ಗಣಪ ಹೋದ ಜೋಕುಮಾರಸ್ವಾಮಿ ಮನೆ ಮನೆಗೆ ಮಹಿಳೆಯ ಪುಟ್ಟಿಮೇಲೆ ಬಂದ…

by | 25/09/23 | Uncategorized, ವೈವಿಧ್ಯ, ಸಾಂಸ್ಕೃತಿಕ


ಚಳ್ಳಕೆರೆ ಜನಧ್ವನಿ ವಾರ್ತೆ ಸೆ.25 ಗಣೇಶ ಹಬ್ಬದ ನಂತರ ಜೋಕುಮಾರಸ್ವಾಮಿಯನ್ನು ಹೊತ್ತ ಮಹಿಳೆಯರು ಸಾಮಾನ್ಯವಾಗಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮನೆ ಮನೆಗೆ ಬರುವುದು ಕಾಣಬಹುದಾಗಿದೆ.


ಮನೆ ಮನೆಗೆ ಸಮೃದ್ಧಿ ಹೊತ್ತು ತರುವ ಜೋಕುಮಾರಸ್ವಾಮಿ ರಾಜ್ಯಾದ್ಯಂತ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗಿದೆ. ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಇಲ್ಲಿ ಗಣೇಶ ಚತುರ್ಥಿಯ ನಂತರ ಕಾಣಿಸಿಕೊಳ್ಳುವ ಪ್ರಮುಖ ಆಚರಣೆಗಳಲ್ಲಿ ಜೋಕುಮಾರಸ್ವಾಮಿಯೂ ಒಂದು.ಗಣೇಶ ಚತುರ್ಥಿಯ ಐದನೇ ದಿನ ಅಂದರೆ, ಅಷ್ಟಮಿಯ ದಿನ ಮೂಲಾನಕ್ಷತ್ರದಲ್ಲಿ ಜೋಕುಮಾರಸ್ವಾಮಿಯ ಜನನವಾಗುತ್ತದೆ. ಗಂಗಾಮತಸ್ಥರು ಮನೆತನದವರು ಹೊಲದಿಂದ ಮಣ್ಣು ತಂದು ಬಡಿಗೇರ ಮನೆಯಲ್ಲಿ ಜೋಕುಮಾರಸ್ವಾಮಿಯ ಮೂರ್ತಿಯನ್ನು ಮಾಡಿಸುತ್ತಾರೆ. ನಂತರ ಏಳು ದಿನಗಳ ಕಾಲ ಆ ಮೂರ್ತಿಯನ್ನು ಗಂಗಾಮತಸ್ಥರು ಮನೆತನದವರು ಏಳು ಊರುಗಳಿಗೆ ತಗೆದುಕೊಂಡು ಹೋಗುತ್ತಾರೆ. ಅದರಲ್ಲೂ ಪ್ರಮುಖವಾಗಿ ರೈತರ ಮನೆಗೆ ಜೋಕುಮಾರಸ್ವಾಮಿಯನ್ನು ಹೊತ್ತುಕೊಂಡು ಹೋಗಲಾಗುತ್ತದೆ. ಜೋಕುಮಾರನನ್ನು ಹೊತ್ತು ಬರುವ ಮಹಿಳೆಯರು .


ಜೋಕುಮಾರಸ್ವಾಮಿಗೆ ಕಾಲುಗಳಿಲ್ಲದ ಕಾರಣ ಮಹಿಳೆಯರು ಬುಟ್ಟಿಯಲ್ಲಿ ಹೊತ್ತು ತಿರುಗುತ್ತಾರೆ. ಜೋಕುಮಾರ ಸ್ವಾಮಿಯನ್ನು ಹೊತ್ತು ತಂದ ಮಹಿಳೆಯರು ಮನೆ ಮನೆಗೆ ಭೇಟಿ ನೀಡುತ್ತಾರೆ. ಮನೆಯ ಮುಂದೆ ಬಾಗಿಲಲ್ಲಿ ಜೋಕುಮಾರಸ್ವಾಮಿ ಮೂರ್ತಿ ಇಟ್ಟು ಅವನ ಕುರಿತು ಜಾನಪದ ಹಾಡು ಹೇಳುತ್ತಾರೆ. ಜೋಕು­ಮಾರನನ್ನು ಜನಪದರು ತಮ್ಮ ಹಾಡುಗಳಲ್ಲಿ ಹೀಗೆ ಹೇಳುತ್ತಾರೆ

