ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರಾ ಪೂರ್ವ ಸಿದ್ಧತಾ ಸಭೆ ಜಾತ್ರೆಗೆ ಅನುಕೂಲವಾಗುವಂತೆ ಶಾಶ್ವತ ಯೋಜನೆಗಳ ಅನುಷ್ಠಾನ ಸಂಕಲ್ಪ -ಸಚಿವ ಬಿ. ಶ್ರೀರ

by | 06/02/23 | ವೈವಿಧ್ಯ

ಚಿತ್ರದುರ್ಗ ಫೆ.4:
ಮಧ್ಯ ಕರ್ನಾಟಕದ ಪ್ರಸಿದ್ಧ ಕ್ಷೇತ್ರ ನಾಯಕನಹಟ್ಟಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದೆ. ಪ್ರತಿ ವರ್ಷವು ಜಾತ್ರೆ ಆಯೋಜನೆಗೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಳ್ಳುವ ಬದಲಿಗೆ ಶಾಶ್ವತ ಯೋಜನೆಗಳನ್ನು ಅನುಷ್ಠಾನ ಮಾಡಲು ಸಂಕಲ್ಪ ಮಾಡಬೇಕು ಎಂದು ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಹೇಳಿದರು.
ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಶ್ರೀಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠದ ಸಮುದಾಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023ನೇ ಸಾಲಿನ ದೊಡ್ಡ ರಥೋತ್ಸವದ ಜಾತ್ರಾ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ನಾಯಕನಹಟ್ಟಿ ಶ್ರೀಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯ ಮೂಲಸೌಕರ್ಯಗಳ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದರು.
ಶ್ರೀಗುರುತಿಪ್ಪೇರುದ್ರಸ್ವಾಮಿ ಮಹೋತ್ಸವವು ಮಾರ್ಚ್ 03 ರಿಂದ 13 ರವರೆಗೆ ನಡೆಯಲಿದ್ದು, ದೊಡ್ಡ ರಥೋತ್ಸವವು ಮಾರ್ಚ್ 10 ರಂದು ನಿಗಧಿಯಾಗಿದೆ. ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮೂಲಸೌಲಭ್ಯಗಳ ಕೊರತೆ ಎದುರಾಗಬಾರದು. ಕುಡಿಯುವ ನೀರು, ರಸ್ತೆ, ಆರೋಗ್ಯ, ನೈರ್ಮಲ್ಯ ಸೇರಿದಂತೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆಯಿಂದ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತ್ರಾ ಮಹೋತ್ಸವಕ್ಕೆ 3 ರಿಂದ 4 ಲಕ್ಷ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ. ಕುಡಿಯುವ ನೀರು, ವಸತಿ, ಸಾರಿಗೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ನೀರಿನ ಅಗತ್ಯತೆಗಾಗಿ 40 ಟ್ಯಾಂಕರ್‍ಗಳನ್ನು ಒದಗಿಸಬೇಕು, ಕುಡಿಯುವ ನೀರು ಪೂರೈಸುವ ನೀರಿನ ಮೂಲಗಳ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದ ಜಿಲ್ಲಾಧಿಕಾರಿಗಳು, ಈ ಬಾರಿಯ ಜಾತ್ರೆಯನ್ನು ಎಲ್ಲರ ಸಹಕಾರ ಹಾಗೂ ಸಮನ್ವಯದಿಂದ ಅದ್ಧೂರಿಯಾಗಿ ವ್ಯವಸ್ಥಿತವಾಗಿ, ಸುಗಮವಾಗಿ ಜಾತ್ರೆ ನಡೆಸೋಣ, ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಚಿಕ್ಕಕೆರೆ ಜಾಲಿ ತೆರವಿಗೆ ಸಂಕಲ್ಪ: ಜಾತ್ರೆಗೆ ಆಗಮಿಸುವ ಭಕ್ತಾದಿಗಳ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 600 ಎಕರೆ ವಿಸ್ತೀರ್ಣದ ಚಿಕ್ಕಕೆರೆಯಲ್ಲಿ ಬೆಳೆದ ಗಿಡಗಂಟಿ, ಜಾಲಿ ತೆರವಿಗೆ ಸಚಿವ ಶ್ರೀರಾಮುಲು ಸಂಕಲ್ಪ ಮಾಡಿದರು. ಒಂದು ತಿಂಗಳಲ್ಲಿ ಜಾಲಿ ತೆಗೆಸಬೇಕು. ಸ್ವತಃ ಎರಡು ದಿನಗಳ ಕಾಲ ಜಾಲಿ ತೆಗೆಯುವ ಕೆಲಸದಲ್ಲಿ ಶ್ರಮವಹಿಸುತ್ತೇನೆ. 10 ರಿಂದ 15 ಜೆಸಿಬಿಗಳನ್ನು ನಾನೇ ನೀಡುತ್ತೇನೆ ಹಾಗೂ ಸ್ವಚ್ಛವಾದ ಕೆರೆಯಲ್ಲಿ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಎಂದು ಅವರು ಹೇಳಿದರು.
