ಬಯಲು ಸೀಮೆಯ ದೇವರ ಹಸುಗಳಿಗೆ ಸರ್ಕಾರ ಪ್ರತ್ಯೇಕ ಮೇವು ಬ್ಯಾಂಕ್ ಸ್ಥಾಪಿಸಲಿ: ಶ್ರೀ ಜಪಾನಂದ ಸ್ವಾಮೀಜಿ ಅಗ್ರಹ

by | 05/04/24 | ಮಾತೆಂದರೆ ಇದು


ಚಳ್ಳಕೆರೆ: ರಾಜ್ಯದ ಬಯಲು ಸೀಮೆ ಪ್ರದೇಶಗಳಾದ ಪಾವಗಡ ಚಿತ್ರದುರ್ಗ ಚಳ್ಳಕೆರೆ ಜಗಳೂರು ಕೂಡ್ಲಿಗಿ ಪ್ರದೇಶಗಳು ಬರಗಾಲದಿಂದ ತತ್ತರಿಸಿದ್ದು ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ ಅದರಲ್ಲೂ ಬುಡಕಟ್ಟು ಸಂಸ್ಕೃತಿಯಲ್ಲಿ ದೇವರ ಹಸುಗಳನ್ನು ಲಾಲನೆ ಪಾಲನೆ ಮಾಡುತ್ತಿರುವ ಕಿಲಾರಿಗಳಿಗೆ ತಮ್ಮ ಹಸುಗಳನ್ನು ಸಲಹಲು ಮೇವಿಲ್ಲದೆ ಪರಿತಪಿಸುವಂತಾಗಿದ್ದು ಹಸುಗಳು ಜೀವನ್ಮರಣ ಸ್ಥಿತಿಗೆ ತಲುಪಿವೆ ಎಂದು ಪಾವಗಡದ ಶ್ರೀರಾಮಕೃಷ್ಣಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.


ನಗರದ ರೋಟರಿ ಬಾಲ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರ ಬರಪೀಡಿತ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು ಸರಿಯಾದ ನಿರ್ವಹಣೆ ಮಾಡದೆ ಜೈಲಿನಲ್ಲಿ ಕೈದಿಗಳಿಗೆ ತೂಕದ ರೀತಿ ಊಟ ವಿತರಿಸುವಂತೆ ಹಸುಗಳಿಗೆ ಮೇವು ಒದಗಿಸುತ್ತಿದ್ದು ಇದರಿಂದ ಬೇಸಿಗೆಯ ಬಿಸಿಲಿನ ಬೇಗೆ ಹಾಗೂ ಹಸಿವಿನಿಂದ ಹಸುಗಳು ಸಾವನ್ನಪ್ಪುತ್ತಿವೆ ಇನ್ನು ಬುಡಕಟ್ಟು ಸಂಸ್ಕೃತಿಯಲ್ಲಿ ದೇವರ ಹಸುಗಳನ್ನು ಸಲಹುತ್ತಿರುವ ಗೋಪಾಲಕರು ಪಾವಗಡದ ತಮ್ಮ ಆಶ್ರಮದ ಬಳಿ ಬಂದು ನೋವು ತೋಡಿಕೊಳ್ಳುತ್ತಿದ್ದಾರೆ ಇಂತಹ ಸಂದಿಗ್ಧ ಪರಿಸ್ಥಿತಿ ಇದ್ದರು ಸಹ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ನೆಪ ಹೇಳಿ ನುಣುಚಿಕೊಳ್ಳುತ್ತಿರುವುದು ಸರಿಯಲ್ಲ ಹೀಗಾಗಿ ಕಳೆದ ಜನವರಿಯಿಂದಲೂ ಚಳ್ಳಕೆರೆ ಹಾಗೂ ಕೂಡ್ಲಿಗಿ ತಾಲೂಕಿನ 40 ಹಟ್ಟಿಗಳ ದೇವರ ಹಸುಗಳಿಗೆ ಇಲ್ಲಿಯವರೆಗೆ 360 ಟನ್ ನಷ್ಟು ಮೇವನ್ನು ಸುಧಾಮೂರ್ತಿಯವರ ಮೂರ್ತಿ ಫೌಂಡೇಶನ್ ಸಹಾಯ ಹಸ್ತದ ಸಲುವಾಗಿ ಆಶ್ರಮದಿಂದ ವಿತರಿಸಲಾಗಿದೆ ಸರ್ಕಾರ ಇಂತಹ ಬೇಜವಾಬ್ದಾರಿತನದಿಂದ ಹಸುಗಳನ್ನು ಕೊಲ್ಲಲು ಹೊರಟಿದೆ ಎಂದು ಆರೋಪಿಸಿದರು.