‘ಅಡ್ಡಡ್ಡ ಮಳೆ ಬಡಿದು, ದೊಡ್ಡ ದೊಡ್ಡ ಕೆರಿ ತುಂಬಿ, ಗೊಡ್ಡುಗಳೆಲ್ಲಾ ಹೈನಾಗಿ ಜೋಕುಮಾರ…

ರೈತರ ದೇವತೆ ಎನ್ನುವಲ್ಲಿ ಹಾಡುವ ಹಾಡು ಹೀಗಿದೆ,

‘ಹಾಸ್ಯಾಸಿ ಮಳಿ ಬಡಿದು ಬೀಸಿ ಬೀಸಿ ಕೆರೆ ತುಂಬಿ, ಬಾಸಿಂಗದಂತ ತೆನೆಬಾಗಿ ಗೌಡರ ರಾಶಿಯ ಮ್ಯಾಲೆ, ಸಿರಿ ಬಂದು ಜೋಕಮಾರ….

“ಗೊಡ್ಡುಗಳೆಲ್ಲ ಹೈನಾಗಿ ಜೋಕುಮಾರ್ ಗುಡ್ಡಗಳೆಲ್ಲ ಹಸಿರಾಗಿ ಜೋಕುಮಾರ, ಹಾಸ್ಯಾಸಿ ಮಳಿ ಬಡಿದು, ಬೀಸಿ ಬೀಸಿ ಕೆರೆತುಂಬಿ ಬಾಸಿಂಗದಂತ ತೆನೆಬಾಗಿ ಜೋಕುಮಾರ.ಈ ವೇಳೆ ಮನೆಯವರು ಜೋಕುಮಾರಸ್ವಾಮಿಗೆ ಜೋಳ, ಅಕ್ಕಿ ಮೆಣಸಿನಕಾಯಿ, ಹಾಗೂ ತರಕಾರಿ ಸೇರಿದಂತೆ ವಿವಿಧ ಧಾನ್ಯಗಳನ್ನು ನೀಡುತ್ತಾರೆ. ಈ ರೀತಿ ಧಾನ್ಯ ನೀಡಿದ ಮಹಿಳೆಯರಿಗೆ ಜೋಕುಮಾರಸ್ವಾಮಿ ಹೊತ್ತ ಮಹಿಳೆಯರು ಕಾಡಿಗೆ ಮತ್ತು ಅಂಬಲಿಯನ್ನು ನೀಡುತ್ತಾರೆ. ಈ ಕಾಡಿಗೆಯನ್ನು ಮನೆಯ ಬಾಗಿಲಿಗೆ ಹಚ್ಚುವುದು ,ರೈತರು ಜಮೀನುಗಳಿಗೆ ಚರಗ ಚೆಲ್ಲುತ್ತಾರೆ. ಅಂಬಲಿಯನ್ನು ಜಮೀನಿಗೆ ಚರಗ ಚೆಲ್ಲುವುದರಿಂದ ಉತ್ತಮ ಬೆಳೆ ಬರುತ್ತದೆ ಎಂಬುದು ಜನರ ನಂಬಸಮೃದ್ಧಿಯನ್ನು ಹೊತ್ತು ತರುವ ಜೋಕುಮಾರಸ್ವಾಮಿ :ಪ್ರಸ್ತುತ ಮಳೆಯಿಲ್ಲದ ಕಾರಣ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಜೋಕುಮಾರಸ್ವಾಮಿ ಕೈಲಾಸಕ್ಕೆ ಹೋಗಿ ಮಳೆಯಿಲ್ಲದ ರೈತರ ಸಂಕಷ್ಟವನ್ನು ಪಾರ್ವತಿ ಪರಮೇಶ್ವರನಿಗೆ ತಿಳಿಸುತ್ತಾನೆ. ಬಳಿಕ ಭೂಲೋಕದಲ್ಲಿ ಮಳೆ ಬೆಳೆ ಉಂಟಾಗುತ್ತದೆ ಎಂಬುದು ನಂಬಿಕೆ. ಇಂದೀಗೂ ಜನರಲ್ಲಿ ನಂಬಿಕೆ ಇದೆ.


ಜೊತೆಗೆ ಮದುವೆಯಾಗದವರಿಗೆ ಮದುವೆ, ಮಕ್ಕಳಾಗದವರಿಗೆ ಸಂತಾನಭಾಗ್ಯವನ್ನು ಜೋಕುಮಾರಸ್ವಾಮಿ ಕಲ್ಪಿಸುತ್ತಾನೆ. ಈ ರೀತಿ ಬೇಡಿಕೊಂಡವರು ಜೋಕುಮಾರ ಸ್ವಾಮಿಗೆ ತೊಟ್ಟಿಲು, ಲಿಂಗದಕಾಯಿ ಮತ್ತು ಉಡುದಾರ ನೀಡುತ್ತಾರೆ. ಅಲ್ಲದೆ ಜೋಕುಮಾರಸ್ವಾಮಿ ಬಾಯಿಗೆ ಬೆಣ್ಣೆ ಸವರಲಾಗುತ್ತದೆ. ಈ ರೀತಿ ಬೆಣ್ಣೆ ಸವರಿದರೆ ಮನೆಯಲ್ಲಿ ಹಸುಗಳು ಹಾಲು ಹೆಚ್ಚು ನೀಡುತ್ತವೆ ಎಂಬುದು ಜನರ ನಂಬಿಕೆಯಾಗಿದೆ.
ಜೋಕುಮಾರ ಎಂದರೆ ಶಿವ ಪುತ್ರ ಕುಮಾರಸ್ವಾಮಿ. ನಾಡ ಜನಪದರು ತಮ್ಮ ಪ್ರೀತಿಯ ದೈವವಾದ್ದರಿಂದ ಆತನನ್ನು ಮುದ್ದಿನ ಕುಮಾರಸ್ವಾಮಿ ಎಂದು ಬಣ್ಣಿಸಲಾಗುತ್ತದೆ. ‘ ಜೋಕುಮಾರ’ ಎಂದು ಕರೆಯಲಾಗುತ್ತದೆ. ಪಾರ್ವತಿಪುತ್ರ ಗಣಪತಿಯು ಭೂಲೋಕಕ್ಕೆ ಬಂದು ಹೋದ ಬಳಿಕ ಕೈಲಾಸದಿಂದ ಧರೆಗೆ ಬರುತ್ತಾನೆ ಶಿವಪುತ್ರ ಕುಮಾರಸ್ವಾಮಿ ಅಥವಾ ಷಣ್ಮುಖ. ಲೋಕಪ್ರಭುವಾದ ಪರಮೇಶ್ವರ ಶಿವನ ಮೊದಲ ಮಗ ಗಣಪತಿಯು ಪ್ರಭುತ್ವದ ಪ್ರತೀಕವಾದರೆ ಕಿರಿಯ ಮಗ ಕುಮಾರಸ್ವಾಮಿಯು ತನ್ನ ಲೋಕಾನುಗ್ರಹ ಬುದ್ಧಿಯಿಂದ ಜನಪದರ ದೈವವಾದನು.

