ಪ್ರಸ್ತುತ ಸಮಾಜಕ್ಕೆ ಕುಟುಂಬ ಪ್ರೀತಿ ಮತ್ತು ಮಾನವೀಯ ಬೆಸೆಯುವ ಸಾಹಿತ್ಯ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ.

by | 16/01/23 | ಪುಸ್ತಕ

ಚಳ್ಳಕೆರೆ ;
ಪ್ರಸ್ತುತ ಸಮಾಜಕ್ಕೆ ಕುಟುಂಬ ಪ್ರೀತಿ ಮತ್ತು ಮಾನವೀಯ ಬೆಸೆಯುವ ಸಾಹಿತ್ಯ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ರೋಟರಿ ಬಾಲ ಭವನದಲ್ಲಿ ಭಾನುವಾರ ತನುಶ್ರೀ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ ಹಮ್ಮಿಕೊಂಡಿದ್ದ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಕವಯತ್ರಿ ಕೆ.ಆರ್. ಅನಿತಾ ಅವರ ‘ನನ್ನೊಳಗಿನ ದನಿ’ ಶುಭವಿಷ್ಣು ಸಭಾಹಿತ ಅವರ ‘ಕಂಗಳ ಬೆಳದಿಂಗಳು’ ಬಸವರಾಜ್ ಪೂಜಾರ್ ಅವರ ‘ರೈತರ ನೋವಿನ ಹನಿಗಳು’ ಕೆ.ಬಿ. ರವಿಕುಮಾರ್ ಅವರ ‘ಒಡಲಾಳ ನುಡಿಯೊಡೆದು’ ಕವನ ಸಂಕಲನಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಸಾಹಿತ್ಯ ರಚನೆಯಿಂದ ಸಾಮಾಜಿಕ ಬದಲಾವಣೆ ತರಲು ಸಾಧ್ಯ. ಸಾಮಾನ್ಯ ಜನರ ನೋವು ತನ್ನದೆನ್ನುವ ರೀತಿಯಲ್ಲಿ ಸಾಹಿತ್ಯ ಹುಟ್ಟಿಕೊಳ್ಳಬೇಕು. ಸಮಾಜದಲ್ಲಿನ ಅಸಮಾನತೆ ತೊಡೆದು ಹಾಕುವ ಮತ್ತು ಮನಶಾಂತಿಗೊಳಿಸುವ ಸೃಜನಶೀಲ ಸಾಹಿತ್ಯವನ್ನು ಸಮಾಜ ಉಳಿಸಿಕೊಳ್ಳುತ್ತದೆ ಎಂದು ಹೇಳಿದರು.
ಸಾಹಿತಿ ತಿಪ್ಪಣ್ಣ ಮರಿಕುಂಟೆ ಮಾತನಾಡಿ, ಸಮಾಜದಲ್ಲಿ ಎದುರಾಗುವ ನೋವು ದುಮ್ಮಾನಗಳಿಗೆ ಮನ ಕುಂದಬಾರದು. ತನ್ನಲ್ಲಿನ ಆತ್ಮಸ್ಥೆöÊರ್ಯವನ್ನು ಸಮಾಜಮುಖಿಯಾಗಿ ಬಲಗೊಳಿಸಿಕೊಂಡು ಸಾಧಕರಾಗಿ ಬೆಳೆಯಬೇಕು. ಸಾಹಿತ್ಯ ಅಭಿರುಚಿ ಲೋಕ ಮತ್ತು ಬದುಕನ್ನು ಪರಿಚಯಿಸುತ್ತದೆ. ಬದುಕಿನ ಗಂಭೀರ ಸಮಸ್ಯೆಗಳನ್ನು ಒಳಗಣ ್ಣನ ನೋಟದಲ್ಲಿ ಸಮದೂಗಿಸಿಕೊಳ್ಳುವ ಚಿಂತನೆ ರೂಢಿಸಿಕೊಳ್ಳಬೇಕು ಎಂದು ಯುವ ಬರಹಗಾರರಿಗೆ ಕಿವಿಮಾತು ಹೇಳಿದರು.
ತಹಸೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ತಾಲೂಕಿನ ತಳುಕಿನ ಟಿ.ಎಸ್. ವೆಂಕಣ್ಣಯ್ಯ, ತರಾಸು, ಬೆಳಗೆರೆ ಮನೆತನದ ಜಾನಕಮ್ಮ, ಕೃಷ್ಣಶಾಸ್ತಿçಗಳು ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನೆಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಯ ವಾರಸುದಾರಿಕೆಯಾಗಿ ಬರಹಗಾರರ ಮನಸ್ಸುಗಳು ಬೆಳೆಯುತ್ತಿವೆ. ಸಮಾಜದಲ್ಲಿ ಸಾಹಿತ್ಯ ಕಾರ್ಯ ಚಟುವಟಿಕೆಗಳಿಗೆ ಅವಕಾಶ ಮತ್ತು ಪ್ರೋತ್ಸಾಹ ಇರುವುದಿಲ್ಲ. ಆದರೆ, ಬದುಕಿನ ಸಮಸ್ಯೆಗಳ ನಡುವೆ ತನ್ನನ್ನು ತಾನು ಸಾಹಿತ್ಯಾಭಿರುಚಿಯಲ್ಲಿ ತೊಡಗಿ, ಬರವಣ ಗೆಯ ಅಂತಃಸತ್ವದಿAದ ಸಮಾಜ ಗುರುತಿಸುವ ರೀತಿಯಲ್ಲಿ ಆದರ್ಶ ಸಾಧಕರಾಗಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ಗಣಪತಿ ಗೋ ಚಲವಾದಿ ವಹಿಸಿಕೊಂಡಿದ್ದರು. ಕವಿ ಎಸ್.ರಾಜು ಸೂಲೇನಹಳ್ಳಿ, ಪತ್ರಕರ್ತರಾದ ಕೊಂಡ್ಲಹಳ್ಳಿ ಜಯಪ್ರಕಾಶ್, ರಾಮಾಂಜಿನೇಯ, ಶುಭವಿಷ್ಣು, ಡಾ.ಶಫೀವುಲ್ಲಾ, ಲೋಕೇಶ್ ಪಲ್ಲವಿ, ಶ್ರೀರಾಯುಲು, ಶಿವಮೂರ್ತಿ, ಚಿದಾನಂದ ಮೂರ್ತಿ, ಆರ್. ತಿಪ್ಪೇಸ್ವಾಮಿ, ರಂಗಸ್ವಾಮಿ ಮತ್ತಿತರರು ಇದ್ದರು.
ಪ್ರಶಸ್ತಿ: ಕಾರ್ಯಕ್ರಮದಲ್ಲಿ ಸಾಹಿತಿ ತಿಪ್ಪಣ್ಣ ಮರಿಕುಂಟೆ ಅವರಿಗೆ ತನುಶ್ರೀ ಜೀವ ಸಮ್ಮಾನ, ಎಂ.ಕೆ. ಶೇಖ್ ಸಾಧಕರತ್ನ, ಹಜರತ್ ಅಲಿ ಕಲಾರತ್ನ, ಅರ್ಚನಾ ಎನ್.ಪಾಟೀಲ್ ತ್ರಿವೇಣ ರತ್ನ ಪುರಸ್ಕಾರ, ಅನಂತ್ ಕುಣ ಗಲ್ ಅವರಿಗೆ ತನುಶ್ರೀ ಕಾವ್ಯರತ್ನ ನೀಡಿ ಗೌರವಿಸಲಾಯಿತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page