ನಾನು ಬೆಂಗಳೂರಿಗ ನೊಂದವರ ಕಣ್ಣೀರು ಒರೆಸುವುದು ನನ್ನ ಗುರಿ : ಪೊಲೀಸ್ ಕಮೀಷನರ್ ದಯಾನಂದ

by | 31/05/23 | ಕರ್ನಾಟಕ


ಬೆಂಗಳೂರು : ಅಮಾಯಕರು, ನೊಂದವರ ಕಣ್ಣೀರು ಒರೆಸಿ ನಗರದ ಜನಸಾಮಾನ್ಯರಿಗೆ ರಕ್ಷಣೆ ನೀಡಿ ನೆಮ್ಮದಿಯಿಂದ ಬದುಕುವಂತೆ ಮಾಡುವುದು ನನ್ನ ಗುರಿಯಾಗಿದೆ ಎಂದು ನಗರದ ನೂತನ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ.

ಅಂತರಿಕ ಭದ್ರತಾ ದಳದ ಡಿಜಿಪಿಯಾಗಿ ವರ್ಗಾವಣೆ ಯಾಗಿರುವ ಪ್ರತಾಪ್ ರೆಡ್ಡಿ ಅವರಿಂದ ಬ್ಯಾಟನ್ ಸ್ವೀಕರಿಸಿ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸ್ ಠಾಣೆಗಳನ್ನು ಜನಸ್ನೇಹಿಗೊಳಿಸಿ‌ ಅಲ್ಲಿಯೇ ಜನ ಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದರು.
ಜನ ಸಾಮಾನ್ಯರ ಸಮಸ್ಯೆಗಳಿಗೆ ಪೊಲೀಸ್ ಠಾಣೆಗಳಲ್ಲಿ ಪರಿಹಾರ ದೊರಕದಿದ್ದರೆ ಹಿರಿಯ ಅಧಿಕಾರಿಗಳು ಜನ ಪ್ರತಿನಿಧಿಗಳ ಬಳಿಗೆ ಹೋಗುತ್ತಾರೆ ಅದನ್ನು ತಪ್ಪಿಸುವುದು ನನ್ನ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.

ಶ್ರೀಮಂತರು, ಬಲಾಡ್ಯರು, ರಾಜಕೀಯ ಬಲ ಹೊಂದಿರುವವರಿಗೆ ಮಾತ್ರ ಪೊಲೀಸ್ ಠಾಣೆಗಳಲ್ಲಿ ನೆರವು ಸಿಗಲಿದೆ ಎನ್ನುವ ಮನೋಭಾವವನ್ನು ತಪ್ಪಿಸಿ ಎಲ್ಲರಿಗೂ ನ್ಯಾಯ ಸಮಸ್ಯೆಗಳಿಗೆ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರೌಡಿಗಳ ನಿಗ್ರಹ:

ನಗರದಲ್ಲಿ ರೌಡಿ ಚಟುವಟಿಕೆಗಳನ್ನು ಮಟ್ಟಹಾಕಲು ಹಿಂದಿನ ಪೊಲೀಸ್ ಆಯುಕ್ತರುಗಳು ಶ್ರಮಿಸಿ ಕೈಗೊಂಡಿರುವ ಹಲವು ಕ್ರಮಗಳನ್ನು ಮುಂದುವರೆಸಿ ನಗರವನ್ನು ರೌಡಿ ಚಟುವಟಿಕೆಗಳಿಂದ ಮುಕ್ತಗೊಳಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಎಷ್ಟು ಪ್ರಯೋಜನಗಳಿವೆಯೋ ಅಷ್ಟೇ ದುಷ್ಪರಿಣಾಮಗಳಿವೆ ಅದರಿಂದಾಗಿ ಒಳ್ಳೆಯದನ್ನು ಬಳಸಿ ನಕಲಿ ಪ್ರಚೋದಕಾರಿ ಪೋಸ್ಟ್ ಕಾಮೆಂಟ್ ಗಳ ಮೇಲೆ ನಿಗಾ ವಹಿಸಲಾಗುವುದು ಎಂದರು.