ಸಚಿವರ ಸಂಕಲ್ಪ ಮೆಚ್ಚಿದ ಗ್ರಾಮಸ್ಥ ರವಿಶಂಕರ್ ಇಂತಹ ಸತ್ಕಾರ್ಯಕ್ಕೆ ತಾವು ರೂ. 1 ಲಕ್ಷ ನೀಡುವುದಾಗಿ ಘೋಷಿಸಿದರು.
ಜಾತ್ರಾ ಮಹೋತ್ಸವಕ್ಕೆ 200 ವಿಶೇಷ ಬಸ್: ನಾಯಕನಹಟ್ಟಿ ಜಾತ್ರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ 200 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಚಿತ್ರದುರ್ಗ, ಚಳ್ಳಕರೆ, ಬಳ್ಳಾರಿ, ದಾವಣಗೆರೆ ನಗರಗಳಿಂದ ಬಸ್‍ಗಳು ಕಾರ್ಯಾಚರಣೆ ನಡೆಸಲಿವೆ. ಚಿತ್ರದುರ್ಗ 100, ದಾವಣಗೆರೆ 50, ಬಳ್ಳಾರಿಯಿಂದ 30 ಬಸ್‍ಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದರು. ಸರ್ಕಾರಿ ಬಸ್‍ಗಳ ಜೊತೆ ಖಾಸಗಿ ಬಸ್‍ಗಳ ಓಡಾಟಕ್ಕೂ ಅನುವು ಮಾಡಿಕೊಡಲಾವುದು ಎಂದು ಸಚಿವ ಶ್ರೀರಾಮುಲು ಹೇಳಿದರು.
ಮುಕ್ತಿ ಬಾವುಟ ಹರಾಜಿಗೆ ಕಠಿಣ ನಿಯಮ ರೂಪಿಸಿ: ಕಳೆದ ಬಾರಿ ಜಾತ್ರೆ ಸಂದರ್ಭದಲ್ಲಿ ಮುಕ್ತಿಬಾವುಟದ ಯಶಸ್ವಿ ಹರಾಜುದಾರರು ಇದುವರೆಗೂ ಪೂರ್ಣ ಮೊತ್ತ ಪಾವತಿಸಿಲ್ಲ. ಹೀಗಾಗಿ ರಥೋತ್ಸವ ಸಂದರ್ಭದಲ್ಲಿನ ಮುಕ್ತಿ ಬಾವುಟದ ಹರಾಜಿಗೆ ಸಂಬಂಧಪಟ್ಟಂತೆ ಕಠಿಣ ನಿಯಮಾವಳಿ ರೂಪಿಸಬೇಕು. ಯಶಸ್ವಿ ಹರಾಜು ದಾರರಿಂದ ಮುಂಗಡವಾಗಿ ಚೆಕ್ ತೆಗದುಕೊಳ್ಳಬೇಕು. ಹರಾಜು ಕೂಗಿ ಹಣ ಪಾವತಿಸದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥ ತಿಪ್ಪೇಶ್ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರು ಸಭೆ ನಡೆಸಿ ಅಭಿಪ್ರಾಯ ಪಡೆದು ಸೂಕ್ತ ನಿಯಮ ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ಈ ಭಾಗದಲ್ಲಿ ಕಳದ 5 ವರ್ಷಗಳ ಪಟ್ಟಣ ಸಂಕರ್ಪ ಕಲ್ಪಿಸುವ ರಸ್ತೆ ಹಾಗೂ ಸೇತುವೆ ಕಾಮಗಾರಿ ನಡೆಯುತ್ತಿದೆ. ಇದರಿಂದ ಪಟ್ಟಣಕ್ಕೆ ಆಗಮಿಸುವವರಿಗೆ ತೊಂದರೆಯಾಗುತ್ತಿದೆ. ಇಲಾಖೆಯವರು ಪ್ರತಿ ವರ್ಷವೂ ಸಬೂಬು ಹೇಳುತ್ತಾರೆ. ನಮಗೆ ಸಾಕಾಗಿದೆ. ಇಲಾಖೆ ವತಿಯಿಂದ ರಸ್ತೆ ಮಾಡದಿದ್ದರೆ, ನಾವೇ ಚಂದಾ ಎತ್ತಿ ರಸ್ತೆ ನಿರ್ಮಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ವಿರುದ್ಧ ಸಭೆಯಲ್ಲೆ ಸಾರ್ವಜನಿಕರು ಅಕ್ರೋಶ ವ್ಯಕ್ತತಪಡಿಸಿದರು. ಇದಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು, ರಸ್ತೆಯಲ್ಲಿ ಅಪಘಾತವಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆ ಮಾಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ಡಾಂಬರೀಕರಣಗೊಳಿಸಿ ಸರಿಪಡಿಸಿ, ಜಾತ್ರೆ ನಂತರ ಶಾಶ್ವತ ಕಾಮಗಾರಿ ಕೆಲಸ ಶುರು ಮಾಡಿ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ದೇಗುಲದ ಸಮೀಪದಲ್ಲೇ ಪಾಕಿರ್ಂಗ್ ವ್ಯವಸ್ಥೆ ಮಾಡಿ: ಭಕ್ತಾಧಿಗಳಿಗೆ ಅನುಕೂಲವಾಗುವಂತೆ ದೇಗುಲದ ಸಮೀಪದಲ್ಲಿಯೇ ಪಾಕಿರ್ಂಗ್ ವ್ಯವಸ್ಥೆ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ ವರ್ಷ ದೂರದಲ್ಲಿ ಪಾಕಿರ್ಂಗ್ ವ್ಯವಸ್ಥೆ ಮಾಡಿದ್ದರಿಂದಾಗಿ ವಯೋವೃದ್ಧರು, ಮಹಿಳೆ, ಮಕ್ಕಳು, ಗರ್ಭಿಣಿಯರು ರಥೋತ್ಸವ ವೀಕ್ಷಣೆಗೆ ತೆರಳಲು ತುಂಬಾ ತೊಂದರೆ ಅನುಭವಿಸಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಈ ಬಾರಿ ದೇಗುಲದ ಸಮೀಪದಲ್ಲಿಯೇ ಪಾರ್ಕಿಗ್ ವ್ಯವಸ್ಥೆ ಮಾಡಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಬೇಕು ಎಂದರು.
ಜಾತ್ರೆ ಒಳಗಾಗಿ ಪಟ್ಟಣ ಸಂಪರ್ಕಿಸುವ ರಸ್ತೆಗಳನ್ನು ತಾತ್ಕಾಲಿಕ ಸರಿಪಡಿಸಬೇಕು. ಇದುವರೆಗೂ ಕ್ರಮಬದ್ಧವಾಗಿ ಜಾತ್ರೆ ಮಹೋತ್ಸವ ಆಯೋಜಿಸಲಾಗಿದೆ. ಕಳೆದ ಬಾರಿ ಎದುರಿಸಿದ ತೊಂದರೆಗಳನ್ನು ಈ ಬಾರಿ ಪರಿಹರಿಸಬೇಕು ಎಂದು ಸಚಿವ ಶ್ರೀರಾಮುಲು ಹೇಳಿದರು.
ರಸ್ತೆ ಗುಂಡಿ ಮುಚ್ಚಲು ಸೂಚನೆ: ರಥ ಬೀದಿ ರಸ್ತೆ ಸೇರಿದಂತೆ ಪಟ್ಟಣಕ್ಕೆ ಆಗಮಿಸುವ ಎಲ್ಲ ರಸ್ತೆ ಮಾರ್ಗಗಳಲ್ಲಿ ಬಿದ್ದಿರುವ ಗುಂಡಿಯನ್ನು ತಕ್ಷಣವೇ ಮುಚ್ಚುವ ಕೆಲಸ ಮಾಡಬೇಕು. ರಸ್ತೆಯ ಪಕ್ಕದಲ್ಲಿರುವ ಜಾಲಿಯನ್ನು ತೆರವುಗೊಳಿಸಬೇಕು, ನಗರದಾದ್ಯಂತ ಬೀದಿದೀಪದ ವ್ಯವಸ್ಥೆ ಆಗಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ತಾಕೀತು ಮಾಡಿದರು.
7 ಕಡೆ ಚೆಕ್ ಫೆÇಸ್ಟ್, ಪಾಕಿರ್ಂಗ್: ಜಾತ್ರಾ ಮಹೋತ್ಸವ ಅಂಗವಾಗಿ 7 ಕಡೆ ಚೆಕ್ ಪೆÇೀಸ್ಟ್ ಹಾಗೂ ಪಾಕಿರ್ಂಗ್ ಸ್ಥಾಪಿಸಲಾಗುವುದು. 30 ಕಡೆ ಸಿಸಿ ಟಿವಿ ಕ್ಯಾಮೆರಾ, 3 ಕಡೆ ವಾಚ್ ಟವರ್, 22 ಕಡೆ ಸಹಾಯವಾಣಿ ಕೇಂದ್ರ ಸ್ಥಾಪನೆ, ಡಿವೈಎಸ್‍ಪಿ, ಸಿಪಿಐ, ಪಿಎಸ್‍ಐ, ಕಾನ್ಸ್‍ಟೇಬಲ್ ಸೇರಿದಂತೆ 2550 ಜನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ದೇಗುಲ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page