ಚಿತ್ರದುರ್ಗದ ಅಸ್ಥಿ ಪಂಜರ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಅಸ್ಥಿ ಪಂಜರಗಳಿದ್ದ ಸ್ಥಳದಲ್ಲಿ ಡೆತ್​ ನೋಟ್​ ಪತ್ತೆ.

by | 29/12/23 | ಕ್ರೈಂ


ಚಿತ್ರದುರ್ಗ : ಚಿತ್ರದುರ್ಗದ ಅಸ್ಥಿ ಪಂಜರ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​ ಸಿಕ್ಕಿದೆ. ಅಸ್ಥಿ ಪಂಜರಗಳಿದ್ದ ಸ್ಥಳದಲ್ಲಿ ಡೆತ್​ ನೋಟ್​ ಪತ್ತೆಯಾಗಿದ್ದು, ಚಿತ್ರದುರ್ಗ ಪೊಲೀಸರು ಡೆತ್​​ ನೋಟ್​ನ್ನು​ ವಶಕ್ಕೆ ಪಡೆದಿದ್ದಾರೆ. ದೊಡ್ಡ ಸಿದ್ದವ್ವನಹಳ್ಳಿ ಜಗನ್ನಾಥರೆಡ್ಡಿ ಮನೆಯಲ್ಲಿ ಡೆತ್​ನೋಟ್​ ಸಿಕ್ಕಿದ್ದು, ಐವರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಡೆತ್​ ನೋಟ್​ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ರಾಬರಿ ಕೇಸ್ ಇತ್ತಂತೆ, ನರೇಂದ್ರರೆಡ್ಡಿ 2013ರಲ್ಲಿ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದರು. 2013ರಲ್ಲಿ ಬಿಡದಿ ಬಳಿ ವಾಹನ ತಡೆದು ದರೋಡೆ ಮಾಡಿದ್ದ ಆರೋಪವಿದ್ದು, ಗೆಳೆಯರ ಜತೆ ತೆರಳಿ ದರೋಡೆ ಕೇಸಲ್ಲಿ ಭಾಗಿಯಾಗಿದ್ದ ಆರೋಪ ವ್ಯಕ್ತವಾಗಿದೆ. ದರೋಡೆ ಕೇಸಲ್ಲಿ ನರೇಂದ್ರರೆಡ್ಡಿ ಕೆಲದಿನ ಜೈಲು ಪಾಲಾಗಿದ್ದ, ನರೇಂದ್ರರೆಡ್ಡಿ ವಿರುದ್ಧದ ಕೇಸ್​ನಿಂದ ಮನನೊಂದು ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ.

2019ರಲ್ಲಿ ಮನನೊಂದು ಇಡೀ ಫ್ಯಾಮಿಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಬಂಧಿಕ ತಿಮ್ಮಾರೆಡ್ಡಿ ಮೃತ ಐವರ ಗುರುತು ಪತ್ತೆ ಮಾಡಿದ್ದಾರೆ. ಜಗನ್ನಾಥರೆಡ್ಡಿ ನಿವೃತ್ತ ಇಇ, ಪತ್ನಿ ಪ್ರೇಮಾ, ಹಿರಿಯ ಮಗಳು ತ್ರಿವೇಣಿ, ಮೂರನೇ ಮಗ ಕೃ್ಷ್ಣಾ ರೆಡ್ಡಿ, ನಾಲ್ಕನೇ ಮಗ ನರೇಂದ್ರ ರೆಡ್ಡಿ ಅನ್ನೋ ಗುರುತು ಪತ್ತೆಯಾಗಿದೆ. ಹಿರಿಯ ಪುತ್ರ ಮಂಜುನಾಥ್​ ರೆಡ್ಡಿ ಡಾಕ್ಟರ್​​​ ಆಗಿದ್ದರು, 10 ವರ್ಷದ ಹಿಂದೆಯೇ ಹಿರಿಯ ಮಗನ ಸಾವು ಸಂಭವಿಸಿತ್ತು. ಇಡೀ ಜಗನ್ನಾಥರೆಡ್ಡಿ ಫ್ಯಾಮಿಲಿ ಕಥೆಯೇ ನಿಗೂಢವಾಗಿದೆ.

ಐದಾರು ವರ್ಷದ ತನಕ ಸಾವು ಯಾಕೆ ಹೊರ ಬರಲೇ ಇಲ್ಲ, ಈ ಹಿಂದೆ ಇವರ ಜಮೀನು ವ್ಯಾಜ್ಯ ಕೋರ್ಟ್​ನಲ್ಲಿ ಇತ್ತು. ಕೋರ್ಟ್​ನಲ್ಲಿ ಇವರಂತೆ ತೀರ್ಪು ಕೂಡಾ ಬಂದಿತ್ತಂತೆ, ಬ್ಯಾಂಕ್​​ ಲಾಕರ್​​ನಲ್ಲಿ ಇವರ ಚಿನ್ನಾಭರಣಗಳೂ ಇದ್ದವು. ವಕೀಲರು, ಬ್ಯಾಂಕ್​​​ ಸಿಬ್ಬಂದಿ ಈ ಫ್ಯಾಮಿಲಿಗೆ ಹುಡುಕಾಡಿದ್ದಾರೆ ಎಂದು ಈ ಪ್ರಕರಣದ ಬಗ್ಗೆ ಸಂಬಂಧಿ ತಿಮ್ಮಾರೆಡ್ಡಿ ಮಾಹಿತಿ ನೀಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page