ಸರ್ಕಾರಕ್ಕೆ ಕೃತಜ್ಞತೆ:

ನಗರದಲ್ಲಿ ಕಮಿಷನರ್ ಆಗಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ , ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ತೆರೆಯ ಹಿಂದೆ ಮಾತನಾಡುತ್ತಿದೆ. ಈಗ ತೆರೆಯ ಮುಂದೆ ಮಾತನಾಡುತ್ತೀದ್ದೇನೆ. ನಾನು ಬೆಂಗಳೂರಿನಲ್ಲಿ ಹುಟ್ಟಿ ಬೆಳೆದವರ ನಗರದಲ್ಲಿ ಎಲ್ಲಾ ಆಗು ಹೋಗು ಪೊಲೀಸ್ ವ್ಯವಸ್ಥೆಯನ್ನು ಬಲ್ಲೆ ಬಹಳಷ್ಟು ಸವಾಲುಗಳಿವೆ. ಅದನ್ನು ಎದರಿಸಲು ಎಲ್ಲಾ ಸಿಬ್ಬಂದಿಯನ್ನು ಗಮನಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಬೆಂಗಳೂರು ಬದಲಾವಣೆ ಬಗ್ಗೆ ಹೆಚ್ಚಿನ ಹೊತ್ತು ನೀಡುತ್ತೇನೆ ಎಂದರು.

ವಿಶ್ವಾಸ ನಂಬಿಕೆ:

ಭಾಸ್ಕರ್ ರಾವ್ ಕಮಲ್ ಪಂತ್ ,ಪ್ರತಾಪ್ ರೆಡ್ಡಿ ಸೇರಿ ನಗರದಲ್ಲಿ ಹಿರಿಯ ಅಧಿಕಾರಿಗಳು ಬಂದು ಹೋಗಿದ್ದಾರೆ. ನಗರದ ನಾಗರಿಕರು ಇಲಾಖೆ ಮೇಲಿಟ್ಟಿರುವ ಅಪಾರ ವಿಶ್ವಾಸ ನಂಬಿಕೆಯನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ನಗರದ ಗುಪ್ತಚರದಳ ಬಲವರ್ಧನೆ ಮಾಡಬೇಕು. ಗುಪ್ತದಳ ಪೊಲೀಸ್ ಇಲಾಖೆಯ ಬೆನ್ನೆಲುಬು. ಅದನ್ನು ಹೆಚ್ಚು ಬಲವರ್ಧನೆ ಮಾಡಬೇಕು. ಇವತ್ತಿನ ಪೊಲೀಸ್ ವ್ಯವಸ್ಥೆಗೆ ಅನುಗುಣವಾಗಿ ಇರಬೇಕು ಗುಪ್ತದಳದಿಂದ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ನಿಗಾ ಇಡಬೇಕು. ಪ್ರಿಡಿಕ್ಟಿಂಗ್ ಪೊಲೀಸಿಂಗ್ ಬಗ್ಗೆ ರಿಸರ್ಚ್ ನಡೆಯುತ್ತಿದೆ. ಅದನ್ನು ನಗರ ಪೊಲೀಸಿಂಗ್ ಗೆ ಅಳವಡಿಸಿಕೊಳ್ಳಲಾಗುವುದು ಎಂದರು.

ಪ್ರಕೃತಿ ನಿಯಮ:

ಮಾತಾಡುವಾಗ ಮೊದಲಿಗೆ ನಾನು ಬೆಂಗಳೂರಿಗ ಎಂದು ಹೇಳುತ್ತೇನೆ. ಬೆಂಗಳೂರು ನಗರ ತಾನು ಹುಟ್ಟಿ ಬೆಳೆದ ಸ್ಥಳ. ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಜೊತೆಗೊಂಡಂತೆ‌ ಕೆಲಸ ಮಾಡುತ್ತೇವೆ. ಚಿಕ್ಕಂದಿನಿಂದ ನಗರ ಹಾಗೂ ಪೊಲೀಸ್ ಇಲಾಖೆಯನ್ನು ನೋಡಿದ್ದೇನೆ. ಬದಲಾವಣೆ ಪ್ರಕೃತಿ ನಿಯಮ. ಬದಲಾವಣೆ ಜೊತೆಗೆ ಐತಿಹಾಸಿಕ ವ್ಯವಸ್ಥೆಗಳನ್ನು ನೋಡುತ್ತೇವೆ. ಸಾಕಷ್ಟು ಹಿರಿಯ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಮಾಡಿರುವಂತಹ ವ್ಯವಸ್ಥೆ ಹಾಗೂ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಬದಲಾವಣೆ ಅವಶ್ಯಕತೆ ಇರುವ ಕಡೆ ಬದಲಾವಣೆ ಮಾಡಬೇಕು. ಟೆಕ್ನಾಲಜಿ ಹಾಗು ಸೈಬರ್ ಬಗ್ಗೆ ಕೆಲಸ ಆಗಬೇಕು ಎಂದಿದ್ದಾರೆ.

