ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ

by | 22/11/23 | ಕ್ರೈಂ


ಚಳ್ಳಕೆರೆ ನ.22 ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿದ ಬೆನ್ನಲ್ಲೇ ಹಲ್ಲೆ ಮಾಡಿದ ಗಂಡ ಸೇರಿ ಎಂಟು ಜನರ ಮೇಲೆ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನಿಂದ ಹಲ್ಲೆಗೊಳದ ಆಶಾಳ ತಂದೆ ಹನುಮಂತಪ್ಪ ಚಳ್ಳಕೆರೆ ಠಾಣೆಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆಗೆ ದೂರು ನೀಡಿದ್ದಾರೆ. ನನ್ನ ಮಗಳಾದ ಆಶಾ ಳನ್ನು ಚಳ್ಳಕೆರೆ ತಾಲೂಕು ಪರಶುರಾಂಪು ಹೋಬಳಿ ಚನ್ನಮನಾಗತಿಹಳ್ಳಿ ಗ್ರಾಮದ ಕುಮಾರಸ್ವಾಮಿ ಇಬ್ಬರು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು ಕಳೆದ 4 ವರ್ಷದ ಹಿಂದೆ ಅವರಿಬ್ಬರಿಗೆ ಸಂಬಂಧಿಕರರೂ ಸೇರಿ ಮದುವೆ ಮಾಡಿದ ಬಳಿಕೆ ಆಶಾಳು ಗಂಡನ ಮನೆಯಲ್ಲಿ, ಚನ್ನಮನಾಗತಿಹಳ್ಳಿಯಲ್ಲಿದ್ದು 6 ತಿಂಗಳವರೆಗೆ ಗಂಡ ಹೆಂಡತಿ ಅನೋನ್ಯವಾಗಿದ್ದು ನಂತರ ಗಂಡ
ಮತ್ತು ಗಂಡ ಕುಮಾರಸ್ವಾಮಿ ತಾಯಿ ಲಕ್ಷ್ಮೀದೇವಿ, ತಂದೆ ಹನುಮಂತಪ್ಪ, ಅಕ್ಕ ಲಕ್ಷ್ಮಿ, ಲಕ್ಷ್ಮೀಯ ಮಗಳು ಸುಚಿತ್ರ, ತಮ್ಮಂದಿರಾದ ಹನುಮಂತರಾಯ ಮತ್ತು ಮಂಜುನಾಥ ಹಾಗೂ ಕುಮಾರಸ್ವಾಮಿಯ ಚಿಕ್ಕಪ್ಪನಾದ ಗುಜ್ಜಾರಪ್ಪ ಇವರು ಆಶಾಳಿಗೆ ನೀನು ಓಡಿ ಬಂದವಳು ಅಂತಾ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದು ಆಶಾಳ ಶೀಲವನ್ನು ಶಂಕಿಸಿ ಮೇಲ್ಕಂಡವರೆಲ್ಲರೂ ಕೆಟ್ಟ ಮಾತುಗಳಿಂದ ಬೈದು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದು,