ಪ್ರಧಾನಿಗೆ ಪತ್ರ: ಬರಗಾಲದಿಂದ ತತ್ತರಿಸಿರುವ ಬಯಲು ಸೀಮೆ ಪ್ರದೇಶಗಳ ಸ್ಥಿತಿ-ಗತಿಗಳ ಬಗ್ಗೆ ಪ್ರಧಾನಮಂತ್ರಿಯವರಿಗೆ ನಾನು  ಪತ್ರ ಬರೆದಿದ್ದು ಪ್ರಧಾನಮಂತ್ರಿಯ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೂಡಲೇ ಕ್ರಮ ತೆಗೆದುಕೊಂಡಿರುವ ಬಗ್ಗೆ ಉತ್ತರ ನೀಡುವಂತೆ ತಿಳಿಸಲಾಗಿದೆ ಆದರೆ ಅಧಿಕಾರಿಗಳು ಚುನಾವಣೆಯ ನೆಪವನ್ನು ಹೇಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತ್ಯೇಕ ಮೆವು ಬ್ಯಾಂಕ್ ಗೆ ಒತ್ತಾಯ: ಈ ವೇಳೆ ಮಾತನಾಡಿದ ಜಪಾನಂದ ಸ್ವಾಮೀಜಿ ದೇವರ ಹಸುಗಳು ಗೋಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ ಆದ್ದರಿಂದ ಪ್ರತ್ಯೇಕ ಮೇವು ಬ್ಯಾಂಕ್ ಸ್ಥಾಪಿಸಿ ಕಿಲಾರಿಗಳ ಜೀವನ ಮತ್ತು ಹಸುಗಳ ಜೀವ ರಕ್ಷಣೆ ಮಾಡಬೇಕಾಗಿದೆ ಕೂಡಲೇ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಿಲಾರಿ ಪಾಲಯ್ಯ ಮಾತನಾಡಿ ಸ್ವಾಮೀಜಿಯವರ ಸಹಾಯ ಹಸ್ತದಿಂದ ದೇವರ ಹಸುಗಳಿಗೆ ಮೇವು ದೊರೆಯುತ್ತಿದೆ ಈಗಾಗಲೇ ಬಿಸಿಲಿನ ತಾಪಕ್ಕೆ 40ಕ್ಕೂ ಹೆಚ್ಚು ದೇವರ ಹಸುಗಳು ಸಾವನ್ನಪ್ಪಿವೆ ಇದರಿಂದ ನಮ್ಮ ಬುಡಕಟ್ಟು ಸಂಸ್ಕೃತಿ ನಶಿಸುವಂತಾಗುತ್ತದೆ ಗೋಶಾಲೆ ಸ್ಥಾಪಿಸಿರುವುದು ನಾವು ವಾಸಿಸುತ್ತಿರುವ ಹಟ್ಟಿಗಳಿಂದ ಸುಮಾರು ಹತ್ತು ಕಿಲೋಮೀಟರ್ ನಷ್ಟು ದೂರವಿದ್ದು ನಮಗೆ ಸರ್ಕಾರ ನೀಡುತ್ತಿರುವ ಮೇವು ತರಲು ಸಾಧ್ಯವಾಗುತ್ತಿಲ್ಲ ಸ್ವಾಮೀಜಿಯವರ ಕೃಪೆಯಿಂದ ಇಂದು ದೇವರ ಹಸುಗಳಿಗೆ ಮೇವು ಒದಗಿಸಲಾಗುತ್ತಿದೆ ಈಗಲಾದರೂ ಸರ್ಕಾರ ತಮ್ಮ ಕಡೆ ಗಮನಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಸೇವಾಶ್ರಮದ ಸೇವಾಕರ್ತರಾದ ಸಿಪಿ ಮಹೇಶ್ ಸಿದ್ದೇಶ್ ಉಪನ್ಯಾಸಕ ಓಬಣ್ಣ ಸೇರಿದಂತೆ ಕಿಲಾರಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page