ಟೋಯಿಂಗ್ ಪರಿಶೀಲನೆ:

ನಗರ ಪೊಲೀಸ್ ಆಂದರೆ ಅದು ವಿಜಿಬಲ್ ಪೊಲೀಸಿಂಗ್ ಅದು ಆಗಬೇಕು ಜನರಿಗೆ ಹತ್ತಿರವಾಗಬೇಕು. ಹಿಂದೆ ತಾನು ಟ್ರಾಫಿಕ್ ಅಡಿಶನಲ್ ಕಮಿಷನರ್ ಆಗಿ ಕೆಲಸ ಮಾಡಿದ್ದೆ. ಟ್ರಾಫಿಕ್ ಮ್ಯಾನೆಜ್‌ಮೆಂಟ್‌ ಇರುವುದು ಒಂದು ಇಲಾಖೆ ಯಿಂದ ಆಗುವ ಕೆಲಸ ಅಲ್ಲ. ಬಿಬಿಎಂಪಿಯಿಂದ ಪರಿಹಾರಕ್ಕೆ ಇತರ ಇಲಾಖೆಯ ಸಹಯೋಗ ಸಹಕಾರ ಬೇಕು. ಅರ್ಬನ್ ಡೆವಲಪ್ಮೆಂಟ್ ಎಲ್ಲವರನ್ನು ಸೇರಿಕೊಂಡು ಸುಧಾರಣೆ ಹಾಗೂ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಹಾಗು ಸಿಬ್ಬಂದಿ ಗಳ ಸಲಹೆ ಮೇರೆ ಉತ್ತಮವಾಗಿ ಉಪಯೋಗವಾಗುವ ಕೆಲಸ ಮಾಡಬೇಕು ಎಂದು ಹೇಳಿದರು.

ನಗರದ ಸಂಚಾರ ಸಮಸ್ಯೆಯನ್ನು ಪೊಲೀಸ್ ಇಲಾಖೆಯನ್ನು ಪರಿಹರಿಸುವುದು ಆಸಾಧ್ಯ ಅದರಿಂದಾಗಿ ಬಿಬಿಎಂಪಿ, ಸಾರಿಗೆ,ಇಂಧನ ಇನ್ನಿತರ ಇಲಾಖೆಯ ಸಹಯೋಗದೊಂದಿಗೆ ಸಂಚಾರ ಉತ್ತಮಗೊಳಿಸಲು ಶ್ರಮಿಸಲಾಗುವುದು ಟೋಯಿಂಗ್ ಜೊತೆಗೆ ಪರ್ಯಾಯ ವ್ಯವಸ್ಥೆಯನ್ನು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಹೊಸ ರೂಪ:

1994ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ದಯಾನಂದ ಅವರು ಪೊಲೀಸ್ ಇಲಾಖೆಯ ಹಲವು ಉನ್ನತ ಹುದ್ದೆಗಳನ್ನ ನಿರ್ವಹಿಸಿ ದಕ್ಷ ಪ್ರಮಾಣಿಕ ಅಧಿಕಾರಿ ಎನ್ನುವ ಖ್ಯಾತಿ ಹೊಂದಿದ್ದಾರೆ. ನಗರದಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, ಸಂಚಾರ ವಿಭಾಗದ ಆಯುಕ್ತರಾಗಿ, ಸಾರಿಗೆ ಆಯುಕ್ತರಾಗಿ, ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ ದಯಾನಂದ ಅವರು ಗುಪ್ತಚರದಳಕ್ಕೆ ಹೊಸರೂಪ ಕೊಟ್ಟಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page