ಗಣಪತಿಯು ಶಿಷ್ಟದೇವತೆಯಾದರೆ ಷಣ್ಮುಖನು ಜನಪದರ ದೈವವಾದನು. ತಮ್ಮ ಕಷ್ಟಕ್ಕೆ ಕರಗಿ ಶಿವಕಾರುಣ್ಯವನ್ನು ಲೋಕಕ್ಕೆ ಉಣಬಡಿಸಿದ ಕುಮಾರಸ್ವಾಮಿಯನ್ನು ಜನಪದರು ಪ್ರೀತಿಯಿಂದ ‘ ಜೋಕುಮಾರ’ ಎಂದು ಕರೆದು, ಗೌರವಿಸುತ್ತಾರೆ.

ಗಣೇಶ ಸವಿಸವಿಯಾದ ಭೋಜನ ಸವಿದು ಹೋದರೆ, ಜೋಕಮಾರಸ್ವಾಮಿ ಮನೆ ಮನೆಗೆ ಸುತ್ತಿ ಜನರು ಪಡುವ ಕಷ್ಟಗಳನ್ನು ನೋಡಿ ಅವುಗಳನ್ನು ಶಿವನಿಗೆ ತಿಳುಸುತ್ತಾನೆ. ಜೋಕುಮಾರ ಸ್ವಾಮಿ ಹೋದ ನಂತರ ಮಳೆಯಾಗುತ್ತದೆ ಎಂಬುದು ಜನರ ನಂಬಿಕೆ.
7 ದಿನಗಳ ಕಾಲ ಜೋಕುಮಾರನನ್ನು ಹೊತ್ತು ಸಾಗುವ ಮಹಿಳೆಯರು ನಂತರ ತಲೆಗೆ ನೀರು ಹಾಕಿಕೊಂಡು ಸ್ನಾನ ಮಾಡುತ್ತಾರೆ. ಆ ಮೇಲೆ ಮೂರು ದಿನಗಳ ಕಾಲ ಊರಿನ ಯಾವ ಮಡಿವಾಳರೂ ಬಟ್ಟೆಗಳನ್ನು ಒಗೆಯುವಂತಿಲ್ಲ. ಜೋಕುಮಾರನನ್ನು ಬಿಸಾಕಿದ ಸ್ಥಳದಲ್ಲಿ ಕಲ್ಲಿಟ್ಟು ಪೂಜಿಸಿ ಎಡೆ ತೋರಿಸಿ “ದಿನ” ಮಾಡಿ ಮುಗಿಸಿ ತಮ್ಮ ಕಾಯಕ ಪ್ರಾರಂಭಿಸುತ್ತಾರೆ.


ಪ್ರತೀ ವರ್ಷ ನಾವು ಜೋಕುಮಾರಸ್ವಾಮಿ ಹಬ್ಬವನ್ನು ಆಚರಿಸುತ್ತೇವೆ. ಗ್ರಾಮದ ಹೊರಗಿರುವ ಕೆರೆಗಳಿಂದ ಮಣ್ಣನ್ನು ತರುವ ಮಹಿಳೆಯರು ನಂತರ ಅದರಿಂದ ಜೋಕುಮಾರಸ್ವಾಮಿ ಮೂರ್ತಿಯನ್ನು ಸಿದ್ಧಪಡಿಸುತ್ತಾನೆ. ಸ್ನಾನ ಮಾಡಿ ಮೂರ್ತಿಯನ್ನು ಬುಟ್ಟಿಯಲ್ಲಿಟ್ಟುಕೊಂಡು 7 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಧಾನ್ಯಗಳನ್ನು ಸಂಗ್ರಹಿಸುತ್ತಾರೆಂದು ಆಚರಣೆ ಕುರಿತು ಜೋಕುಮಾರಸ್ವಾಮಿಯನ್ನ ಒತ್ತು ತಂದ ಮಹಿಳೆಯರು ಮಾಹಿತಿ ನೀಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page