಂಗತಿ ಎಂದು ಶಾಸಕ ಟಿ ರಘುಮೂರ್ತಿ ಅಭಿಪ್ರಾಯ ಪಟ್ಟರು.

ನಗರದ ಬಿಸಿನೀರು ಮುದ್ದಪ್ಪ ಪ್ರೌಢಶಾಲಾ ಆವರಣದಲ್ಲಿ ಶ್ರೀ ವಿಶ್ವಭಾರತಿ ಯುವ ಬಳಗ ಗೋಣಿಬೀಡು ಭದ್ರಾವತಿ, ನೇತಾಜಿ ಸ್ನೇಹ ಬಳಗ, ಸುರಕ್ಷಾ ಪಾಲಿ ಕ್ಲಿನಿಕ್, ರೋಟರಿ ಕ್ಲಬ್, ಸಂಜೀವಿನಿ ಲ್ಯಾಬ್, ಹಾಗೂ ಸೃಷ್ಟಿ ಮಿತ್ರ ಬಳಗದ ಸಹಯೋಗದಲ್ಲಿ ಶ್ರೀ ವಿಶ್ವ ಭಾರತಿ ಯುವ ಬಳಗ ಗೋಣಿಬೀಡು ಇವರು ನಿರ್ಮಿಸುವ ಕಲಾವಿದರ ಆಶ್ರಯಧಾಮ ಮತ್ತು ಸಂಗೀತ ಶಾಲೆಯ ಸಹಾಯಾರ್ಥ ಕನ್ನಡ ನಿತ್ಯೋತ್ಸವ ರಸಮಂಜರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನ್ನಡ ಚಿತ್ರರಂಗದ ಮೇರು ಧ್ರುವತಾರೆಗಳಾದ ಡಾ.ರಾಜ್ ಕುಮಾರ್ ಡಾ. ವಿಷ್ಣುವರ್ಧನ್ ಡಾ. ಅಂಬರೀಶ್, ಶಂಕರ್ ನಾಗ್ ರವಿಚಂದ್ರನ್ ಹೊರತುಪಡಿಸಿ ಮಹಾನ್ ನಟರು ತಮ್ಮದೇ ಆದ ವಿಶಿಷ್ಟ ನಟನಾಶೈಲಿಯಿಂದ ಕನ್ನಡ ಚಿತ್ರ ರಸಿಕರನ್ನು ರಂಜಿಸಿ ಮರೆಯಾಗಿದ್ದಾರೆ ಅವರನ್ನು ಇಂದಿನ ಯುವ ಪೀಳಿಗೆ ಪ್ರತ್ಯಕ್ಷವಾಗಿ ನೋಡಲಾಗದಿದ್ದರು ಜೂನಿಯರ್ ಕಲಾವಿದರು ಇಂತಹ ರಸಮಂಜರಿ ಕಾರ್ಯಕ್ರಮಗಳಲ್ಲಿ ಅವರಂತೆ ನಟಿಸಿ ಅವರ ನೆನಪನ್ನು ಅಚ್ಚಳಿಯದಂತೆ ಉಳಿಯುವಂತೆ ಮಾಡುತ್ತಿದ್ದಾರೆ ಕಲಾ ಸರಸ್ವತಿಯು ಕಲಾ ರಂಗಕ್ಕೆ ಎಲ್ಲರನ್ನೂ ಆಹ್ವಾನಿಸಿದರೂ ಕೆಲವರನ್ನು ಮಾತ್ರ ಆರಿಸಿಕೊಳ್ಳುತ್ತದೆ.

 ಇಂದಿನ ದಿನಮಾನಗಳಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು ಅನೇಕ ಹಿರಿಯ ಕಲಾವಿದರು ಅವಕಾಶ ವಂಚಿತರಾಗಿ ತಮ್ಮ ಜೀವನ ನಡೆಸುವುದು ದುಸ್ತರವಾಗಿರುವುದರಿಂದ ಅಂತಹ ಕಲಾವಿದರನ್ನು ಪೋಷಿಸುವ ಸಲುವಾಗಿ ಶ್ರೀ ವಿಶ್ವ ಭಾರತಿ ಯುವ ಬಳಗ ಗೋಣಿಬೀಡು, ಆಶ್ರಯಧಾಮ ಮತ್ತು ಸಂಗೀತ ಶಾಲೆ ನಿರ್ಮಿಸುತ್ತಿರುವುದು ಹೆಮ್ಮೆ ಪಡುವಂತಹ ವಿಷಯವಾಗಿದೆ ಸರ್ಕಾರದೊಂದಿಗೆ ಮಾತನಾಡಿ ಆರ್ಥಿಕ ನೆರವನ್ನು ಕೊಡಿಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜೂನಿಯರ್ ಅಂಬರೀಶ್ ಜೂನಿಯರ್ ವಿಷ್ಣುವರ್ಧನ್ ಜೂನಿಯರ್ ಶಂಕರ್ ನಾಗ್ ಜೂನಿಯರ್ ರವಿಚಂದ್ರನ್ ಹಿರಿಯ ಕಲಾವಿದರ ಚಲನಚಿತ್ರ ಹಾಡುಗಳು ಹೆಜ್ಜೆ ಹಾಕಿ ನೆರೆದಿದ್ದ ತಾಲೂಕಿನ ಕಲಾ ರಸಿಕರನ್ನು ರಂಜಿಸಿದರು ಸೃಷ್ಟಿ ಮೆಲೋಡಿಸ್ ವತಿಯಿಂದ ಗಾಯನ ರಸಮಂಜರಿ ಕಾರ್ಯಕ್ರಮ ಸಹ ನಡೆಯಿತು ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಹಾಗೂ ಎಸ್ ಎಸ್ ಎಲ್ ಸಿ ಪಿಯುಸಿ ವಿಭಾಗಗಳಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಮೂರನೇ ಬಾರಿಗೆ ಆಯ್ಕೆಯಾದ ಶಾಸಕ ಟಿ ರಘು ಮೂರ್ತಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ವಿರೂಪಾಕ್ಷ, ಸಾವಿತ್ರಮ್ಮ, ವಿಜಯಲಕ್ಷ್ಮಿ,  ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ವೀರಭದ್ರಪ್ಪ,  ಶಶಿಧರ, ಕುಶಲಕರ್ಮಿ ರಾಜ್ಯ ಅಧ್ಯಕ್ಷರಾದ ಆರ್. ಪ್ರಸನ್ನಕುಮಾರ್, ಕಲಾವಿದರಾದ ಜ್ಯೂನಿಯರ್ ಶ್ರೀ ವಿಷ್ಣುವರ್ಧನ್, ಶ್ರೀ ಅಂಬರೀಷ್, ಶ್ರೀ ರವಿಚಂದ್ರನ್, ಶ್ರೀ ಶಂಕರನಾಗ್, ಮುಖಂಡರುಗಳಾದ ನೇತಾಜಿ ಆರ್ ಪ್ರಸನ್ನ, ಕಸಪ್ಪ ತಾಲೂಕು ಕಾಸಪ್ಪ ಅಧ್ಯಕ್ಷ ಟಿ ವೀರಭದ್ರ ಸ್ವಾಮಿ ಸಂಜೀವಿನಿ ಲ್ಯಾಬ್ ಎಂಎಂ ಮೃತ್ಯುಂಜಯ ಫರೀದ್ ಖಾನ್ ಸೃಷ್ಟಿ ತಿಪ್ಪೇಶ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page