ಪೈಲಟ್ ರಹಿತ ಹಾಗೂ ಸ್ವಯಂ ಟೇಕಾನ್ ಮತ್ತು ಟೇಕಾಫ್ ನ ಹೊಸ ತಂತ್ರಜ್ಞಾನದ ಡ್ರೋನ್ ಹಾರಾಟ ಪರೀಕ್ಷೆಯನ್ನು ಡಿಆರ್‌ಡಿಒ ದ ಏರೋನಾಟಿಕಲ್ ಟೆಸ್ಟ್ರೇಂ ಜ್(ಎಟಿಆರ್)ನಲ್ಲಿ ಯಶಸ್ವಿ

by | 15/12/23 | ವಿಜ್ಞಾನ ತಂತ್ರಜ್ಞಾನ


ನಾಯಕನಹಟ್ಟಿ :
ಪೈಲಟ್ ರಹಿತ ಹಾಗೂ ಸ್ವಯಂ ಟೇಕಾನ್ ಮತ್ತು ಟೇಕಾಫ್ ನ ಹೊಸ ತಂತ್ರಜ್ಞಾನದ ಡ್ರೋನ್ ಹಾರಾಟ ಪರೀಕ್ಷೆಯನ್ನು ಗುರುವಾರ ಇಲ್ಲಿನ ಡಿಆರ್‌ಡಿಒ ದ ಏರೋನಾಟಿಕಲ್ ಟೆಸ್ಟ್ರೇಂ ಜ್(ಎಟಿಆರ್)ನಲ್ಲಿ ಯಶಸ್ವಿಯಾಗಿ ಕೈಗೊಳ್ಳಲಾಗಿದೆ.
ಇದರೊಂದಿಗೆ ಈ ತಾಂತ್ರಿಕತೆ ಪಡೆದ ಪ್ರಪಂಚದ ಕೆಲವೇ
ದೇಶಗಳಲ್ಲಿ ಭಾರತ ಸ್ಥಾನ ಗಳಿಸಿದೆ. ಈ ತಂತ್ರಜ್ಞಾನವನ್ನು
ಡಿಆರ್‌ಡಿಒ ದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಷ್‌ಮೆಂಟ್(ಎಡಿಇ)
ರೂಪುಗೊಳಿಸಿ,ಸಿದ್ಧಪಡಿಸಿದೆ. ಇದು ಮಾನವರಹಿತ ಮತ್ತು
ಬಾಲರಹಿತವಾಗಿರುವುದು ವಿಶೇಷ. ಈ ಹಿಂದಿನ ಡ್ರೋನ್‌ಗಳಲ್ಲಿ
ಡ್ರೋನ್‌ಗೆ ಲಂಭವಾಗಿ ರೆಕ್ಕೆ ಇರುತ್ತಿತ್ತು. ಆದರೆ ಈ
ಮಾದರಿಯಲ್ಲಿ ಬಾಲಕ್ಕೆ ಬದಲಾಗಿ ಬಾಣದ ರಚನೆಯಂತಿರುವ
ಪ್ಲಾಟ್‌ಫಾರA ಹೊಂದಿದೆ. ಸ್ವಯಂಚಾಲಿತ ಹಾರುವ ರೆಕ್ಕೆ
(ಅಟೊನಮಸ್ ಫ್ಲೆöÊಯಿಂಗ್ ವಿಂಗ್) ತಂತ್ರಜ್ಞಾನ ಎಂದು ಈ
ತಂತ್ರಜ್ಞಾನಕ್ಕೆ ಕರೆಯಲಾಗುವುದು.
ಈ ಡ್ರೋನ್‌ನ ಬೋರ್ಡ್ನಲ್ಲಿ ಅಳವಡಿಸಿದ ಸೆನ್ಸಾರ್ ವ್ಯವಸ್ಥೆ
ಮತ್ತು ಉಪಗ್ರಹಗಳಿಂದ ಪಡೆದುಕೊಂಡ ಮಾಹಿತಿಯನ್ನು
ಬಳಸಿಕೊಂಡು ಈ ಹಾರಾಟ ಯಶಸ್ವಿಯಾಗಿದೆ. ಈ ಡ್ರೋನ್
ಸಂಪೂರ್ಣವಾಗಿ ದೇಸಿಯವಾಗಿ ನಿರ್ಮಿಸಿರುವುದು ದೇಶದ
ಹೆಗ್ಗಳಿಕೆಗೆ ಪಾತ್ರವಾಗಿದೆ. ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ
ಭಾರತವನ್ನು ಸಿದ್ಧಪಡಿಸುವ ಪ್ರಧಾನಿಯವರ ಚಿಂತನೆ ಮತ್ತು
೭೫ ನೇ ಸ್ವಾತಂತ್ರö್ಯ ಹಬ್ಬದ ಹಿನ್ನೆಲೆಯಲ್ಲಿ ಈ ಪ್ರಯೋಗ
ಮಹತ್ವ ಪಡೆದುಕೊಂಡಿದೆ.
ಡ್ರೋನ್ ತಂತ್ರಜ್ಞಾನದಲ್ಲಿ ಪ್ರಮುಖ ಮೈಲಿಗಲ್ಲನ್ನು
ಸಾಧಿಸಿರುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ದ
ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಈ ತಂತ್ರಜ್ಞಾನವನ್ನು
ಒಳಗೊAಡ ಪ್ರಯೋಗವು ದೇಶದ ರಕ್ಷಣಾ ವ್ಯವಸ್ಥೆ
ಮತ್ತು ರಕ್ಷಣಾ ಉದ್ಯಮಕ್ಕೆ ಇದು ಹೊಸ ಹುಮ್ಮಸ್ಸು ನೀಡಿದೆ
ಎಂದು ಎಕ್ಸ್ ನಲ್ಲಿ ಹೇಳಿದ್ದಾರೆ. ಡಿಆರ್‌ಡಿಒ ದ ಛೇರ್‌ಮನ್ ಜಿ. ಸತೀಶ್ ರೆಡ್ಡಿ
ಈ ತಂತ್ರಜ್ಞಾನದ ರಚನೆ, ತಂತ್ರಜ್ಞಾನ ಮತ್ತು ಪರೀಕ್ಷಾ
ಕಾರ್ಯವನ್ನು ಕೈಗೊಂಡ ಸಿಬ್ಬಂದಿಯನ್ನು ಅಭಿನಂದಿಸಿದ್ದಾರೆ.


ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯ DRDO.

ಏರೋನಾಟಿಕಲ್ ಟೆಸ್ಟ್ ರೇಂಜ್ (ATR)ನಲ್ಲಿ ಯಶಸ್ವಿ ಪ್ರಯೋಗ.

ಸ್ಥಳೀಯ ಹೈ-ಸ್ಪೀಡ್ ಫ್ಲೈಯಿಂಗ್ ವಿಂಗ್ UAV,

ಆಟೋನಮಸ್ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್‌ನ ಹಾರಾಟದ ಪ್ರಯೋಗ ಯಶಸ್ವಿ.

ಬಾಲರಹಿತ ಸಂರಚನೆಯಲ್ಲಿರುವ ಡೆಮಾನ್ ಸ್ಟ್ರೇಟರ್ ಹಾರಾಟ ಯಶಸ್ವಿ.

ಈ ಮೂಲಕ ಫ್ಲೈಯಿಂಗ್ ವಿಂಗ್ ಕಾನ್ಫಿಗರೇಶನ್‌ನ ನಿಯಂತ್ರಣ
ಕರಗತ ಮಾಡಿಕೊಂಡ ದೇಶಗಳ ಗಣ್ಯ ಕ್ಲಬ್‌ಗೆ ಭಾರತವು ಸೇರ್ಪಡೆ.

ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡ ಡಿಆರ್ ಡಿಓ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page