ಜುಲೈ 27 ಕ್ಕೆ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಏಕೀಕರಣ ಪ್ರವಾಸ

by | 22/07/24 | ಸುದ್ದಿ

ಹಿರಿಯೂರಯ ಜು.22 ದಕ್ಷಿಣ ಭಾರತದಲ್ಲಿ ಕುಂಚಿಟಿಗರ ಏಕೀಕರಣ ಮತ್ತು ಧೃವೀಕರಣ ಹೋರಾಟದ ಮುಂದುವರಿದ ಭಾಗವಾಗಿ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಸಂಗಮ ಭಾವೈಕ್ಯತಾ ಪ್ರವಾಸ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕುಂಚಿಟಿಗರ ಒಕ್ಕೂಟದ ಅಧ್ಯಕ್ಷ ಕಸವನಹಳ್ಳಿರಮೇಶ್ ರಮೇಶ್ ತಿಳಿಸಿದರು.
ಜುಲೈ 27 ನೇ ಶನಿವಾರ ಬೆಳಗಿನ ಜಾವ 4-00 ಗಂಟೆಗೆ ಸರಿಯಾಗಿ ಹಿರಿಯೂರಿನ ಪ್ರವಾಸಿ ಮಂದಿರದಿಂದ ಪ್ರವಾಸಕ್ಕೆ ಚಾಲನೆ ನೀಡಿ,ಶಾಂತಿಸಾಗರ,ನೀಲೋಗಲ್,ಗುಡ್ಡದಕೋಮಾರನಹಳ್ಳಿ,ಗೊಲ್ಲರಹಳ್ಳಿ, ಮಾಸಡಿ,ನರಸಗೊಂಡನಹಳ್ಳಿ, ಸುಂಕದಕಟ್ಟೆ,ಕುಂಕುವ,ಸೂರಗೊಂಡನಕೊಪ್ಪ,ಶಿಕಾರಿಪುರ ತಲುಪಿ ಹಾಲ್ಟ್ ಮಾಡಲಾಗುವುದು. ಜುಲೈ 28 ರಂದು ಬೆಳಿಗ್ಗೆ 5-00 ಗಂಟೆಗೆ ಪ್ರಾರಂಭ ಮಾಡಿ ಕುಬಟೂರು, ಜಡೆ, ಶಿರಸಿ, ದಾಸನಕೊಪ್ಪ, ಲಕ್ಷ್ಮಿಪುರ,ರಂಗಾಪುರ,ಹಾನಗಲ್, ಅಕ್ಕಿಆಲೂರು, ಗ್ರಾಮದಲ್ಲಿ ಪ್ರವಾಸವನ್ನು ಮುಕ್ತಾಯ ಮಾಡಿ ಹಿರಿಯೂರಿಗೆ ವಾಪಾಸ್ ಬರುವುದು ಎಂದು ಹೇಳಿದರು.
ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ
ಎಸ್ ವಿ ರಂಗನಾಥ್ ಮಾತನಾಡಿ
ವಿಜಯನಗರ ಸಾಮ್ರಾಜ್ಯದ ಪತನದ ನಂತರ ತುಂಗಭದ್ರಾನದಿ ದಂಡೆಯಿಂದ ಕರ್ನಾಟಕ,ಆಂಧ್ರಪ್ರದೇಶ,ತಮಿಳುನಾಡು,
ಕೇರಳ,ಮಹಾರಾಷ್ಟ್ರ,ರಾಜ್ಯಗಳಿಗೆ ಸುರಕ್ಷತೆ ಬಯಸಿ ವಲಸೆ ಹೋದ ಕುಂಚಿಟಿಗರು ಪ್ರಾದೇಶಿಕ ಭಾಷೆಗಳ ವ್ಯತ್ಯಾಸ ಮತ್ತು ಸ್ಥಳೀಯ ಪ್ರಭಾವಕ್ಕೆ ಮಣಿದು ಕುಂಚವಕ್ಕಲ್, ಕಮಾಟಿ, ನಾಮಧಾರಿ, ಲಿಂಗಾಯಿತ ಕುಂಚಿಟಿಗ,ಕುಂಚಿಟಿಗಒಕ್ಕಲಿಗ,ಕುರುಚಿಯನ್,ಕುಂಜಿಡಿಗರ್, ಗೌಂಡರ್,ರೆಡ್ಡಿಕುಂಚಿಟಿಗ, ಇತ್ಯಾದಿ ಹೆಸರಿನಲ್ಲಿ ಹರಿದು ಹಂಚಿಹೋಗಿದ್ದು,ಕುಲಬೆಡಗು,ಮತ್ತು ಮನೆ ದೇವರುಗಳ ಆಧಾರದಲ್ಲಿ ಇವರೆಲ್ಲ ಕುಂಚಿಟಗರೆ ಆಗಿದ್ದಾರೆ,ಆದ್ದರಿಂದ ಕುಲ ಬೆಡಗಿನ ಆಧಾರದಲ್ಲಿ ಕುಂಚಿಟಿಗರನ್ನು ಒಂದುಗೂಡಿಸಲು “ಮರಳಿ ಬಾ ಕುಂಚಿಟಿಗ ” ಗಡಿನಾಡು ಕುಂಚಿಟಿಗರ ಮನೆದೇವರು ದರ್ಶನ,ಇಷ್ಟಾರ್ಥ ಸಿದ್ಧಿಗಾಗಿ ಕುಂಚಿಟಿಗರ ಅಷ್ಟದೈವ ಯಾತ್ರೆ,ತಮಿಳುನಾಡು,ಕೇರಳ ರಾಜ್ಯಗಳ ಕುಂಚಿಟಿಗರ ಭಾವೈಕ್ಯತಾ ಪ್ರವಾಸ ಮಾಡಿದ್ದೇವೆ,ಅದೇ ರೀತಿ ಈ ವರ್ಷದಲ್ಲಿ ಬಯಲುಸೀಮೆ ಮಲೆನಾಡು ಕರಾವಳಿ ಕುಂಚಿಟಿಗರ ಭಾವೈಕ್ಯತಾ ಪ್ರವಾಸ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಹಿರಿಯೂರು ತಾಲ್ಲೋಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹುಲಿರಂಗನಾಥ್ ಮಾತನಾಡಿ ಚನ್ನಗಿರಿ,ಹೊನ್ನಾಳಿ,ನ್ಯಾಮತಿ, ಶಿಕಾರಿಪುರ,ಸೊರಬ,ಶಿರಸಿ,ಹಾನಗಲ್ ಭಾಗದಲ್ಲಿರುವ ಕುಂಚಿಟಗ ಕುಲ ಬಾಂಧವರು ಪ್ರವಾಸ ಪಟ್ಟಿಯಲ್ಲಿ ಬರುವ ಗ್ರಾಮಗಳಲ್ಲಿ ಅಕ್ಕ ಪಕ್ಕದ ಗ್ರಾಮದವರನ್ನು ಸೇರಿಸಿ ಹೃದಯಸ್ಪರ್ಶಿ ಸ್ವಾಗತ ಕೋರುವ ಮೂಲಕ ನಿಮ್ಮ ಗ್ರಾಮಕ್ಕೆ ಬರಮಾಡಿಕೊಂಡು ಉಭಯ ಕುಶಲೋಪರಿಯೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಸವನಹಳ್ಳಿರಮೇಶ್,ಎಸ್ ವಿ ರಂಗನಾಥ್, ಹುಲಿರಂಗನಾಥ್,ವಿ ಕುಬೇರಪ್ಪ,ಶಶಿಕಲಾ ಉಪಸ್ಥಿತರಿದ್ಧರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page