ಈ ಬಗ್ಗೆ ಪಂಚಾಯಿತಿ ಮಾಡಿದರೂ ಮತ್ತು ಅವರ ಸಂಬಂಧಿಕರು ಹೋಗಿ ಪಂಚಾಯಿತಿ ಮಾಡಿದ್ದರೂ ಸಹ ನಿರಂತರವಾಗಿ ಕಿರುಕುಳ ನೀಡುತ್ತಿದ್ದು ಈಗೆ 2 ವರ್ಷದ ಹಿಂದೆ ಆಶಳಾನ್ನು ಮೇಲಂಡವರೆಲ್ಲರೂ ಸೇರಿಕೊಂಡು ಅವಾಚ್ಯ ಶಬ್ದಗಳಿಂದ ಬೈದು, ಕೈಕಾಲುಗಳಿಂದ ಹೊಡೆದು ನೀನು ನಮ್ಮ ಮನೆಯಲ್ಲಿ ಇದ್ದರೆ ಸಾಯಿಸಿಬಿಡುತ್ತೇವೆಂತ ಪ್ರಾಣ ಬೆದರಿಕೆ ಹಾಕಿದ್ದರಿಂದ ತವರು ಬಂದು ನಂತರ ಬೆಂಗಳೂರಿಗೆ ಕೆಲಸಕ್ಕೆ ಹೋಗಿ ಗಂಡನ ಮೇಲೆ ಡೈವೋರ್ಸ್ ಕೇಸು ಹಾಕಿಕೊಂಡು ಚಳ್ಳಕೆರೆ ಕೊರ್ಟಿಗೆ ಹಿಯರಿಂಗ್ ಗೆಓಡಾಡಿಕೊಂಡಿದ್ದಳು,
ಕುಮಾರಸ್ವಾಮಿಯು ಆಶಾಳನ್ನು ಕೊಲೆ ಮಾಡುತ್ತೇನೆ ಅಂತಾ ಹೇಳಿಕೊಂಡು ತಿರುಗಾಡುತ್ತಿದ್ದು, ಅದೇ ರೀತಿ ಬುಧವಾರ ನನ್ನ ಮಗಳು ಕೋರ್ಟಿಗೆ ಬರುತ್ತೇನೆಂತ ಎಂದು ತಿಳಿಸಿದ್ದರಿಂದ ತಿಳಿಸಿದ್ದರಿಂದ ಚಳ್ಳಕೆರೆ ಸಾರಿಗೆ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ ಸುಮಾರು 11-15 ಗಂಟೆಗೆ ಮಗಳು ಆಶಾರವರು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ನ ಮುಂದಿನ
ರಸ್ತೆಯಲ್ಲಿ ನಡೆದುಕೊಂಡು ಬರುವಾಗ ಆಕೆಯ ಗಂಡ ಕುಮಾರಸ್ವಾಮಿ ಏಕಾಏಕಿಯಾಗಿ ನಿಲಿಸಿ, ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ ಬೇರೆಯವರ ಜೊತೆ ಅಕ್ರಮ ಸಂಭಂದ ಇಟ್ಟುಕೊಂಡಿದ್ದೀಯಾ ನಿನ್ನನ್ನು ಸಾಯಿಸಿಬಿಡುತ್ತೇನೆ ಎಂದು ಕೊಲೆ ಮಾಡುವ ಉದ್ದೇಶದಿಂದ ಅವನ ಕೈಯಲ್ಲಿದ್ದ ಮಚ್ಚಿನಿಂದ ಆಶಾಳ ತಲೆಗೆ ಹೊಡೆಯಲು ಹೋದಾಗ ಆಕೆಯ ಕೈಗಳನ್ನು ಅಡ್ಡ ಹಿಡಿದಿದ್ದ ಸ್ಥಳಕ್ಕೆ ಹೋಗುವಷ್ಟರಲ್ಲಿ , ಕುಮಾರಸ್ವಾಮಿ ಪುನಃ ಆಶಾಳ ಕೈಗಳಿಗೆ ಮತ್ತು ತಲೆಗೆ ಮಚ್ಚಿನಿಂದ ಹೊಡೆದು ರಕ್ತಗಾಯಪಡಿಸಿ ನೋಡಿ ತಪ್ಪಿಸಿಕೊಂಡು ಓಡಿ ಹೋಗುವಾಗಿರುತ್ತಾನೆ.

ತಕ್ಷಣ ಸ್ಥಳದಲ್ಲಿದ್ದ ಮಂಜುನಾಥ ಇನ್ನಿತರ ಜನರು ಸೇರಿಕೊಂಡು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದು, ಆಶಾಳ ಶೀಲವನ್ನು ಶಂಕಿಸಿ ಅವಳಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ.
ಚಳ್ಳಕೆರೆ ತನಿಖೆ ಪಿಎಸ್ ಐ ಶಿವರಾಜ್ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page