ಜಿಲ್ಲಾ ಸೂಪರ್ ಡೆಂಟ್ ಆಫ್ ಪೋಲೀಸ್ ಅಧಿಕಾರಿ‌ಧರ್ಮೇಂದ್ರಕುಮಾರ್ ಮೀನಾರವರಿಗೆ ರೈತ ಮುಖಂಡ ಕಸವನಹಳ್ಳಿ‌ರಮೇಶ್ ಅಭಿನಂದನೆ.

by | 11/11/23 | ಮಾತೆಂದರೆ ಇದು


ಚಿತ್ರದುರ್ಗ.
ಚಿತ್ರದುರ್ಗ ಜಿಲ್ಲೆ, ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಪ್ರಾರಂಭ ಮಾಡಿ ಅರಣ್ಯ ಸಂಪತ್ತುಗಳ ಲೂಟಿ ಮಾಡುತ್ತಿದ್ದ ಕಳ್ಳರನ್ನು ಚಿತ್ರದುರ್ಗ ಜಿಲ್ಲೆ ಸೂಪರ್ ಡೆಂಟ್ ಆಫ್ ಪೋಲೀಸ್ ಧರ್ಮೇಂದ್ರ ಕುಮಾರ್ ಮೀನಾ ರವರು ಬಂಧಿಸಿದ್ದು, ಇವರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಪ್ರಶಂಸಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಅತಿಹೆಚ್ಚಿನ ಸಂಖ್ಯೆಯ ಶ್ರೀಗಂಧ ಬೆಳೆಗಾರರಿದ್ದು, ತಮ್ಮ ತಮ್ಮ ಜಮೀನುಗಳಲ್ಲಿ ಕೃಷಿಕರು ಯಥೇಚ್ಛವಾಗಿ ಶ್ರೀಗಂಧ ಸಸಿಗಳನ್ನು ಬೆಳೆಸುತ್ತಿದ್ದು, ಅದರ ರಕ್ಷಣೆಯೇ ರೈತರಿಗೆ ಒಂದು ದೊಡ್ಡ ಸವಾಲ್ ಆಗಿದೆ. ಪ್ರತಿವಾರ ಅಥವಾ ಪ್ರತಿ 15 ದಿನಕ್ಕೊಮ್ಮೆ ಚಿತ್ರದುರ್ಗ ಜಿಲ್ಲೆಯಲ್ಲಿ ಶ್ರೀಗಂಧ ಮರಗಳನ್ನು ಕಡಿಯುವ ಕಳ್ಳರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ.


ಅಲ್ಲದೆ ಸರ್ಕಾರಿ ಅರಣ್ಯಗಳಲ್ಲಿ ಸಹ ಕಳ್ಳತನವಾಗುತ್ತಿದೆ ಇದರಲ್ಲಿ ದೂರು ಕೊಡುವವರ ಸಂಖ್ಯೆ ತುಂಬಾ ಕಡಿಮೆ. ತಾವುಗಳು ಈಗ ಹಿರಿಯೂರು ನಗರದ ಬಬ್ಬೂರು ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಹಾಗೂ ಅಪಾರ ಪ್ರಮಾಣದ ಶ್ರೀಗಂಧದ ತುಂಡುಗಳು ರಕ್ತ ಚಂದನದ ತುಂಡುಗಳು ಆನೆದಂತ ಚಿಪ್ಪುಗಳು ವಶಪಡಿಸಿಕೊಂಡಿರುವುದು ಈ ನಿಟ್ಟಿನಲ್ಲಿ ಪೋಲೀಸ್ ಇಲಾಖೆ ಒಂದು ಮಹತ್ವದ ಹೆಜ್ಜೆ ಇಟ್ಟಂತಾಗಿದೆ ಎಂದರಲ್ಲದೆ,
ತಾವುಗಳು ಶ್ರೀಗಂಧ ಬೆಳೆಯುವ ರೈತರನ್ನು ಹಾಗೂ ಸರ್ಕಾರಿ ಅರಣ್ಯದಲ್ಲಿರುವ ಶ್ರೀಗಂಧ ಹಾಗೂ ಇನ್ನಿತರೆ ಅಮೂಲ್ಯವಾದ ವನಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಕಳ್ಳರನ್ನು ಬಂಧಿಸಿರುವುದು ರೈತರಲ್ಲಿ ಒಂದು ರೀತಿಯ ನಿರಾಳಬಾವ ಮೂಡಿಸಿದೆ. ಜಿಲ್ಲೆಯ ಆರು ತಾಲೂಕುಗಳಲ್ಲಿ ಲಕ್ಷಾಂತರ ಸಂಖ್ಯೆಯ ಶ್ರೀಗಂಧವನ್ನು ರೈತರು ತಮ್ಮ ಮಕ್ಕಳಿಗಿಂತ ಹೆಚ್ಚಿನ ಪ್ರಾಧಾನ್ಯತೆಯನ್ನು ಕೊಟ್ಟು ಬೆಳೆಸುತ್ತಿದ್ದಾರೆ ಇದರಿಂದ ರಾಜ್ಯ ರಾಷ್ಟ್ರಕ್ಕೆ ಒಳ್ಳೆಯ ಹೆಸರು ಮತ್ತು ಆದಾಯ ತಂದುಕೊಡುತ್ತದೆ ಎಂದರು.
ಕರ್ನಾಟಕ ಶ್ರೀಗಂಧದ ಬೀಡು ಎಂದು ಮತ್ತೊಮ್ಮೆ ಹೆಸರಾಗಬೇಕೆಂದು ಬಯಸುತ್ತಾ ನೀವು ಶ್ರೀಗಂಧ ಕಳ್ಳರನ್ನು ಮೂಲವತ್ಪಾಟನೆ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತಾ, ಚಿತ್ರದುರ್ಗ ಜಿಲ್ಲೆಯ ಶ್ರೀಗಂಧ ಬೆಳೆಗಾರರ ಸಂಘ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಹಾಗೂ ವನಕೃಷಿ ಬೆಳಗಾರರ ಸಂಘದಿಂದ ಜಿಲ್ಲಾ ಶ್ರೀಗಂಧ ಬೆಳೆಗಾರರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ರೈತರ ಪರವಾಗಿ ತಮಗೆ ಅಭಿನಂದನೆಗಳು ಎಂದರಲ್ಲದೆ,
ನಮ್ಮ ರಾಜ್ಯ ಶ್ರೀಗಂಧ ಬೆಳೆಗಾರರ ಸಂಘದ ಅಧ್ಯಕ್ಷರಾದ ಶ್ರೀಯುತ ಅಮರನಾರಾಯಣ್ ಅವರು ಮತ್ತು ಪದಾಧಿಕಾರಿಗಳು ಅವಿರತವಾಗಿ ಶ್ರೀಗಂಧ ಬೆಳೆಯ ರಕ್ಷಣೆ ಬಗ್ಗೆ ಹೋರಾಡುತ್ತಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಯಾದ ಶ್ರೀಯುತ ಕಾಂತರಾಜ್ ಅವರಿಗೂ ಅವರ ಸಿಬ್ಬಂದಿ ವರ್ಗದವರಿಗೂ ತಾಲ್ಲೂಕಿನ ರೈತರ ಪರವಾಗಿ ಧನ್ಯವಾದಗಳು ಎಂದರಲ್ಲದೆ, ಇದನ್ನು ಇಲ್ಲಿಗೆ ಬಿಡದೆ ಶ್ರೀಗಂಧ ಕಡಿಯುವ ಕಳ್ಳರು ಅದನ್ನು ಖರೀದಿ ಮಾಡುವ ಕದೀಮರು ಹಾಗೂ ಕಾರ್ಖಾನೆಯವರನ್ನು ಎಡೆಮುರಿ ಕಟ್ಟಬೇಕು ಎಂಬುದಾಗಿ ಈ ಮೂಲಕ ಒತ್ತಾಯಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page